Sunday, December 7, 2025
Sunday, December 7, 2025

Mahasati Temple ಕಬಡ್ಡಿ ದೇಶೀಯ ಕ್ರೀಡೆ. ಅನೇಕ ಗ್ರಾಮೀಣ ಕ್ರೀಡಾಪಟುಗಳು ದೇಶವನ್ನ ಪ್ರತಿನಿಧಿಸುತ್ತಿದ್ದಾರೆ-ಲೋಕೇಶ್ ಯಲಸಿ

Date:

Mahasati Temple ಗ್ರಾಮೀಣ ಭಾಗದ ಕ್ರೀಡೆಯಾದ ಕಬಡ್ಡಿ ಪ್ರಸ್ತುತ ದಿನಗಳಲ್ಲಿ ರಾಷ್ಟೀಯ ಮತ್ತು ಅಂತರಾಷ್ಟೀಯ ಮನ್ನಣೆಗಳಿಸಿದ್ದು, ಇಂತಹ ಕ್ರೀಡಾಕೂಟಗಳು ಯುವ ಪ್ರತಿಭೆಗಳನ್ನು ಗುರುತಿಸಲು ಸಹಕಾರಿ ಎಂದು ಯಲಸಿ ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಲೋಕೇಶ್ ಯಲಸಿ ಹೇಳಿದರು.
ಸೊರಬ ತಾಲೂಕಿನ ಯಲಸಿ ಗ್ರಾಮದ ಶ್ರೀ ಮಹಾಸತಿ ದೇವಸ್ಥಾನದ ಆವರಣದಲ್ಲಿ ಶ್ರೀ ಮಾರಿಕಾಂಬ ಯುವ ವೇದಿಕೆ ದೇವನಗಿರಿ ಹಾಗೂ ಗ್ರಾಮಸ್ಥರ ವತಿಯಿಂದ ಗಣರಾಜ್ಯೋತ್ಸವ ನಿಮಿತ್ತ ಹಮ್ಮಿಕೊಂಡ ದ್ವಿತೀಯ ವರ್ಷದ ಹೊನಲು ಬೆಳಕಿನ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.
Mahasati Temple ಕಬಡ್ಡಿ ದೇಶೀಯ ಕ್ರೀಡೆಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಅತ್ಯಂತ ಜನಪ್ರಿಯಗೊಳ್ಳುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಅನೇಕ ಕ್ರೀಡಾಪಟುಗಳು ದೇಶವನ್ನು ಪ್ರತಿನಿಧಿಸುವಂತಹ ಪ್ರತಿಭಾನ್ವಿತರಿದ್ದಾರೆ. ಅವರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವಾಗಬೇಕು. ಗ್ರಾಮೀಣ ಪ್ರದೇಶದಲ್ಲಿ ಆಯೋಜಕರು ಕ್ರೀಡಾಕೂಟವನ್ನು ಆಯೋಜಿಸಿರುವುದು ಸ್ವಾಗತಾರ್ಹ ಎಂದರು.
ಇತಿಹಾಸ ಸಂಶೋಧಕ ಶ್ರೀಪಾದ ಬಿಚ್ಚುಗತ್ತಿ ಮಾತನಾಡಿ, ಗ್ರಾಮೀಣ ಕ್ರೀಡೆ ಕಬಡ್ಡಿ ಆಗಿದ್ದು, ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಾಬ್ದಾರಿ ಯುವ ಸಮುದಾಯದಲ್ಲಿದೆ. ದೇಶಿ ಕ್ರೀಡೆ ಕಬಡ್ಡಿ ಎಲ್ಲರ ಮನಗೆದ್ದಿದೆ. ಜೊತೆಗೆ ದೇಶದ ಹೆಮ್ಮೆಯ ಕ್ರೀಡೆಯೂ ಆಗಿದ್ದು, ಯುವಕರು ಕಬಡ್ಡಿ ಆಡುವ ಹಾಗೂ ಕಲಿಯುವ ಆಸಕ್ತಿ ರೂಡಿಸಿಕೊಳ್ಳಬೇಕು. ಇದರಿಂದ ಉತ್ತಮ ಆರೋಗ್ಯ ಹೊಂದಲು ಸಾಧ್ಯವಾಗುತ್ತದೆ ಜೊತೆಗೆ ಗ್ರಾಮದ ಯುವಕರು ಸುತ್ತಲಿನ ಪರಿಸರ ಸಂರಕ್ಷಣೆಯತ್ತ ಸಹ ಹೆಚ್ಚಿನ ಗಮನ ನೀಡಬೇಕು ಎಂದರು.
ಪಂದ್ಯಾವಳಿಯಲ್ಲಿ ಯಲಕುಂದ್ಲಿ ಸೆವೆನ್‌ಸ್ಟಾರ್ ತಂಡ ಪ್ರಥಮ, ಗದ್ದೆಮನೆ ತಂಡ ದ್ವಿತೀಯ, ಯಲಸಿ ಗೆಳೆಯರ ಬಳಗ ತೃತೀಯ ಹಾಗೂ ಹರಳಿಗೆ ಗ್ರಾಮದ ತಂಡ ನಾಲ್ಕನೇ ಬಹುಮಾನ ಪಡೆದವು.
ಗ್ರಾಮದ ಪ್ರಮುಖರಾದ ಮೊಹಮ್ಮದ್ ಇಸಾಕ್, ಧರ್ಮಪ್ಪ, ಬಿ.ಕೆ. ಅರುಣ್ ಕುಮಾರ್, ರವಿ ಹೊನ್ನಪ್ಪ, ಆರ್. ಮಹೇಶ್, ಬಿ. ಶಿವಣ್ಣ ಸೇರಿದಂತೆ ಶ್ರೀ ಮಾರಿಕಾಂಬ ಯುವ ವೇದಿಕೆ ದೇವನಗಿರಿಯ ಪದಾಧಿಕಾರಿಗಳು ಮತ್ತು ಊರ ಗ್ರಾಮಸ್ಥರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...