Monday, June 23, 2025
Monday, June 23, 2025

Madhu Bangarappa ಶಿಕ್ಷಕರು ಮಕ್ಕಳ ಹಾಜರಾತಿ ಬಗ್ಗೆ ಗಮನ ಹರಿಸಿ. ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ದಾರಿ ಮಾಡಿಕೊಡಿ- ಮಧು ಬಂಗಾರಪ್ಪ

Date:

Madhu Bangarappa ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಬಡ ಕುಟುಂಬಗಳ ಸಹಕಾರಕ್ಕೆ ನಿಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು.

ಸಾಗರ ತಾಲೂಕು ಕಾನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನಲೆ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೂ.13.90 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶಾಲಾ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕುಟುಂಬದಲ್ಲಿ ಓರ್ವ ದುಡಿಯುವ ವ್ಯಕ್ತಿ ರೀತಿಯಲ್ಲಿ ಬೆಂಬಲಕ್ಕೆ ನಿಂತಿವೆ ಎಂದರು.

ಮಕ್ಕಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ನಮ್ಮ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಒದಗಿಸಿದೆ. ಅದರ ಸದುಪಯೋಗವನ್ನು ಉತ್ತಮ ರೀತಿಯಲ್ಲಿ ಪಡೆದುಕೊಳ್ಳಬೇಕು. ಶಿಕ್ಷಕರು ಮಕ್ಕಳ ಹಾಜರಾತಿ ಬಗ್ಗೆ ಗಮನ ಹರಿಸಿ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ದಾರಿ ಮಾಡಿಕೊಡಬೇಕು ಎಂದರು.

Madhu Bangarappa ಮುಂದಿನ ದಿನಗಳಲ್ಲಿ ಅಭಿವೃದ್ದಿ ಕೆಲಸಗಳಿಗೆ ಚುರುಕು ನೀಡಲಾಗುವುದು. ಸಾರ್ವಜನಿಕರ ಭೇಟಿ ಮಾಡಿ ಕುಂದು ಕೊರತೆ ಅಹವಾಲು ಸ್ವೀಕರಿಸಿ, ಸಮಸ್ಯೆಗಳ ಪರಿಹಾರದ ಕಡೆ ಗಮನ ಹರಿಸಲಾಗುವುದು ಹಾಗೂ ಅಗತ್ಯವಿರುವ ಶಾಲೆಗಳಿಗೆ ಹೆಚ್ಚು ಅನುದಾನ ಒದಗಿಲಾಗುವುದು ಎಂದರು.

ಈ ಭಾಗದ ಜನರು ಕಾಗೋಡು ತಿಮ್ಮಪ್ಪ, ಬಂಗಾರಪ್ಪನವರನ್ನು, ಅವರು ಭೂ ಹಕ್ಕು ಕಾಯ್ದೆಗಾಗಿ ಮಾಡಿದ ಹೋರಾಟವನ್ನು ಸ್ಮರಿಸುತ್ತಾರೆ. ಅವರು ಮಾಡಿದ ಕೆಲಸಗಳು ಜೀವಂತವಾಗಿವೆ. ಅದೇ ನಿಟ್ಟಿನಲ್ಲಿ ನಾವು ಕೂಡ ಜನರು ನೆನೆಯುವ, ಜೀವಂತವಾಗಿರುವ ಕೆಲಸಗಳನ್ನು ಮಾಡಬೇಕು ಎಂದರು.

ಈ ವೇಳೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಅನೇಕ ಗಣ್ಯರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...