Friday, April 18, 2025
Friday, April 18, 2025

Royal English Medium School ಆರೋಗ್ಯದಲ್ಲಿ ತರಕಾರಿಗಳ ಮಹತ್ವ.‌ರಾಯಲ್ ಡೈಮಂಡ್ ಶಾಲೆಯಲ್ಲಿ‌ ವಿಶಿಷ್ಟ ಕಾರ್ಯಕ್ರಮ

Date:

Royal English Medium School ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ನೆಡದ ತರಕಾರಿಗಳ ಮೇಳ ಕಾರ್ಯಕ್ರಮ ನಡೆಯಿತು. ತರಕಾರಿಗಳ ಮಹತ್ವ ಅರಿತು ಹೆಚ್ಚು ಸೇವಿಸುವ ಮೂಲಕ ನಮ್ಮ ಆರೋಗ್ಯವನ್ನು ಉತ್ತಮಪಡಿಸಿಕೊಳ್ಳಬೇಕು. ಆರೋಗ್ಯ ದಿನಾಚರಣೆ ಅಂಗವಾಗಿ ತರಕಾರಿಗಳ ಮೇಳ ಕಾರ್ಯಕ್ರಮವನ್ನ ಏರ್ಪಡಿಸಲಾಗಿತ್ತು.

ತರಕಾರಿಗಳ ಸೇವನೆಯಿಂದ ಜೀರ್ಣಕ್ರಿಯೆ ಆರೋಗ್ಯವನ್ನು ಸುಧಾರಿಸುತ್ತದೆ. ರಕ್ತದ ಒತ್ತಡವನ್ನು ಸುಧಾರಿಸಿ , ಕಣ್ಣುಗಳಿಗೆ ಸಹಾಯ, ಕ್ಯಾನ್ಸರ್ ನಂತಹ ಮಾರಕ ರೋಗಗಳನ್ನು ಕಡಿಮೆ ಮಾಡಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಜೊತಗೆ ಮೆದುಳನ್ನು ಯೌವನ ವಾಗಿರಿಸಿಕೊಳ್ಳಲು ಸಹಾಯಕವಾಗಿದೆ.

ಚರ್ಮರೋಗವನ್ನು ಬಿಸಿಲಿನಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಎಂದು ಕನ್ನಡ ಭಾಷಾಸಹ ಶಿಕ್ಷಕರಾದ ಅರುಣ್ ಕುಮಾರ್ ಹೆಚ್ ಎಂ ರವರು ತಿಳಿಸಿದರು.

ನಂತರ ವಿದ್ಯಾರ್ಥಿಗಳು ಐಶ್ವರ್ಯ ಹಿರೇಕಾಯಿ, ಬೃಂದಾ ಹೂ ಕೋಸು, ನುಗ್ಗೆ ಸೊಪ್ಪು ದೃತಿ, ಮೂಲಂಗಿ ಪ್ರೀತಮ್, ಕೊತ್ತಂಬರಿ ಸೊಪ್ಪು ಸಿಂಚನ, ಕ್ಯಾರೆಟ್ ಸೂರಜ್, ತೇಜಲ್ ಹಾಗಲಕಾಯಿ, ಗೆಡ್ಡೆಕೋಸು ಯಶಸ್, ಈ ವಿದ್ಯಾರ್ಥಿಗಳು ಉಪಯೋಗಗಳನ್ನು ಪರಿಚಯ ಮಾಡಿಕೊಟ್ಟರು. ಈ ತರಕಾರಿಗಳಲ್ಲಿ ಇರುವ ಎ, ಸಿ, ಜೀವಸತ್ವಗಳಿವೆ ಎಂಬುದನ್ನು ಪರಿಚಯಿಸಿದರು.

Royal English Medium School ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ ಬೆಳೆಸುವಂತಹ ತರಕಾರಿಗಳನ್ನು ಸಂಗ್ರಹಿಸಿದ್ದರು. ಹೀರೇಕಾಯಿ, ಹೂಕೋಸು ನುಗ್ಗೆ ಸೊಪ್ಪು, ಈರುಳ್ಳಿ , ಗೆಡ್ಡೆಕೋಸು ಬೀನ್ಸು, ಬೆಂಡೆಕಾಯಿ ಎಲೆಕೋಸು, ಕೆಂಪು ಬಿಟ್ರೋಟ್ ಮುಂತಾದ ತರಕಾರಿಗಳನ್ನು ಸಂಗ್ರಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ರಾಯಲ್ ಇಂಗ್ಲೀಷ್ ಮೇಡಂ ಶಾಲೆಯ ಕಾರ್ಯದರ್ಶಿಗಳಾದ ಶ್ರೀಮತಿ ಪೂಜಾ ನಾಗರಾಜ್ ಪರಿಸರ ಮೇಡಂ ಮಾತನಾಡಿ ವಿದ್ಯಾರ್ಥಿಗಳು ಪ್ರತಿನಿತ್ಯದ ಆಹಾರ ಸೇವನೆಯಲ್ಲಿ ತರಕಾರಿಗಳ ಮಹತ್ವವನ್ನ ತಿಳಿಸಿಕೊಟ್ಟರು. ವಿದ್ಯಾರ್ಥಿಗಳು ಸದೃಢವಾಗಿ ಇರಬೇಕಾದರೆ ಸದೃಢವಾದ ಆಹಾರ ಪದಾರ್ಥಗಳನ್ನು ಸೇವನೆ ಅವಶ್ಯಕ ಎಂದು ಹೇಳಿದರು. ಹಾಗೆ ಪ್ರತಿ ತರಕಾರಿಗಳನ್ನು ಯಾವ ರೀತಿಯಲ್ಲಿ ಬೆಳೆಯುತ್ತಾರೆ. ತರಕಾರಿಗಳನ್ನು ಬಳಸುವುದರಿಂದ ನಮ್ಮ ದೇಹದಲ್ಲಿ ಆಗುವಂತಹ ಬದಲಾವಣೆಗಳನ್ನು ಪರಿಚಯಿಸಿದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ವಿನಯ್, ಶಿಕ್ಷಕಿಯಾದ ವಿಂಧ್ಯಾ ರವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಏಪ್ರಿಲ್ 19 ಆಲ್ಕೊಳ ಫೀಡರ್ ಎ.ಎಫ್. 3 & 5 ರ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-3 ಮತ್ತು...

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...