Monday, February 2, 2026
Monday, February 2, 2026

Owners and Traders Association ಹೋಟೆಲ್ ಮಾಲೀಕರ ಸಂಘಟನೆ ಅಧ್ಯಕ್ಷರಾಗಿ‌ ಕೆ.ಬಸವರಾಜ್‌ ಆಯ್ಕೆ

Date:

Owners and Traders Association ಹೋಟೆಲ್ ಮಾಲೀಕರ ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಕೆ.ಬಸವರಾಜ್ ಅವರನ್ನು ಶಿವಮೊಗ್ಗ ನಗರದ ಗಾಂಧಿಬಜಾರ್ ಕಟ್ಟಡ ಮಾಲೀಕರು ಹಾಗೂ ವರ್ತಕರ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಗಾಂಧಿಬಜಾರ್ ಕಟ್ಟಡ ಮಾಲೀಕರು ಹಾಗೂ ವರ್ತಕರ ಸಂಘದ ಅಧ್ಯಕ್ಷ ಎ.ಎಚ್.ಸುನೀಲ್ ಮಾತನಾಡಿ, ಹೋಟೆಲ್ ನಡೆಸುತ್ತಿರುವ ಎಲ್ಲರೂ ಒಟ್ಟುಗೂಡಿ ಸಂಘ ಮುನ್ನಡೆಸುತ್ತಿರುವುದು ಒಳ್ಳೆಯ ಬೆಳವಣಿಗೆ. ಹೋಟೆಲ್ ನಡೆಸುವ ಎಲ್ಲರಿಗೂ ಬೆಂಬಲವಾಗಿ ಸಂಘವು ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಸಂಘಟನೆ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ನೂತನ ಆಡಳಿತ ಮಂಡಳಿಯು ಕಾರ್ಯೋನ್ಮುಖವಾಗಬೇಕು. ಹೋಟೆಲ್ ಮಾಲೀಕರ ಬಳಕೆದಾರರ ಸಹಕಾರ ಸಂಘದಲ್ಲಿ ಸದಸ್ಯರ ಸಂಖ್ಯೆ ಹೆಚ್ಚಿಸಿಕೊಳ್ಳುವ ಮೂಲಕ ಸಂಘದ ವ್ಯಾಪ್ತಿ ಹೆಚ್ಚಿಸಬೇಕು. ಹೋಟೆಲ್ ನಡೆಸುವವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಕೆಲಸವಾಗಬೇಕು ಎಂದು ತಿಳಿಸಿದರು.

Owners and Traders Association ಗಾಂಧಿಬಜಾರ್ ಕಟ್ಟಡ ಮಾಲೀಕರು ಹಾಗೂ ವರ್ತಕರ ಸಂಘದ ಪ್ರಧಾನ ಕಾರ್ಯದರ್ಶಿ ನಟರಾಜ್ ಮಾತನಾಡಿ, ಸ್ವಾಗತ್ ಕ್ಯಾಂಟೀನ್ ಬಸಣ್ಣ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು ಸಂತೋಷದ ಸಂಗತಿ. ಸಂಘಟನೆ ಬಲ ಹೆಚ್ಚಿಸಿಕೊಂಡು ಕಾರ್ಯ ನಿರ್ವಹಿಸಲಿ ಎಂದು ಶುಭ ಕೋರಿದರು.

ಗಾಂಧಿಬಜಾರ್ ಕಟ್ಟಡ ಮಾಲೀಕರು ಹಾಗೂ ವರ್ತಕರ ಸಂಘದ ಜಿ.ಮಧು, ಪ್ರಭಾಕರ ಗೌಡ, ಆಶೀಸ್ ಜಿ.ಶೇಟ್, ಸದಾನಂದ, ಗಣೇಶ್, ಸುನೀಲ್‌ಕುಮಾರ್, ರಂಗನಾಥ್, ಶ್ರೀನಿವಾಸ್, ಜನ್ನ, ರಾಜು, ಬಾಬು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...