Wednesday, December 17, 2025
Wednesday, December 17, 2025

Karnataka Cashew Development Corporation Ltd. ರಾಜ್ಯದ ಕನಿಷ್ಟ 30 ಪಟ್ಟಣಗಳಲ್ಲಿ ಗೋಡಂಬಿ ಮಾರುಕಟ್ಟೆ ಬೆಳೆಸುವ ಪ್ರಸ್ತಾಪವಿದೆ-ಎಸ್ .ಅನಂತಕೃಷ್ಣರಾವ್

Date:

Karnataka Cashew Development Corporation Ltd. ಗೇರುಬೀಜ ಉದ್ಯಮದಲ್ಲಿ ಕರ್ನಾಟಕ ರಾಜ್ಯವನ್ನು ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿ ನಿಲ್ಲಿಸುವ ಮುಖಾಂತರ ದೇಶದ ಆರ್ಥಿಕತೆಗೆ ನಮ್ಮ ಕೊಡುಗೆ ನೀಡಬೇಕು ಎಂದು ಕರ್ನಾಟಕ ಗೋಂಡಬಿ ಉತ್ಪಾದಕರ ಸಂಘದ (ಕೆಸಿಎಂಎ) ಅಧ್ಯಕ್ಷ ಎಸ್.ಅನಂತ ಕೃಷ್ಣರಾವ್ ಹೇಳಿದರು.
ಕರ್ನಾಟಕ ಗೇರುಬೀಜ ಸಂಸ್ಕರಣೆಯ ಶತಮಾನೋತ್ಸವ ಪೂರೈಸಿದ ಸಂದರ್ಭದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಕರ್ನಾಟಕ ಗೋಡಂಬಿ ಉತ್ಪಾದಕರ ಸಂಘದ ವತಿಯಿಂದ ಆಯೋಜಿಸಿದ್ದ ಗೇರುಬೀಜ ಬೆಳೆ ಪ್ರಚಾರ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಕರ್ನಾಟಕದ ಕನಿಷ್ಟ 30 ಸಣ್ಣ ಹಾಗೂ ದೊಡ್ಡ ಪಟ್ಟಣಗಳಲ್ಲಿ ಗೋಡಂಬಿ ಮಾರುಕಟ್ಟೆ ಬೆಳೆಸುವ ಬಗ್ಗೆ ಆಲೋಚನೆ ಇದೆ. ದೇಶದ ಆರ್ಥಿಕತೆಗೆ ಗೇರು ಬೀಜ ಉದ್ಯಮ ಅತಿ ಹೆಚ್ಚಿನ ಕೊಡುಗೆ ನೀಡಲು ಬದ್ಧವಾಗಿದೆ ಎಂದು ತಿಳಿಸಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ಗೇರುಬೀಜ ಉದ್ಯಮದ ಮಾರುಕಟ್ಟೆ ವಿಸ್ತರಣೆಗೆ ಸಂಘದ ಬೆಂಬಲ ಮತ್ತು ಪ್ರೋತ್ಸಾಹವು ಸದಾ ಇರುತ್ತದೆ. ಆಯುರ್ವೇದದಲ್ಲಿ ಹೇಳಿರುವಂತೆ ಗೋಡಂಬಿಯ ನಿಯಮಿತ ಸೇವನೆಯಿಂದ ಅದರಲ್ಲಿರುವ ಹೆಚ್ಚಿನ ವಿಟಮಿನ್ ಮತ್ತು ಪೋಟಾಸಿಯಂಗಳಿಂದ ಮೂಳೆಗಳು ಸಶಕ್ತವಾಗಿ, ಚರ್ಮ, ಕೂದಲಿನ ಆರೋಗ್ಯವು ಉತ್ತಮವಾಗುತ್ತದೆ ಎಂದು ಹೇಳಿದರು.
Karnataka Cashew Development Corporation Ltd. ಗೋಡಂಬಿ ಸಂಸ್ಕರಣೆಯಿಂದ ಅನೇಕ ಜನರಿಗೆ ವಿಶೇಷವಾಗಿ ಮಹಿಳೆಯರಿಗೆ ಉದ್ಯೋಗ ಅವಕಾಶ ಹೆಚ್ಚುತ್ತದೆ. ದೇಶದ ಗ್ರಾಮೀಣ ಆರ್ಥಿಕತೆಗೆ ಗೇರು ಉದ್ಯಮ ಗಣನೀಯ ಕೊಡುಗೆ ನೀಡುತ್ತಿದೆ. ಉದ್ಯಮದ ಎಲ್ಲಾ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಸಂಘವು ಬದ್ಧವಾಗಿದೆ ಎಂದು ತಿಳಿಸಿದರು.
ಶಿವಮೊಗ್ಗ ಹೋಟೆಲ್ ಮಾಲೀಕರ ಅಸೋಸಿಯೇಷನ್ ಅಧ್ಯಕ್ಷ ಯು.ಎಂ.ಶಂಕರನಾರಾಯಣ ಹೊಳ್ಳ ಮಾತನಾಡಿದರು. ನಂತರ ಸಭೆಯಲ್ಲಿ ಹಾಜರಿದ್ದ ಉದ್ಯಮದಾರರ ಪ್ರಶ್ನೆಗಳಿಗೆ ಕರ್ನಾಟಕ ಗೋಡಂಬಿ ಉತ್ಪಾದಕರ ಸಂಘದ ಅಧ್ಯಕ್ಷ ಎಸ್.ಅನಂತ ಕೃಷ್ಣರಾವ್ ಉತ್ತರಿಸಿದರು.
ಕೆಸಿಎಂಎ ಉಪಾಧ್ಯಕ್ಷ ತುಕಾರಾಂ ಪ್ರಭು, ಕಾರ್ಯದರ್ಶಿ ಅಮಿತ್ ಪೈ, ಖಜಾಂಚಿ ಗಣೇಶ್ ಕಾಮತ್, ಜಂಟಿ ಕಾರ್ಯದರ್ಶಿ ಸನತ್ ಪೈ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ಗಣೇಶ್ ಅಂಗಡಿ, ಪ್ರದೀಪ್ ಯಲಿ, ಶರತ್ ಮತ್ತಿತರರು ಭಾಗವಹಿಸಿದ್ದರು.
ಗೋಡಂಬಿ ಬೆಳೆ ಪ್ರಚಾರ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಗೇರುಬೀಜ ಉದ್ಯಮದಾರರು, ಹೋಟೆಲ್, ಬೇಕರಿ, ಐಸ್‌ಕ್ರೀಂ ಉದ್ಯಮದಾರರು, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...