Sunday, December 14, 2025
Sunday, December 14, 2025

Republic Day ವಿಐಎಸ್ಎಲ್ ನಲ್ಲಿ ಗಣರಾಜ್ಯೋತ್ಸವ. ಜವಾಹರ್ ಲಾಲ್ ನೆಹರು, ಡಾ.ಅಂಬೇಡ್ಕರ್ ಪ್ರಶಸ್ತಿ ವಿತರಣೆ

Date:


Republic Day ವಿಐಎಸ್‌ಎಲ್ ಸಿಲ್ವರ್ ಜ್ಯೂಬಿಲಿ ಸ್ಟೇಡಿಯಂನಲ್ಲಿ 26ನೇ ಜನವರಿ 2025ರಂದು ರಾಷ್ಟದ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಪಾಲಕ ನಿರ್ದೇಶಕರಾದ ಶ್ರೀಯುತ ಬಿ.ಎಲ್. ಚಂದ್ವಾನಿ ಅವರು ರಾಷ್ಟçಧ್ವಜ ಅನಾವರಣ ಮಾಡಿದರು.

ವಿಐಎಸ್‌ಎಲ್ ಸೆಕ್ಯುರಿಟಿ, ಭದ್ರಾವತಿಯ ಪ್ರೌಢ ಮತ್ತು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು.

ಲಿಟ್ಲಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸೈಂಟ್ ಚಾರ್ಲ್ಸ್ ಆಂಗ್ಲ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟೀಯ ಐಕ್ಯತೆ ಮತ್ತು ದೇಶಪ್ರೇಮ ವಿಷಯಗಳ ಕುರಿತು ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದರು ಮತ್ತು ಸಮೂಹಗಾನ ಹಾಡಿದರು.

ವಿಐಎಸ್‌ಎಲ್ ಉದ್ಯೋಗಿಗಳು ಕಳೆದ ವರ್ಷದಲ್ಲಿ ಮಾಡಿದ ವಿಶೇಷ ಸಾಧನೆಗಾಗಿ ವಿಶೇಷ ಪ್ರಶಸ್ತಿ, ಜವಹಾರ್, ನೆಹರು ಮತ್ತು ಡಾ|| ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗಳನ್ನು ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ತಂಡಗಳಿಗೆ ಹಾಗೂ ಮಿಕ್ಕ ಎಲ್ಲಾ ಪಥಸಂಚಲನ ತಂಡಗಳಿಗೆ ಈ ಸಂದರ್ಭದಲ್ಲಿ ಆಕರ್ಷಕ ಟ್ರೋಫಿಗಳನ್ನು ನೀಡಲಾಯಿತು.

ಶ್ರೀ ನಿತಿನ್ ಜೋಸ್, ಸಹಾಯಕ ಮಹಾಪ್ರಬಂಧಕರು (ಸಿ ಅಂಡ್ ಐಟಿ) ರವರು ಕೇರಳದಲ್ಲಿ ನಡೆದ ೭ನೇ ಕೇರಳ ರಾಜ್ಯ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಸಿಂಗಲ್ಸ್ ವಿಭಾಗದಲ್ಲಿ ಕಂಚಿನ ಪದಕ ಮತ್ತು ಡಬಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ (SU-೫) ವಿಭಾಗದಲ್ಲಿ ಪಡೆದಿದ್ದು ಹಾಗೂ ರಾಷ್ಟಮಟ್ಟದಲ್ಲಿ ಕೇರಳವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಕ್ಕಾಗಿ ಅವರನ್ನು ಅಭಿನಂದಿಸಲಾಯಿತು. ವಿಐಎಸ್‌ಎಲ್ ಕಾರ್ಮಿಕರ ಸಂಘ ಮತ್ತು ವಿಐಎಸ್‌ಎಲ್ ಅಧಿಕಾರಿಗಳ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಇಸ್ಪಾತ್ ಮಹಿಳಾ ಸಮಾಜದ ಸದಸ್ಯರು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ಶಾಲಾ ಮಕ್ಕಳು, ಪೋಷಕರು, ಅಧ್ಯಾಪಕ ವೃಂದದವರು, ಭದ್ರಾವತಿಯ ನಾಗರೀಕರು ಕಾಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ೫೦೦ ಪಪ್ಪಾಯ, ನುಗ್ಗೆ, ಹಲಸು ಮತ್ತು ಅಡಿಕೆ ಸಸಿಗಳನ್ನು ವಿಐಎಸ್‌ಎಲ್‌ನ ಉದ್ಯೋಗಿಗಳು, ಗುತ್ತಿಗೆ ಕಾರ್ಮಿಕರು ಮತ್ತು ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಲಾಯಿತು.

