Monday, December 15, 2025
Monday, December 15, 2025

Akhila karnataka vokkaligara sangha ಮಹಿಳೆಯರು ಸಂಘಸಂಸ್ಥೆಗಳಲ್ಲಿ ತಮ್ಮನ್ನ ತೊಡಗಿಸಿಕೊಳ್ಳಬೇಕು- ಪವಿತ್ರಾ ರಾಮಯ್ಯ

Date:

ಪ್ರAkhila karnataka vokkaligara sangha ತಿಯೊಬ್ಬರೂ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಭದ್ರಾ ಕಾಡಾ ಮಾಜಿ ಅಧ್ಯಕ್ಷೆ ಪವಿತ್ರಾ ರಾಮಯ್ಯ ಹೇಳಿದರು.

ಅಂಭ್ರಣಿ ಸಾಂಸ್ಕೃತಿಕ ವೇದಿಕೆ ವತಿಯಿಂದ ಆಯೋಜಿಸಿದ್ದ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಮಾತನಾಡಿ, ಮಹಿಳೆಯರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು ಎಂದು ತಿಳಿಸಿದರು.

ಅಂಭ್ರಣಿ ಸಾಂಸ್ಕೃತಿಕ ವೇದಿಕೆ ಗೌರವಾಧ್ಯಕ್ಷೆ, ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಮಹಾ ಪೋಷಕಿ ಡಾ. ಆರ್.ಅನುರಾಧ ಪಟೇಲ್ ಮಾತನಾಡಿ, ಅಂಭ್ರಣಿ ಹೆಸರಿನ ಬಗ್ಗೆ ಅರ್ಥಪೂರ್ಣ ವಿವರಣೆ ನೀಡುವುದರ ಜತೆಗೆ ಎಲ್ಲ ಮಹಿಳೆಯರು ಚಿಂತನ ಮಂಥನ ವೇದಿಕೆ ಉಪಯೋಗಪಡಿಸಿಕೊಳ್ಳಬೇಕು ಎಂದರು.

ಅಖಿಲ ಕರ್ನಾಟಕ ಒಕ್ಕಲಿಗರ ಸಂಘ ರಾಜ್ಯಾಧ್ಯಕ್ಷ ಸಿ.ಜಿ.ಗಂಗಾಧರ್ ಮಾತನಾಡಿ, ಸಮಾಜದಲ್ಲಿ ಮಹಿಳೆಯರು ವಿವಿಧ ಸಂಘ, ಸಂಸ್ಥೆಗಳ ಮೂಲಕ ಮೂಲಕ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಕೈಜೋಡಿಸುತ್ತಿರುವುದು ತುಂಬಾ ಸಂತೋಷದ ವಿಷಯ ಎಂದು ಹೇಳಿದರು.

Akhila karnataka vokkaligara sangha ಅಂಭ್ರಣಿ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಟಿ.ಜಿ.ಗಾಯತ್ರಿ ಯಲ್ಲಪ್ಪಗೌಡ ಮಾತನಾಡಿ, ಸಮಾನ ಮನಸ್ಕರ ಮಹಿಳೆಯರು, ಚಿಂತಕರು ಒಂದು ಕಡೆ ಸೇರಿ ಪರಸ್ಪರ ಸಾಮರಸ್ಯದ ಬದುಕಿನ ಬಗ್ಗೆ ಚಿಂತನೆ, ಆಲೋಚನೆ, ಚರ್ಚಿಸುವ ಮೂಲಕ ಪರಸ್ಪರ ಒಳಿತಿಗಾಗಿ ಗಟ್ಟಿಯಾದ ಸಮಾಜ ಮುಖಿ ಸಂಘಟನೆ ರಚಿಸಿಕೊಂಡು ನಾವೆಲ್ಲರೂ ಪ್ರೀತಿ, ವಿಶ್ವಾಸ ಹಂಚಿಕೊಳ್ಳುವ ಸಲುವಾಗಿ ಅಂಭ್ರಣಿ ಸಾಂಸ್ಕೃತಿಕ ವೇದಿಕೆ ರಚಿಸಿ ಕೊಂಡಿರುತ್ತೇವೆ ಎಂದು ತಿಳಿಸಿದರು.

ಲೀಲಾ ಸಿ.ಜಿ.ಗಂಗಾಧರ್ ಮಾತನಾಡಿ ಅಂಭ್ರಣಿ ಸಾಂಸ್ಕೃತಿಕ ವೇದಿಕೆಗೆ ಶುಭಹಾರೈಸಿದರು. ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಮಹಿಳಾ ವೇದಿಕೆ ಅಧ್ಯಕ್ಷೆ ಅರ್ಚನಾ ಮಲ್ಲಿಕಾರ್ಜುನ, ಖಜಾಂಚಿ ಶೃತಿ ಗೌತಮ್, ಮಾಜಿ ಅಧ್ಯಕ್ಷೆ ಪ್ರಭಾ ಶ್ರೀನಾಥ್, ಶೈಲಾ ವಾಸುದೇವ, ವನಜಾಕ್ಷಿ, ಅನ್ನಪೂರ್ಣ ಮತ್ತು ಸದಸ್ಯರು, ಭದ್ರಾವತಿ ಚುಂಚಾದ್ರಿ ಮಹಿಳಾ ಸಂಘದ ಅಧ್ಯಕ್ಷೆ ಸುಧಾ ಮತ್ತು ಪದಾಧಿಕಾರಿಗಳು, ಶಾಶ್ವತಿ ಅಧ್ಯಕ್ಷ ನರಸಿಂಹಮೂರ್ತಿ ಮತ್ತು ಪದಾಧಿಕಾರಿಗಳು, ಅಖಿಲ ಕರ್ನಾಟಕ ಒಕ್ಕಲಿಗರ ಸಂಘ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಕೃಷ್ಣವೇಣಿ ರಮೇಶ ಹಾಗೂ ಖಜಾಂಚಿ ಧರಣಿ ನಾಗೇಶ್, ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು. ಸುಷ್ಮಾ ಸತೀಶ್ ನಿರೂಪಿಸಿದರು. ಆಕಾಶವಾಣಿ ಕಲಾವಿದೆ ಹೇಮಾ ಪ್ರಾರ್ಥಿಸಿದರು. ಧರಣಿ ನಾಗೇಶ್ ವಂದನಾರ್ಪಣೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...