Monday, February 2, 2026
Monday, February 2, 2026

National Road Safety Month ವಾಹನ ಸವಾರರು ರಸ್ತೆ ಸುರಕ್ಷತೆ ನಿಯಮಾವಳಿ ತಿಳಿದಿರಬೇಕು- ಭೀಮನಗೌಡ ಪಾಟೀಲ್

Date:

National Road Safety Month ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಕಚೇರಿಯ ಜಂಟಿ ಸಾರಿಗೆ ಆಯುಕ್ತಾರಾದ ಭೀಮನಗೌಡ ಪಾಟೀಲ್ ಅವರು ಆರ್‌ಟಿಓ ಕಚೇರಿ ಜ್ಯೋತಿ ಬೆಳಗುವ ಮೂಲಕ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಇತ್ತೀಚೆಗೆ ಉದ್ಘಾಟಿಸಿದರು.
ಅವರು ಈ ವೇಳೆ ಮಾತನಾಡಿ, ವಾಹನ ಚಾಲನೆ ಮಾಡುವ ಪ್ರತಿಯೊಬ್ಬರು ವಾಹನ ಚಾಲನೆ ಪರವಾನಿಗೆ ಹೊಂದಿರಬೇಕು. ವಾಹನ ಚಾಲನೆ ವೇಳೆ ರಸ್ತೆ ಸುರಕ್ಷತಾ ನಿಯಮಾವಳಿಗಳನ್ನು ಪಾಲಿಸಬೇಕು. ದ್ವಿಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುವಾಗ ಸೇಫ್ಟಿ ಹಾರ್ನೆಸ್‌ನ್ನು ಬಳಸಬೇಕು. ನಾಲ್ಕು ಚಕ್ರ ವಾಹನ ಚಾಲಕರು ಸೀಟ್ ಬೆಲ್ಟ್ ಹಾಕಿಕೊಳ್ಳಬೇಕು ಎಂದು ತಿಳಿಸಿದರು.
National Road Safety Month ಇದೇ ವೇಳೆ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಿ ಹಂಚಲಾಯಿತು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಮುರಗೇಂದ್ರ ಬಿ ಶಿರೋಳಕರ, ಹಿರಿಯ ಮೋಟಾರ್ ವಾಹನ ನಿರೀಕ್ಷಕರಾದ ಮಲ್ಲೇಶಪ್ಪ, ಮೋಟಾರ್ ವಾಹನ ನಿರೀಕ್ಷಕರಾದ ಮಂಜುನಾಥ್, ಕಚೇರಿ ಅಧೀಕ್ಷಕರಾದ ರಮ್ಯಾ, ಸಿಬ್ಬಂದಿ ಡಿ.ಮೋಹನ್ ಕುಮಾರ್ ಹಾಗೂ ಚಾಲನಾ ತರಬೇತಿ ಶಾಲೆಯ ಪ್ರಾಂಶುಪಾಲರು, ವಕೀಲರು, ಸಾರ್ವಜನಿಕರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...