Monday, December 15, 2025
Monday, December 15, 2025

Republic Day ಕಾನೂನು ಪಾಲಿಸಿದರೆ ದೇಶವನ್ನೇ ಗೌರವಿಸಿದಂತೆ- ಎಸ್.ಎಸ್.ಜ್ಯೋತಿ ಪ್ರಕಾಶ್

Date:

Republic Day ಶಿವಮೊಗ್ಗ ನಗರದ ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಿ ವಿದ್ಯಾರ್ಥಿಗಳಿಗೆ ಪೋಷಕರಿಗೆ ಶಿಕ್ಷಕರಿಗೆ ಕಾನೂನುಗಳನ್ನು ನಾವು ಪಾಲಿಸಿದರೆ ಮಾತ್ರ ದೇಶಕ್ಕೆ ಗೌರವಿಸಿದಂತಾಗುತ್ತದೆ ಎಂದು ಶ್ರೀ ಎಸ್. ಎಸ್ ಜ್ಯೋತಿಪ್ರಕಾಶ್ ತಿಳಿಸಿಕೊಟ್ಟರು. ನಮ್ಮ ದೇಶದಲ್ಲಿ ಸಾಕಷ್ಟು ಕಾನೂನುಗಳಿವೆ ಆದರೆ ಸರಿಯಾದ ರೀತಿಯಲ್ಲಿ ಪಾಲನೆಯಾಗುತ್ತಿಲ್ಲ ಯಾವ ದೇಶದಲ್ಲಿ ಕಾನೂನಿಗೆ ಗೌರವಿಸಿ ಕಾನೂನನ್ನು ಪಾಲಿಸುವರೋ ಆದೇಶ ಖಂಡಿತ ಅಭಿವೃದ್ಧಿಯಾಗುವುದರಲ್ಲಿ ಸಂದೇಹವಿಲ್ಲ ಎಂದು ತಿಳಿಸಿದರು. Republic Day ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ಕೃಷ್ಣಮೂರ್ತಿ ಆರೋಗ್ಯ ನಿರೀಕ್ಷಕರು ಮಹಾನಗರ ಪಾಲಿಕೆ ಶಿವಮೊಗ್ಗ ಇವರು ಮಾತನಾಡಿ ಪರಿಸರದ ಬಗ್ಗೆ ಜಾಗೃತಿ ಅತ್ಯಂತ ಅವಶ್ಯಕವಾಗಿದೆ ಮಕ್ಕಳು ಪೋಷಕರು ನಾವೆಲ್ಲ ನಮ್ಮ ನಮ್ಮ ಮನೆಯಲ್ಲಿ ಕಸವನ್ನು ವಿಂಗಡಿಸುವುದರ ಮೂಲಕ ಪರಿಸರ ಸಂರಕ್ಷಣೆಯನ್ನು ಮಾಡಬಹುದು ಪ್ಲಾಸ್ಟಿಕ್ ನಿಂದ ಆಗುತ್ತಿರುವ ಸಮಸ್ಯೆಗಳಿಗೆ ನಮ್ಮಲ್ಲಿಯೇ ಪರಿಹಾರವಿದೆ ನಾವು ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ಅದರಿಂದ ಆಗತಕ್ಕಂತಹ ದುಷ್ಪರಿಣಾಮಗಳನ್ನು ತಡೆಯಬಹುದಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾದಂತಹ ತಯಾರಿ ಕುರಿತು ತಿಳಿಸಿಕೊಟ್ಟರು. ಶಾಲೆಯ ಸಲಹಾ ಸಮಿತಿ ಸದಸ್ಯರಾದ ಡಾ.ನಾಗರಾಜ ಪರಿಸರ ಮಾತನಾಡುತ್ತಾ ಅಂಬೇಡ್ಕರ್ ಅವರ ಆಶಯದಂತೆ ಸಂವಿಧಾನಕ್ಕೆ ಪ್ರತಿಯೊಬ್ಬರು ನಾವು ಗೌರವಿಸಿ ಎಲ್ಲರನ್ನೂ ಪ್ರೀತಿಯಿಂದ ಕಾಣುವಂತಾಗಬೇಕು ನಾವು ಬೇರೆಯವರಿಗೆ ಗೌರವವನ್ನು ನೀಡಿದರೆ ನಮಗೂ ಸಹ ಗೌರವ ಖಂಡಿತ ಮರಳಿ ಬರುತ್ತದೆ ಎಂಬುದನ್ನು ನಾವು ಎಲ್ಲರೂ ತಿಳಿದುಕೊಳ್ಳಬೇಕು ಪ್ರತಿಯೊಬ್ಬರೂ ದೇಶಕ್ಕಾಗಿ ಬದುಕಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಪೂಜಾ ನಾಗರಾಜ್ ಪರಿಸರ, ಶ್ರೀಮತಿ ಸುಧಾ ಜ್ಯೋತಿಪ್ರಕಾಶ್, ಕುಮಾರಿ ವರ್ಷಿಣಿ, ತೇಜಸ್ವಿ ,ಮುಖ್ಯ ಶಿಕ್ಷಕರಾದ ಶ್ರೀ ವಿನಯ್ ಹಾಗೂ ಶಿಕ್ಷಕರು, ಪೋಷಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...