Wednesday, December 17, 2025
Wednesday, December 17, 2025

Red Cross Sanjeevini Blood Bank ರಕ್ತದಾನಕ್ಕಿಂತ ಮಿಗಿಲಾದ ದಾನವಿಲ್ಲ- ವಸಂತ ಹೋಬಳಿದಾರ್

Date:

Red Cross Sanjeevini Blood Bank ಜನ್ಮದಿನವನ್ನು ಸಮಾಜಮುಖಿಯಾಗಿ ಆಚರಿಸುವ ಮೂಲಕ ಅರ್ಥಪೂರ್ಣ ಸೇವಾ ಚಟುವಟಿಕೆಗಳನ್ನು ಮಾಡಬೇಕು ಎಂದು ರೋಟರಿ ಜಿಲ್ಲೆ ನಿಯೋಜಿತ ಗವರ್ನರ್ ವಸಂತ್ ಹೋಬಳಿದಾರ್ ಹೇಳಿದರು.
ಉಡುಪಿಯ ಶ್ರೀ ಕೃಷ್ಣ ಮಠದ ಆವರಣದ ಮಥುರಾ ಕಂಫರ್ಟ್ಸ್ನಲ್ಲಿ ರೋಟರಿ ಶಿವಮೊಗ್ಗ
ಮಿಡ್ ಟೌನ್ ಕೆ.ಕೃಷ್ಣಮೂರ್ತಿ ಅಭಿಮಾನಿ ಬಳಗ, ಯಶೋಧ ಆಟೋ ಯೂನಿಯನ್, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್, ರಕ್ತ ನಿಧಿ ವಿಭಾಗ ಕೆಎಂಸಿ ಮಣಿಪಾಲದ ಸಂಯುಕ್ತ ಆಶ್ರಯದಲ್ಲಿ ದಾನಿ, ಸಮಾಜ ಸೇವಕ ಕೆ.ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ ಅವರ ಜನ್ಮದಿನದ ಪ್ರಯುಕ್ತ ಜಿಲ್ಲಾಡಳಿತ ಉಡುಪಿ ಸಹಕಾರದೊಂದಿಗೆ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ರಕ್ತದಾನ ಒಂದು ಶ್ರೇಷ್ಠವಾದ ದಾನ. ರಕ್ತದಾನಕ್ಕಿಂತ ಮಿಗಿಲಾದ ದಾನ ಬೇರೊಂದಿಲ್ಲ. ರಕ್ತದ ಸರಬರಾಜು ಇಲ್ಲದೆ ಸಾಕಷ್ಟು ಜನ ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ ರಕ್ತದ ಕೊರತೆ ನೀಗಿಸಲು ರಕ್ತದಾನ ಒಂದೇ ಮಾರ್ಗ ಎಂದು ತಿಳಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ರಕ್ತದಾನದಿಂದ ನಾವು ಸದಾ ಲವಲವಿಕೆಯಿಂದ ಇರುವುದರ ಜತೆಗೆ ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಾಗಿ ಇರುತ್ತೇವೆ. ಹೃದಯಘಾತದ ಸಮಸ್ಯೆಯಿಂದ ದೂರ ಇರುತ್ತೇವೆ ಎಂದರು.
Red Cross Sanjeevini Blood Bank ಡಾ. ಗುಡದಪ್ಪ ಕಸಬಿ ಮಾತನಾಡಿ, ರಕ್ತದಾನಿಗಳು ಸಮಾಜದಲ್ಲಿ ನಿಜವಾದ ಹೀರೋಗಳು. ಈ ನಿಟ್ಟಿನಲ್ಲಿ ಶಿವಮೊಗ್ಗ ಹಾಗೂ ಉಡುಪಿಯ ಅನೇಕ ಸಂಘಟನೆಗಳೊಂದಿಗೆ ಸೇರಿಸಿ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಿರುವುದು ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.
ರೋಟರಿ ಶಿವಮೊಗ್ಗ ಮಿಡ್‌ಟೌನ್ ಅಧ್ಯಕ್ಷ ಸುರೇಶ್ ಮಾತನಾಡಿ, ಪ್ರತಿ ವರ್ಷ 300ಕ್ಕೂ ಹೆಚ್ಚು ಯೂನಿಟ್‌ಗಳ ಸಂಗ್ರಹಣೆ ಆಗುವುದರ ಜತೆಗೆ ಸಾಕಷ್ಟು ರಕ್ತದ ಕೊರತೆ ನೀಗಿಸುತ್ತಿರುವ ಇಂತಹ ಸಂಘಟನೆಗಳು ನಿಜಕ್ಕೂ ಅಭಿನಂದನಾರ್ಹ ಎಂದು ತಿಳಿಸಿದರು.
ರಕ್ತದಾನ ಶಿಬಿರದಲ್ಲಿ 303 ಯೂನಿಟ್ ರಕ್ತ ಸಂಗ್ರಹವಾಯಿತು. ಕೆ.ಕೃಷ್ಣಮೂರ್ತಿ, ರಾಜೇಂದ್ರ ಪ್ರಸಾದ್, ರೋಟರಿ ನಿಯೋಜಿತ ಅಧ್ಯಕ್ಷ ಆನಂದ್, ದುರ್ಗಪ್ಪ, ಮಾಜಿ ಅಧ್ಯಕ್ಷೆ ವೀಣಾ ಸುರೇಶ್, ಡಾ. ಪ್ರಣೀತ್, ಡಾ. ತರುಣ್, ಹಾಗೂ ರಕ್ತದಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...