Sunday, August 2, 2026
Sunday, August 2, 2026

CM Siddharamaiah ಬಿಜೆಪಿ‌ ನೇತೃತ್ವದ ಕೇಂದ್ರ ಸರ್ಕಾರವು ಭದ್ರಾ ಯೋಜನೆಗೆ ₹5,300 ಕೋಟಿ ಬಿಡುಗಡೆ ಮಾಡಲಿ- ಸಿದ್ಧರಾಮಯ್ಯ

Date:

CM Siddharamaiah ನೀರಾವರಿಗೆ ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, 1,274 ಕೋಟಿ ರೂಪಾಯಿ ವೆಚ್ಚದಲ್ಲಿ ಇಲ್ಲಿಗೆ ಮತ್ತೊಂದು ಯೋಜನೆಯನ್ನು ಸರ್ಕಾರ ಸಿದ್ಧಪಡಿಸಿದೆ. ಈ ಯೋಜನೆ ಜಾರಿಯಾದರೆ ಈ ಭಾಗದ ಕಟ್ಟ ಕಡೆಯ ಜಮೀನಿಗೂ ನೀರು ಒದಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಾಣಿ ವಿಲಾಸ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಸಮಾರಂಭದಲ್ಲಿ ಮಾತನಾಡಿದರು.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡುವುದಾಗಿ ಕಾರಜೋಳ ಅವರು ಬರೀ ಬಾಯಿ ಮಾತಲ್ಲಿ ಹೇಳಿ, ಬಳಿಕ ವಂಚಿಸಿದರು. ಈ ಯೋಜನೆಗೆ 5,300 ಕೋಟಿ ರೂಪಾಯಿ ಕೊಡುವುದಾಗಿ ಕೇಂದ್ರ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದರು. ಆದರೆ ನಯಾಪೈಸೆ ಬಿಡುಗಡೆಗೊಳಿಸದೆ ಈ ಭಾಗದ ಜನ ಸಮುದಾಯಕ್ಕೆ ಗೋಂವಿಂದ ಕಾರಜೋಳ ಮತ್ತು ಕೇಂದ್ರ ಸರ್ಕಾರ ವಂಚಿಸಿದೆ ಎಂದರು.

ಇನ್ನಾದರೂ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಜೊತೆ ಚರ್ಚಿಸಿ ಕೊಟ್ಟ ಮಾತಿನಂತೆ 5,300 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿಸಿಕೊಡಿ. ಬಿಜೆಪಿ ಕೊಟ್ಟ ಮಾತಿಗೆ ವಂಚಿಸುತ್ತದೆ. ನಾವು ಕೊಟ್ಟ ಮಾತು ಈಡೇರಿಸಿ ನುಡಿದಂತೆ ನಡೆಯುತ್ತಿದ್ದೇವೆ.
ಚುನಾವಣೆ ವೇಳೆ ಕೊಟ್ಟ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡಿ ರಾಜ್ಯದ ಬಡವರು, ಮಧ್ಯಮ ವರ್ಗದವರು ಸೇರಿ ಎಲ್ಲಾ ಜನ ಸಮುದಾಯಗಳ ನಂಬಿಕೆ ಉಳಿಸಿಕೊಂಡಿದ್ದೇವೆ. ಇದೇ ನಮಗೂ ಬಿಜೆಪಿಗೂ ಇರುವ ವ್ಯತ್ಯಾಸ ಎಂದು ತಿಳಿಸಿದರು.

CM Siddharamaiah ವಾಣಿ ವಿಲಾಸ ಜಲಾಶಯ ಕೋಡಿ ಬಿದ್ದಿದ್ದು ಸರ್ಕಾರದಿಂದ ಬಾಗಿನ ಅರ್ಪಿಸಿ, ಗಂಗಾಪೂಜೆ ನೆರವೇರಿಸಿದ್ದೇವೆ. 115 ವರ್ಷಗಳ ಇತಿಹಾಸ ಇರುವ, ರಾಜ್ಯದಲ್ಲಿ ನಿರ್ಮಾಣ ಆದ ಮೊದಲ ಜಲಾಶಯ ಇದಾಗಿದ್ದು ಮೂರನೇ ಬಾರಿ ಕೋಡಿ ಬಿದ್ದಿದೆ.ಅಂದಿನ‌ ಮಹಾರಾಣಿ ಅಮ್ಮಣ್ಣಿ ತಾಯಿಯವರು ತಮ್ಮ ಒಡವೆಗಳನ್ನು ಮಾರಿ 45 ಲಕ್ಷ ರೂಪಾಯಿ ಖರ್ಚು ಮಾಡಿ ಈ ಜಲಾಶಯ ನಿರ್ಮಿಸಿದ್ದಾರೆ. ಇದು 30 ಸಾವಿರ ಎಕರೆ ಕೃಷಿ ಭೂಮಿಗೆ ನೀರು ಒದಗಿಸುತ್ತಿದೆ. ಹೀಗಾಗಿ ರಾಣಿ ಅಮ್ಮಣ್ಣಿಯವರನ್ನು ನಾವು ಸ್ಮರಿಸುತ್ತೇವೆ, ಧನ್ಯವಾದ ಅರ್ಪಿಸುತ್ತೇವೆ ಎಂದು ಹೇಳಿದರು.

    LEAVE A REPLY

    Please enter your comment!
    Please enter your name here

    NEWSLETTER - Sign Up for Free E-News

    Popular

    More like this
    Related

    B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

    B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

    S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

    S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

    Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

    Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

    B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

    B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...