Wednesday, March 25, 2026
Wednesday, March 25, 2026

Idagunji Mahaganapati Yakshagana Mandali ಕೆರೆಮನೆ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಗೆ ವಿಶ್ವಸಂಸ್ಥೆ ಗೌರವ

Date:

Idagunji Mahaganapati Yakshagana Mandali ಸ್ವಾತಂತ್ಯ ಪೂರ್ವದಲ್ಲಿ ಅಂದರೆ 1934ರಲ್ಲಿ ಸ್ಥಾಪನೆಯಾದ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆಗೆ ಈಗ 90ನೇ ವರುಷದ ಸಂಭ್ರಮ.

ಈ ಸಮಯದಲ್ಲೇ ಸಂಸ್ಥೆಗೆ ವಿಶ್ವಸಂಸ್ಥೆಯ ಮಾನ್ಯತೆ, ಗೌರವ ಪ್ರಾಪ್ತವಾಗಿದೆ.
ಯಕ್ಷಗಾನ ಸಂಸ್ಥೆಯೊಂದಕ್ಕೆ ಈ ಮಾನ್ಯತೆ ಸಿಕ್ಕಿದ್ದು ಇದೇ ಪ್ರಥಮ. ವಿಶ್ವದ 58 ರಾಷ್ಟ್ರೀಯ ಸಂಸ್ಥೆಗಳಲ್ಲಿ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ (ರಿ) ಒಂದಾಗಿದೆ.

ಜೂನ್ ತಿಂಗಳಿನಲ್ಲಿ ಯುನೆಸ್ಕೋ ಮುಖ್ಯ ಕಚೇರಿಯಲ್ಲಿ ನಡೆದ 10ನೇ ಅಧಿವೇಶನದಲ್ಲಿ ಮಂಡಳಿಗೆ ಮಾನ್ಯತೆ ಘೋಷಿಸಲಾಗಿದೆ. ಯುನೆಸ್ಕೋ 2003ರ ಅಮೂರ್ತ ಸಾಂಸ್ಕೃತಿಕ ಪರಂಪರೆ, ಸಂರಕ್ಷಣೆ, ಆಂತರಿಕ ಸಮಿತಿಗೆ ಸಲಹೆ ಮಾಡಲು ಮಂಡಳಿ ಮಾನ್ಯತೆ ಪಡೆದಿದೆ.

Idagunji Mahaganapati Yakshagana Mandali ಯಕ್ಷರಂಗದ ಮೇರು ಕಲಾವಿದರಾದ ದಿವಂಗತ ಕೆರೆಮನೆ ಶಿವರಾಮ ಹೆಗಡೆ ಅವರಿಂದ ಸ್ಥಾಪಿತವಾದ ಸಂಸ್ಥೆ. ಯಕ್ಷ ದಿಗ್ಗಜರಾದ (ಪುತ್ರರು) ಶಂಭು ಹೆಗಡೆ, ಮಹಾಬಲ ಹೆಗಡೆ ಮತ್ತು ಗಜಾನನ ಹೆಗಡೆ ಅವರು,ಸಮರ್ಥವಾಗಿ ಮುನ್ನಡೆಸಿದರು. ಪ್ರಸ್ತುತ ಶಿವಾನಂದ ಹೆಗಡೆ ಅವರ ಮುಂದಾಳತ್ವದಲ್ಲಿ ಸಂಸ್ಥೆ ಕಲಾಸೇವೆಯಲ್ಲಿ ಮುನ್ನಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...