Republic Day ವಿಐಎಸ್‌ಎಲ್‌ನ ಸಿಲ್ವರ್ ಜ್ಯುಬಿಲಿ ಕ್ರೀಡಾಂಗಣದಲ್ಲಿರುವ ಪ್ಲಾಟಿನಮ್ ಜ್ಯುಬಿಲಿ ವೇದಿಕೆಯ ಬಳಿ ಇರುವ ವಿಐಎಸ್‌ಎಲ್ ವಸ್ತುಪ್ರದರ್ಶನ ಮಳಿಗೆಯನ್ನು ಶ್ರೀ ಬಿ.ಎಲ್. ಚಂದ್ವಾನಿ, ಕಾರ್ಯಪಾಲಕ ನಿರ್ದೇಶಕರು ಉದ್ಘಾಟಿಸಿದರು ಅವರೊಂದಿಗೆ ಶ್ರೀ ಕೆ.ಎಸ್.ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಹಾಗೂ ಅಧ್ಯಕ್ಷರು ಪ್ರಧಾನ ವ್ಯವಸ್ಥಾಪಕ ಸಮಿತಿ, ಶ್ರೀ ಮೋಹನ್ ರಾಜ್ ಶೆಟ್ಟಿ, ಮಹಾಪ್ರಬಂಧಕರು (ನಗರಾಡಳಿತ), ಶ್ರೀಮತಿ ಶೋಭ ಶಿವಶಂಕರನ್, ಮಹಾಪ್ರಬಂಧಕರು (ಹಣಕಾಸು ಮತ್ತು ಲೆಕ್ಖ), ಶ್ರೀ ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಹೆಚ್.ಆರ್ ಮತ್ತು ಸಾರ್ವಜನಿಕ ಸಂಪರ್ಕ), ಶ್ರೀ ಜೆ. ಜಗದೀಶ, ಅಧ್ಯಕ್ಷರು, ವಿಐಎಸ್ ಎಲ್ ಕಾರ್ಮಿಕರ ಸಂಘ ಮತ್ತು ಶ್ರೀ ಪಾರ್ಥಸಾರಥಿ ಮಿಶ್ರಾ, ಅಧ್ಯಕ್ಷರು, ವಿಐಎಸ್‌ಎಲ್ ಅಧಿಕಾರಿಗಳ ಸಂಘ ಉಪಸ್ಥಿತರಿದ್ದರು.

ಶ್ರೀಮತಿ ಶೋಭ.ಕೆ.ಎಸ್, ಉಪ ಪ್ರಬಂಧಕರು (ಹೆಚ್.ಆರ್) ಮತ್ತು ಶ್ರೀ ಎಮ್.ಎಲ್. ಯೋಗೀಶ್, ಕಿರಿಯ ಪ್ರಬಂಧಕರು (ಹೆಚ್.ಆರ್ ಮತ್ತು ಹೆಚ್.ಆರ್ ಎಲ್&ಡಿ)ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಈ ಕಾರ್ಯಕ್ರಮದ ಸಂಯೋಜನೆಯನ್ನು ವಿಐಎಸ್‌ಎಲ್‌ನ ಸಾರ್ವಜನಿಕ ಸಂಪರ್ಕ, ನಗರಾಡಳಿತ ಮತ್ತು ರಕ್ಷಣಾ ವಿಭಾಗದವರು ಮಾಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...