Saturday, December 6, 2025
Saturday, December 6, 2025

JCI Shivamogga ಜೆಸಿಐ ಪರಸ್ಪರರಲ್ಲಿ ಆತ್ಮವಿಶ್ವಾಸ ಬೆಳೆಸುತ್ತದೆ- ಎಸ್.ಎಸ್.ಜ್ಯೋತಿಪ್ರಕಾಶ್

Date:

JCI Shivamogga ಯುವಜನತೆಗೆ ಮಾರ್ಗದರ್ಶನ, ವ್ಯಕ್ತಿತ್ವ ವಿಕಸನ ಹಾಗೂ ಕೌಶಲ್ಯಗಳ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಜೆಸಿಐ ಸಂಸ್ಥೆ ಮಾಡುತ್ತಿದೆ ಎಂದು ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್ ಹೇಳಿದರು.
ಶಿವಗಂಗಾ ಯೋಗಕೇಂದ್ರ ರಾಘವ ಶಾಖೆಯಿಂದ ನಗರದ ಶುಭಂ ಸಭಾಂಗಣದಲ್ಲಿ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಸಕಾರಾತ್ಮಕ ಭಾವನೆ ಬೆಳೆಸುವಲ್ಲಿ ಹಾಗೂ ನಾಯಕತ್ವ ಗುಣ ಬೆಳೆಸುವಲ್ಲಿ ಜೆಸಿಐ ಸಂಸ್ಥೆ ಉತ್ತಮ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಜೆಸಿಐ ಸಂಸ್ಥೆಯು ಸೇವಾ ಮನೋಭಾವನೆ ಬೆಳೆಸುತ್ತದೆ. ಪರಸ್ಪರರಲ್ಲಿ ಆತ್ಮವಿಶ್ವಾಸ ವೃದ್ಧಿಸುತ್ತದೆ. ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ರಾಘವ ಶಾಖೆಯ ಯೋಗಪಟು ಜಿ.ಗಣೇಶ್ ಅವರು ಉತ್ತಮ ಸೇವಾ ಚಟುವಟಿಕೆಗಳನ್ನು ನಡೆಸಲಿ ಎಂದು ಆಶಿಸಿದರು.
JCI Shivamogga ರಾಘವ ಶಾಖೆ ಯೋಗಕೇಂದ್ರದ ಗುರು ವಿಜಯಕೃಷ್ಣ ಮಾತನಾಡಿ, ಯುವಜನತೆಗೆ ಸಂಸ್ಕಾರ, ಶಿಕ್ಷಣ ಹಾಗೂ ಸಾಮಾಜಿಕ ಬದ್ಧತೆ, ಜವಾಬ್ದಾರಿ ಕಲಿಸುವ ಕೆಲಸಗಳನ್ನು ಜೆಸಿಐ ಸಂಸ್ಥೆ ಮಾಡುತ್ತಿದೆ ಎಂದು ತಿಳಿಸಿದರು.
ಯೋಗಗುರು ಜಿ.ಎಸ್.ಓಂಕಾರ್ ಮಾತನಾಡಿ, ಜೆಸಿಐ ಸಂಸ್ಥೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ಉತ್ತಮ ಸಾಧನೆ ಮಾಡುವಂತೆ ಸೂಕ್ತ ತರಬೇತಿ ನೀಡುತ್ತಿದೆ ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿದ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಜಿ.ಗಣೇಶ್ ಮಾತನಾಡಿ, ಜೆಸಿಐ ಸಂಸ್ಥೆಗೆ ಹೆಚ್ಚು ಹೆಚ್ಚು ಯುವಜನರು ಸೇರ್ಪಡೆಗೊಳ್ಳಬೇಕು. ಉತ್ತಮ ಸಮಾಜ ಕಟ್ಟುವಲ್ಲಿ ಯುವಜನರ ಪಾತ್ರ ದೊಡ್ಡದಿದೆ ಎಂದು ತಿಳಿಸಿದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಕಾಟನ್ ಜಗದೀಶ್, ಶ್ರೀನಿವಾಸ್, ಆನಂದ್, ಶಶಿಧರ್, ಸುಧಾ ಜ್ಯೋತಿಪ್ರಕಾಶ್, ಸ್ಪರ್ಶ ಅಮೋಘ್, ಸುಬ್ರಮಣಿ, ಶಂಕರ, ನರಸೋಜಿರಾವ್, ಬಿಂದು ವಿಜಯಕುಮಾರ್, ಯೋಗಪಟುಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...