Monday, February 2, 2026
Monday, February 2, 2026

Red Cross Shivamogga ಮನುಕುಲದ ಸೇವೆಯಲ್ಲಿ ರೆಡ್‌ಕ್ರಾಸ್ ಸಂಸ್ಥೆ ಸದಾ ಮುಂಚೂಣಿಯಲ್ಲಿದೆ : ಡಾ. ದಿನೇಶ್

Date:

Red Cross Shivamogga ಮನುಕುಲದ ಸೇವೆಯಲ್ಲಿ ರೆಡ್‌ಕ್ರಾಸ್ ಸಂಸ್ಥೆ ಸದಾ ಮುಂಚೂಣಿಯಲ್ಲಿದ್ದು, ತುರ್ತು ಆಘಾತ ಸಂದರ್ಭಗಳಲ್ಲಿ ತಕ್ಷಣ ಸ್ಪಂದಿಸುವ ಕೆಲಸ ಮಾಡುತ್ತಿದೆ. ಅಗತ್ಯ ವಸ್ತುಗಳನ್ನು ತಲುಪಿಸುವ ಕಾರ್ಯ ನಿರಂತರವಾಗಿ ನಡೆಸುತ್ತಿದೆ ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಶಿವಮೊಗ್ಗ ಘಟಕದ ಗೌರವ ಕಾರ್ಯದರ್ಶಿ ಡಾ. ದಿನೇಶ್ ಹೇಳಿದರು.
ಶಿವಮೊಗ್ಗ ನಗರದ ಹೊಸಮನೆ ಆರನೇ ಕ್ರಾಸ್‌ನಲ್ಲಿ ರತ್ನಮ್ಮ ಅವರ ಮನೆ ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಇಡೀ ಮನೆಯಲ್ಲಿದ್ದ ವಸ್ತುಗಳು ಭಸ್ಮವಾಗಿದ್ದ ಹಿನ್ನೆಲೆಯಲ್ಲಿ ರೆಡ್‌ಕ್ರಾಸ್ ತಂಡ ಪರಿಶೀಲಿಸಿ ಸಾಂತ್ವಾನ ಹೇಳಿ ಧೈರ್ಯ ತುಂಬಿದ ಅವರು, ಮನೆಗೆ ತುರ್ತಾಗಿ ಅವಶ್ಯವಿರುವ ವಸ್ತುಗಳನ್ನು ವಿತರಿಸಿದರು.
ಪಾತ್ರೆಗಳು, ಕಿಚನ್ ಸೆಟ್, ಬೆಡ್‌ಶೀಟ್, ಜಮಕಾನ, ಆಹಾರ ಪದಾರ್ಥ, ಬಟ್ಟೆಗಳು, ಸೀರೆ, ಪಂಚೆ, ಅಗತ್ಯ ಸಾಮಾಗ್ರಿಗಳನ್ನು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಶಿವಮೊಗ್ಗ ಘಟಕದಿಂದ ವಿತರಿಸಲಾಯಿತು.
Red Cross Shivamogga ಇದೇ ಸಂದರ್ಭದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಶಿವಮೊಗ್ಗ ಘಟಕದ ಕಾರ್ಯದರ್ಶಿ ಎ.ಎಂ.ಸುರೇಶ್ ಮಾತನಾಡಿ, ರೆಡ್‌ಕ್ರಾಸ್ ಸಂಸ್ಥೆ ಕರೊನಾ, ಸುನಾಮಿ, ತುರ್ತು ಅವಘಡ ಸಂದರ್ಭಗಳಲ್ಲಿ ಮಾನವೀಯ ಸೇವಾ ಕಾರ್ಯಗಳನ್ನು ನಡೆಸಿದೆ. ತುರ್ತು ಪರಿಸ್ಥಿತಿಗಳಲ್ಲಿ ಅಗತ್ಯವಿರುವ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ ಎಂದು ತಿಳಿಸಿದರು.
ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ರತ್ನಮ್ಮ ಎಂಬುವವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಬಹುತೇಕ ವಸ್ತುಗಳು ಸುಟ್ಟು ಹೋಗಿದ್ದು, ಸಂಸ್ಥೆ ವತಿಯಿಂದ ತುರ್ತಾಗಿ ಅವರಿಗೆ ಅವಶ್ಯವಿರುವ ವಸ್ತುಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ಅಗತ್ಯ ಸಾಮಾಗ್ರಿಗಳನ್ನು ವಿತರಿಸುವ ಸಂದರ್ಭದಲ್ಲಿ ನಿರ್ದೇಶಕರಾದ ನವೀನ್, ಗಿರೀಶ್ ಶೇಟ್, ಜಗದೀಶ್, ಜಿ.ವಿಜಯಕುಮಾರ್, ಧರಣೇಂದ್ರ ದಿನಕರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...