Wednesday, April 23, 2025
Wednesday, April 23, 2025

Madhu Bangarappa ಶೀಘ್ರವಾಗಿ ಶರಾವತಿ ಸಂತ್ರಸ್ತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಲಾಗುತ್ತಿದೆ- ಸಚಿವ ಮಧು ಬಂಗಾರಪ್ಪ

Date:

Madhu Bangarappa ಶರಾವತಿ ಸಂತ್ರಸ್ತರಿಗೆ ಶೀಘ್ರವಾಗಿ ನ್ಯಾಯ ಕೊಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಸರ್ಕಾರ ಸಂತ್ರಸ್ತರ ಕೈ ಹಿಡಿಯಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು.

ಗ್ರಾಮ ಪಂಚಾಯ್ತಿ ಹಿರೇನಲ್ಲೂರು, ಎಂಬಿಎನ್‌ಆರ್‌ಇಬಿಎ ಅಡಿಯಲ್ಲಿ ಭಾರತ್ ನಿರ್ಮಾಣ್ ರಾಜೀವ್‌ಗಾಂಧಿ ಸೇವಾ ಕೇಂದ್ರ ಹಾಗೂ ಆರ್‌ಎಲ್‌ಎಂ ವರ್ಕ್ಶೆಡ್ ಶೀರ್ಷಿಕೆಯಡಿ ನಿರ್ಮಿಸಿದ ಗ್ರಾಮ ಪಂಚಾಯಿತಿ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶರಾವತಿ ಸಂತ್ರಸ್ತರು ಸೇರಿದಂತೆ ಚಕ್ರಾ, ವರಾಹಿ ಸಂತ್ರಸ್ತರ ಪರವಾಗಿಯೂ ನಮ್ಮ ಸರ್ಕಾರ ಇದೆ. ಸಂತ್ರಸ್ತರ ಪರವಾಗಿ ವಾದಿಸಲು ಉತ್ತಮ ವಕೀಲರನ್ನು ನೇಮಿಸಲಾಗಿದೆ. ಶೀಘ್ರವಾಗಿ ಪ್ರಕರಣ ಇತ್ಯರ್ಥ ಆಗುವ ಭರವಸೆ ಇದೆ. ಕೇಂದ್ರ ಸರ್ಕಾರ ಕೂಡ ಈ ವಿಷಯದಲ್ಲಿ ಉತ್ತಮವಾಗಿ ಸ್ಪಂದಿಸಿದೆ. ಈ ಎಲ್ಲ ಸಂತ್ರಸ್ತರ ಕಾರಣದಿಂದ ನಾವಿಂದು ಬೆಳಕು ಕಾಣುತ್ತಿದ್ದೇವೆ. ಅವರಿಗೆ ನ್ಯಾಯ ಒದಗಿಸುವ ಕೆಲಸ ನಾವು ಮಾಡುತ್ತೇವೆ.

Madhu Bangarappa ತಾಳಗುಪ್ಪ-ಸಾಗರದಿಂದ ಕುಡಿಯುವ ನೀರಿನ ಕುರಿತು ಡಾ.ಕಾಗೋಡು ತಿಮ್ಮಪ್ಪನವರ ಜೊತೆಗೂಡಿ ಮೊದಲ ಬಾರಿಗೆ ಹೋರಾಟದಲ್ಲಿ ಪಾಲ್ಗೊಂಡಿದ್ದೆ. ಕಾಗೋಡು ತಿಮ್ಮಪ್ಪನವರೇ ಖುದ್ದು ಶರಾವತಿ ಸಂತ್ರಸ್ತರಿಗೆ ಹಕ್ಕುಪತ್ರ ನೀಡಿದ್ದರು. ಅದು ರದ್ದಾಯಿತು. ಅವರಿಗೆ ಹಕ್ಕುಪತ್ರ ಕೊಡುವ ಜವಾಬ್ದಾರಿ ನಮ್ಮ ಮೇಲಿದೆ. ಶೀಘ್ರದಲ್ಲೇ ಅವರಿಗೆ ನ್ಯಾಯ ಒದಗಲಿದೆ. ಸರ್ಕಾರ ಸಂತ್ರಸ್ತರ ಪರವಾಗಿದೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ವಿಧಾನಸಭಾಧ್ಯಕ್ಷರಾದ ಡಾ.ಕಾಗೋಡು ತಿಮ್ಮಪ್ಪ, ಹಿರೇನಲ್ಲೂರು ಗ್ರಾ.ಪಂ ಅಧ್ಯಕ್ಷರಾದ ರೇವತಿ ಸುರೇಶ್, ಗ್ರಾ.ಪಂ ಸದಸ್ಯರು, ಅಧಿಕಾರಿಗಳು, ಉಪಸ್ಥಿರತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Nalanda Chess Academy ನಳಂದ ಚೆಸ್ ಸಂಸ್ಥೆಯಿಂದ ಬೇಸಿಗೆ ಚೆಸ್ ತರಬೇತಿ ಶಿಬಿರ

Nalanda Chess Academy ಶಿವಮೊಗ್ಗ ರವೀಂದ್ರನಗರ 2ನೇ ತಿರುವಿನಲ್ಲಿರುವ ಯಾದವ...