Saturday, April 26, 2025
Saturday, April 26, 2025

Sorab News ಹಸುಗಳ ಕೆಚ್ಚಲು ಕೊಯ್ದು ವಿಕೃತಿ‌ ಮೆರೆದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

Date:

Sorab News ಹಸುಗಳ ಕೆಚ್ಚಲು ಕೊಯ್ದು, ಹಲ್ಲೆ ನಡೆಸಿ ವಿಕೃತಿ ಮೆರೆದವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ತಾಲೂಕು ಗೋ ಸಂರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್. ಚಿದಾನಂದ ಗೌಡ ಆಗ್ರಹಿಸಿದರು.
ಪಟ್ಟಣದ ತಾಲೂಕು ಕಚೇರಿ ಮುಂಭಾಗ ಗೋ ಸಂರಕ್ಷಣಾ ಹೋರಾಟ ಸಮಿತಿ, ರಾಷ್ಟç ಭಕ್ತ ಬಳಗ ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ಹಮ್ಮಿಕೊಂಡ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.
ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆ ಪೂಜ್ಯನೀಯ ಸ್ಥಾನವಿದೆ. ಬಹು ಸಂಖ್ಯಾತ ಹಿಂದೂಗಳು ಗೋವನ್ನು ತಾಯಿ ಎಂದು ಆರಾಧಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕೋಯ್ದಿರುವುದು ಹೀನ ಕೃತ್ಯವಾಗಿದೆ. ಅಲ್ಲದೇ, ಹೊನ್ನವರ ತಾಲೂಕಿನ ಸಲ್ಕೋಡು ಗ್ರಾಮದಲ್ಲಿಯೂ ಇಂತಹದೇ ಘಟನೆ ಮರುಕಳಿಸಿದೆ. ಇದು ನಾಗರೀಕ ಸಮಾಜ ತಲ್ಲೆ ತಗ್ಗಿಸುವ ಸಂಗತಿ. ಸರ್ಕಾರ ಯಾವುದೇ ಪಕ್ಷಪಾತವಿಲ್ಲದೇ, ಇಂತಹ ಮತೀಯವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳಗಳ್ಳಬೇಕು ಎಂದು ಆಗ್ರಹಿಸಿದರು.
ರಾಷ್ಟç ಭಕ್ತ ಬಳಗದ ತಾಲೂಕು ಸಂಚಾಲಕ ಕೆ. ಪ್ರಭಾಕರ ರಾಯ್ಕರ್ ಮಾತನಾಡಿ, ಹುಟ್ಟಿದ ಮಗು ಒಂಬತ್ತು ತಿಂಗಳು ತಾಯಿಯ ಹಾಲು ಕುಡಿದರೆ, ಬದುಕಿರುವ ತನಕ ಗೋ ತಾಯಿಯ ಹಾಲನ್ನು ಕುಡಿಯುತ್ತೇವೆ. ಇಂತಹ ಗೋವಿನ ಮೇಲೆ ವಿದ್ವಂಸಕ ಕೃತ್ಯ ಎಸಗಿದವರು ಮನುಷ್ಯರಾಗಿರಲು ಸಾಧ್ಯವೇ ಇಲ್ಲ. ಅಂತಹ ಕಿಡಿಗೇಡಿಗಳಿಗೆ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಹಿಂದೂ ಧರ್ಮಕ್ಕೆ ಅಪಮಾನ ಎಸಗಿದವರಿಗೆ ನಿರ್ದಾಕ್ಷಿಣ್ಯ ಕ್ರಮ ತಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
Sorab News ನಂತರ ತಹಶೀಲ್ದಾರ್ ಮಂಜುಳಾ ಹೆಗಡಾಳ್ ಅವರ ಮುಖೇನ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಗೋ ಸಂರಕ್ಷಣಾ ಹೋರಾಟ ಸಮಿತಿ ಕಾರ್ಯದರ್ಶಿ ಶರತ್ ಸ್ವಾಮಿ, ಚಿಕ್ಕಶಕುನ ಗ್ರಾಮ ಸಮಿತಿ ಅಧ್ಯಕ್ಷ ಬಸವರಾಜ್, ಸೀಗೇಹಳ್ಳಿ ಗ್ರಾಮ ಸಮಿತಿ ಅಧ್ಯಕ್ಷ ಕೆರಿಯಪ್ಪ, ಬಾನ್ಕುಳಿ ಮಠದ ಉಪಾಧ್ಯಕ್ಷ ರಾಜು ಹೆಗಡೆ ಹೊಸಬಾಳೆ, ಗಣೇಶ್ ಓಂ ಪಿಕಲ್ಸ್, ಯಲ್ಲಪ್ಪ ಹಿರೇಶಕುನ, ಹುಚ್ಚಪ್ಪ, ಅಣ್ಣಾಜಿ ಗೌಡ, ಗಣಪತಿ, ಶಿವಪ್ಪ, ಸೋಮಪ್ಪ ಸೇರಿದಂತೆ ಇತರರಿದ್ದರು.

೨೧ ಸೊರಬ ೦೧: ಸೊರಬ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಗೋ ಸಂರಕ್ಷಣಾ ಹೋರಾಟ ಸಮಿತಿ, ರಾಷ್ಟç ಭಕ್ತ ಬಳಗ ಸೇರಿದಂತೆ ವಿವಿಧ ಸಂಘಟನೆಗಳ ವತಿಯಿಂದ ಗೋವಿನ ಮೇಲೆ ವಿಕೃತಿ ಮೆರೆದವರ ಮೇಲೆ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Defense University ಪಠ್ಯಕ್ರಮದ ರಚನೆ & ಕೌಶಲ್ಯಾಭಿವೃದ್ಧಿಗೆಒತ್ತು-ರಾಷ್ಟ್ರೀಯ ರಕ್ಷಾ ವಿವಿಯಲ್ಲಿ ವೃತ್ತಿ ಸಮಾಲೋಚನೆ ಯಶಸ್ವಿ

National Defense University ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (RRU), ಶಿವಮೊಗ್ಗ ಕ್ಯಾಂಪಸ್ನಲ್ಲಿ,...

Digital library ಹೊಸ ವಿಷಯ ಕಲಿಕೆ ಸಂಗಡ ಮಕ್ಕಳು ದೈಹಿಕ & ಮಾನಸಿಕ ದೃಢತೆ ಸಾಧಿಸಬೇಕು- ವೀರೇಶ್ ಕ್ಯಾತನಕೊಪ್ಪ

Digital library ಮಕ್ಕಳಿಗೆ ಬೇಸಿಗೆ ಶಿಬಿರಗಳು ಅತ್ಯಂತ ಅವಶ್ಯಕ ಎಂದು ಸೂಗುರು...

CM siddharamaih ಪಹಲ್ಗಾಮ್ ದುರ್ಘಟನೆ‌ ಗುಪ್ತಚರ ವ್ಯವಸ್ಥೆಯ ವೈಫಲ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

CM siddharamaih ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ...