Tuesday, March 24, 2026
Tuesday, March 24, 2026

Rotary Club Shimoga ರೋಟರಿ 3182 ಜಿಲ್ಲಾ ಗವರ್ನರ್ ಆಗಿ ವಸಂತ ಹೋಬಳಿದಾರ್ ಆಯ್ಕೆ

Date:

Rotary Club Shimoga ರೋಟರಿ ಜಿಲ್ಲೆ 3182 ರ 2027-28 ನೇ ಸಾಲಿನ ಜಿಲ್ಲಾ ಗವರ್ನರ್ ಆಗಿ ಶಿವಮೊಗ್ಗದ ರೊ.ವಸಂತ್ ಹೋಬಳಿದಾರ್ ಪ್ರಚಂಡ ಬಹುಮತದಿಂದ ಜಯಗಳಿಸಿದ್ದು ಶಿವಮೊಗ್ಗದ ಎಲ್ಲಾ ರೋಟರಿ ಕ್ಲಬ್ ಗಳ ಸದಸ್ಯರು ಅಭಿನಂದಿಸಿದ್ದಾರೆ.

ಇತ್ತೀಚೆಗೆ ಉಡುಪಿಯಲ್ಲಿ ಜರುಗಿದ ನವೋತ್ಸಾಹ ಜಿಲ್ಲಾ ಸಮ್ಮೇಳನದಲ್ಲಿ ನಡೆದ ಜಿಲ್ಲಾ ಗವರ್ನರ್ ಚುನಾವಣೆಯಲ್ಲಿ ಚಲಾವಣೆಯಾದ 129 ಮತಗಳ ಪೈಕಿ 121 ಮತಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಜಯಗಳಿಸಿದ್ದಾರೆ.

Rotary Club Shimoga ರೋಟರಿ ಶಿವಮೊಗ್ಗ ಪೂರ್ವದ ಮಾಜಿ ಅಧ್ಯಕ್ಷರು, ವಲಯ 11 ರ ಮಾಜಿ ಅಸಿಸ್ಟಂಟ್ ಗವರ್ನರ್, ಶಿವಮೊಗ್ಗ ಜಿಲ್ಲಾ ಛೇಂಬರ್ ಆಫ್ ಕಾಮರ್ಸ್ ನ ಕಾರ್ಯದರ್ಶಿ, ರೆಡ್ ಕ್ರಾಸ್ ಸೊಸೈಟಿಯ ನಿರ್ದೇಶಕ, ಯೂತ್ ರೆಡ್ಕ್ರಾಸ್ ನ ರಾಜ್ಯ ಉಪಸಮಿತಿಯ ಸದಸ್ಯ, ಕುವೆಂಪು ವಿಶ್ವವಿದ್ಯಾಲಯ ದ ಆಂಟಿ – ರಾಗಿಂಗ್ ಸಮಿತಿಯ ಸದಸ್ಯರು, ಸಿಮ್ಸ್ ವೈದ್ಯಕೀಯ ಮಹಾ ಸಂಸ್ಥೆಯ ಎಥಿಕ್ಸ್ ಸಮಿತಿಯ ಸದಸ್ಯರು, ರೋಟರಿ ಯ RMB ಫೆಲೋಷಿಪ್ ಗ್ರೂಪ್ ನ ಶಿವಮೊಗ್ಗ ಚಾಪ್ಟರ್ ನ ಸಂಸ್ಥಾಪಕ ಅಧ್ಯಕ್ಷರು, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉನ್ನತ ಕೌಶಲ್ಯಾಭಿವೃದ್ಧಿ ಕೇಂದ್ರದ ಚೇರ್ಮನ್, ಶಿವಮೊಗ್ಗ ಜಿಲ್ಲಾ ಭಗೀರಥ ಸಹಕಾರ ಸಂಘದ ಉಪಾಧ್ಯಕ್ಷ, ಭಗೀರಥ ಜಿಲ್ಲಾ ನೌಕರರ ಮತ್ತು ವೃತ್ತಿಪರರ ಸಂಘದ ಪ್ರಧಾನ ಕಾರ್ಯದರ್ಶಿ, ಶಿವಮೊಗ್ಗ ಜಿಲ್ಲಾ ಹಿಂದೂ ಎಕನಾಮಿಕ್ ಫೋರಂನ ಸಂಸ್ಥಾಪಕ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿರುವ ನೇರ ನಡೆ ನುಡಿಯ ವ್ಯಕ್ತಿತ್ವದ ಉತ್ಸಾಹಿ ಸಮಾಜ. ಸೇವಕರಾದ ವಸಂತ್ ಹೋಬಳಿದಾರ್ ರವರು ಐತಿಹಾಸಿಕ ಬಹುಮತದಿಂದ ಜಯಗಳಿಸಿರುವುದು ರೋಟರಿ ಶಿವಮೊಗ್ಗ ಪೂರ್ವಕ್ಕೆ ಹೆಮ್ಮೆ ತಂದಿದೆ, ಅವರ ಅವಧಿಯಲ್ಲಿ ಇತಿಹಾಸ ನಿರ್ಮಿಸುವಂತಹ ಸಾಮಾಜಿಕ ಸೇವಾ ಕಾರ್ಯಗಳು ಜರುಗಲಿ ಎಂದು ರೋಟರಿ ಶಿವಮೊಗ್ಗ ಪೂರ್ವದ ಮಾಜಿ ಅಸಿಸ್ಟಂಟ್ ಗವರ್ನರ್ ಗಳಾದ ಜಿ.ವಿಜಯಕುಮಾರ್, ಡಾ.ಗುಡದಪ್ಪ ಕಸಬಿ, ಚಂದ್ರಹಾಸ ರಾಯ್ಕರ್, ಎ ಟಿ ಸುಬ್ಬೇಗೌಡ ಹಾಗೂ ಅಧ್ಯಕ್ಷ ಅರುಣ್ ದೀಕ್ಷಿತ್, ಕಾರ್ಯದರ್ಶಿ ಶಶಿಕಾಂತ್ ನಾಡಿಗ್ ಹಾಗು ಮಾಜಿ ಅಧ್ಯಕ್ಷರುಗಳಾದ ಎನ್ ಹೆಚ್ ಶ್ರೀಕಾಂತ್, ಮಹೇಶ್ ಆಲೆಮನೆ, ಮಂಜುನಾಥ್ ಕದಂ, ಸತೀಶ್ಚಂದ್ರ, ಸುಮತಿ, ಅಭಿಷೇಕ್ ಮೋಹನ್, ರವಿ ಕೋಟೋಜಿ, ಕಡಿದಾಳ್ ಗೋಪಾಲ್, ಆಧಿಮೂರ್ತಿ, ಕೆ ಬಿ ರವಿಶಂಕರ್, ಪ್ರತಾಪ್ ಎಂ ಎಲ್ ಹಾಗು ಕಿಶೋರ್ ಕುಮಾರ್, ಸಿ ಕೆ ವಿಜಯಕುಮಾರ್,ಇನ್ನರ್ ವೀಲ್. ಮಾಜಿ ಅಧ್ಯಕ್ಷರು. ಬಿಂದು ವಿಜಯ್ ಕುಮಾರ್ ಮುಂತಾದವರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...