Wednesday, April 23, 2025
Wednesday, April 23, 2025

JCI Shivamogga ರಕ್ತದಾನದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಶೇಷಗಿರಿ ಡಿ.ಕೆ

Date:

JCI Shivamogga ರಕ್ತದಾನ ಅತ್ಯಂತ ಶ್ರೇಷ್ಠದಾನ ಆಗಿದ್ದು, ರಕ್ತದಾನದಿಂದ ಆತ್ಮತೃಪ್ತಿಯ ಜತೆಗೆ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಜೆಸಿಎ.ವೈಸ್ ಚೇರ್ಮನ್ ಶೇಷಗಿರಿ ಡಿ.ಕೆ. ಹೇಳಿದರು.
ಶಿವಮೊಗ್ಗ ನಗರದ ಜೆಪಿಎನ್ ರಸ್ತೆಯಲ್ಲಿರುವ ರೆಡ್ ಕ್ರಾಸ್ ಸಂಜೀವಿನಿ ರಕ್ತನಿಧಿಯಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಶಿವಮೊಗ್ಗ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಕ್ತದಾನದಿಂದ ಜೀವ ಉಳಿಸಿದ ಪುಣ್ಯ ಲಭಿಸುತ್ತದೆ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ತಿಳಿಸಿದರು.
ಜೆಸಿಐ ರಾಷ್ಟ್ರೀಯ ಸಂಯೋಜಕ ಸತೀಶ್ ಚಂದ್ರ ಮಾತನಾಡಿ, ರಕ್ತದ ಕೊರತೆ ಇರುವುದರಿಂದ ಸಾಕಷ್ಟು ಜನರು ಜೀವ ಕಳೆದುಕೊಳ್ಳುತ್ತಾರೆ. ರಕ್ತದ ಲಭ್ಯತೆ ಇದ್ದಲ್ಲಿ ತುರ್ತು ಸಂದರ್ಭದಲ್ಲಿರುವವರಿಗೆ ರಕ್ತ ಸಿಗುವ ಜತೆಯಲ್ಲಿ ಅಮೂಲ ಜೀವ ಉಳಿಯುತ್ತದೆ. ಯುವಜನರು ರಕ್ತದಾನ ಮಾಡಬೇಕು ಎಂದು ಹೇಳಿದರು.
JCI Shivamogga ರಕ್ತದಾನ ಶಿಬಿರದ ಅಧ್ಯಕ್ಷತೆ ವಹಿಸಿದ್ದ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಜಿ.ಗಣೇಶ್ ಮಾತನಾಡಿ, ಅಧ್ಯಕ್ಷರಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದು, ವರ್ಷಪೂರ್ತಿ ಸಮಾಜಮುಖಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಿದ್ದು, ಮೊದಲ ಕಾರ್ಯಕ್ರಮವಾಗಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ರಕ್ತದಾನ ಮಾಡುವವುದರಿಂದ ಉತ್ತಮ ಆರೋಗ್ಯ ನಮ್ಮದಾಗುತ್ತದೆ. ಮುಂದಿನ ದಿನಗಳಲ್ಲಿ ಕಾಲೇಜುಗಳಲ್ಲಿ ರಕ್ತದ ಗುಂಪು ತಪಾಸಣೆ, ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಪ್ರಥಮ ಬಾರಿಗೆ ರಕ್ತದಾನ ಮಾಡಿದ ಸುಮಂತ್ ನಾಯ್ಕ್, ಕುಮಾರ್, 25 ಬಾರಿ ರಕ್ತದಾನ ಮಾಡಿದ ಸುಮಂತ್ ಬಿ.ಟಿ., 56 ಬಾರಿ ರಕ್ತದಾನ ಮಾಡಿದ ಅಲ್ಲಬಕಾಸ್, 116 ಬಾರಿ ರಕ್ತದಾನ ಮಾಡಿದ ಧರಣೇಂದ್ರ ದಿನಕರ್ ಅವರನ್ನು ಅಭಿನಂದಿಸಲಾಯಿತು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಮಾಜಿ ಅಧ್ಯಕ್ಷೆ ಬಿಂದು ವಿಜಯಕುಮಾರ್, ರೆಡ್‌ಕ್ರಾಸ್ ಸಂಸ್ಥೆ ನಿರ್ದೇಶಕ ನವೀನ್, ನವೀನ್ ಬಿಲ್ಗುಣಿ, ಡಾ. ರಮೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....