Tuesday, February 3, 2026
Tuesday, February 3, 2026

Department of Animal Husbandry and Fisheries ಕೋಳಿ/ಜಾನುವಾರು ಆಹಾರ ತಯಾರಿಕಾ ಘಟಕಗಳು & ಮಾರಾಟಗಾರರಿಗೆ ಲೈಸನ್ಸ್ ಕಡ್ಡಾಯ

Date:

Department of Animal Husbandry and Fisheries ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕರ್ನಾಟಕ ಕುಕ್ಕುಟ, ಜಾನುವಾರು ಆಹಾರ (ತಯಾರಿಕೆ ಮತ್ತು ಮಾರಾಟ ನಿಯಂತ್ರಣ) ಆಜ್ಞೆ 1987 ರ ಪ್ರಕಾರ ಕುಕ್ಕುಟ (ಕೋಳಿ) ಮತ್ತು ಜಾನುವಾರು (ಪಶು) ಆಹಾರ ತಯಾರಿಕಾ ಘಟಕಗಳು ಮತ್ತು ಮಾರಾಟ ಮಾಡುವ ಅಂಗಡಿ ಹಾಗೂ ಸಂಘ ಸಂಸ್ಥೆಗಳು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕುಕ್ಕುಟ/ಪಶು ಆಹಾರ ಉತ್ಪಾದಿಸಲು ಮತ್ತು ಮಾರಾಟ ಮಾಡಲು ಪರವಾನಗಿ (ಲೈಸೆನ್ಸ್) ಪಡೆಯುವುದು ಕಡ್ಡಾಯವಾಗಿದೆ.
ಈಗಾಗಲೆ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಮತ್ತು ಸ್ಥಳೀಯವಾಗಿ ಕೈಗಾರಿಕಾ ಇಲಾಖೆಯಿಂದ ಪರವಾನಗಿ ಪಡೆದಿದ್ದರೂ ಕೂಡ ಸರ್ಕಾರದ ಮೇಲ್ಕಾಣಿಸಿದ ಆಜ್ಞೆಯ ಪ್ರಕಾರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ. ಮತ್ತು ಈ ರೀತಿ ಪಡೆದ ಪರವಾನಗಿಯು ಪ್ರತಿ ವರ್ಷ ಡಿಸೆಂಬರ್-31 ಕ್ಕೆ ಮುಕ್ತಾಯವಾಗುವುದರಿಂದ ನವೀಕರಣವನ್ನು 2025 ರ ಜನವರಿ 01 ರಿಂದ ಪಡೆಯಬೇಕಾಗಿರುತ್ತದೆ.
Department of Animal Husbandry and Fisheries ಪ್ರಸ್ತುತ ವರ್ಷ 2025ನೇ ಸಾಲಿಗೆ ಕುಕ್ಕುಟ ಮತ್ತು ಜಾನುವಾರು ಆಹಾರ ಉತ್ಪಾದಕರು ಮತ್ತು ಮಾರಾಟಗಾರರು ನೂತನ ಪರವಾನಗಿ ಪಡೆಯಲು ಮತ್ತು ನವೀಕರಿಸಲು ಸೇವಾ ಸಿಂಧು ಪೋರ್ಟಲ್ sevasindhusevices.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಸೂಕ್ತ ದಾಖಲಾತಿಗಳನ್ನು ಅಪ್‌ಲೋಡ್ ಮಾಡಿ ಪರವಾನಗಿ ಪಡೆಯಲು ಕೋರಲಾಗಿದೆ.
ಪರವಾನಗಿ ಪಡೆಯದೇ ಇದ್ದಲ್ಲಿ, ಅಂತಹ ಕುಕ್ಕುಟ ಮತ್ತು ಜಾನುವಾರು ಆಹಾರ ಉತ್ಪಾದಕರು ಮತ್ತು ಮಾರಾಟಗಾರರ ಮೇಲೆ, (ಉತ್ಪಾದನೆ ಮತ್ತು ಮಾರಾಟ ನಿಯಂತ್ರಣ) ಆಜ್ಞೆ 1987 ರ ಕಂಡಿಕೆ 8, 9(1) ಹಾಗೂ 1!(1)(ಸಿ) ಪ್ರಕಾರ ಕ್ರಮಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಪಶುಪಾಲನಾ ಇಲಾಖೆಯ ಸಂಸ್ಥೆಗಳನ್ನು ಸಂಪರ್ಕಿಸಬಹುದೆAದು ಜಿಲ್ಲಾ ಪಶು ಆಸ್ಪತ್ರೆ, ಪಾಲಿಕ್ಲಿನಿಕ್‌ನ ಪರವಾನಗಿ ಪ್ರಾಧಿಕಾರ ಮತ್ತು ಉಪನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...