Tuesday, February 3, 2026
Tuesday, February 3, 2026

Idagunji Mahaganapati Yakshagana Mandali ಕೆರೆಮನೆ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಗೆ ವಿಶ್ವಸಂಸ್ಥೆ ಗೌರವ

Date:

Idagunji Mahaganapati Yakshagana Mandali ಸ್ವಾತಂತ್ಯ ಪೂರ್ವದಲ್ಲಿ ಅಂದರೆ 1934ರಲ್ಲಿ ಸ್ಥಾಪನೆಯಾದ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆಗೆ ಈಗ 90ನೇ ವರುಷದ ಸಂಭ್ರಮ.

ಈ ಸಮಯದಲ್ಲೇ ಸಂಸ್ಥೆಗೆ ವಿಶ್ವಸಂಸ್ಥೆಯ ಮಾನ್ಯತೆ, ಗೌರವ ಪ್ರಾಪ್ತವಾಗಿದೆ.
ಯಕ್ಷಗಾನ ಸಂಸ್ಥೆಯೊಂದಕ್ಕೆ ಈ ಮಾನ್ಯತೆ ಸಿಕ್ಕಿದ್ದು ಇದೇ ಪ್ರಥಮ. ವಿಶ್ವದ 58 ರಾಷ್ಟ್ರೀಯ ಸಂಸ್ಥೆಗಳಲ್ಲಿ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ (ರಿ) ಒಂದಾಗಿದೆ.

ಜೂನ್ ತಿಂಗಳಿನಲ್ಲಿ ಯುನೆಸ್ಕೋ ಮುಖ್ಯ ಕಚೇರಿಯಲ್ಲಿ ನಡೆದ 10ನೇ ಅಧಿವೇಶನದಲ್ಲಿ ಮಂಡಳಿಗೆ ಮಾನ್ಯತೆ ಘೋಷಿಸಲಾಗಿದೆ. ಯುನೆಸ್ಕೋ 2003ರ ಅಮೂರ್ತ ಸಾಂಸ್ಕೃತಿಕ ಪರಂಪರೆ, ಸಂರಕ್ಷಣೆ, ಆಂತರಿಕ ಸಮಿತಿಗೆ ಸಲಹೆ ಮಾಡಲು ಮಂಡಳಿ ಮಾನ್ಯತೆ ಪಡೆದಿದೆ.

Idagunji Mahaganapati Yakshagana Mandali ಯಕ್ಷರಂಗದ ಮೇರು ಕಲಾವಿದರಾದ ದಿವಂಗತ ಕೆರೆಮನೆ ಶಿವರಾಮ ಹೆಗಡೆ ಅವರಿಂದ ಸ್ಥಾಪಿತವಾದ ಸಂಸ್ಥೆ. ಯಕ್ಷ ದಿಗ್ಗಜರಾದ (ಪುತ್ರರು) ಶಂಭು ಹೆಗಡೆ, ಮಹಾಬಲ ಹೆಗಡೆ ಮತ್ತು ಗಜಾನನ ಹೆಗಡೆ ಅವರು,ಸಮರ್ಥವಾಗಿ ಮುನ್ನಡೆಸಿದರು. ಪ್ರಸ್ತುತ ಶಿವಾನಂದ ಹೆಗಡೆ ಅವರ ಮುಂದಾಳತ್ವದಲ್ಲಿ ಸಂಸ್ಥೆ ಕಲಾಸೇವೆಯಲ್ಲಿ ಮುನ್ನಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...