Thursday, March 19, 2026
Thursday, March 19, 2026

Red Cross Shivamogga ಮನುಕುಲದ ಸೇವೆಯಲ್ಲಿ ರೆಡ್‌ಕ್ರಾಸ್ ಸಂಸ್ಥೆ ಸದಾ ಮುಂಚೂಣಿಯಲ್ಲಿದೆ : ಡಾ. ದಿನೇಶ್

Date:

Red Cross Shivamogga ಮನುಕುಲದ ಸೇವೆಯಲ್ಲಿ ರೆಡ್‌ಕ್ರಾಸ್ ಸಂಸ್ಥೆ ಸದಾ ಮುಂಚೂಣಿಯಲ್ಲಿದ್ದು, ತುರ್ತು ಆಘಾತ ಸಂದರ್ಭಗಳಲ್ಲಿ ತಕ್ಷಣ ಸ್ಪಂದಿಸುವ ಕೆಲಸ ಮಾಡುತ್ತಿದೆ. ಅಗತ್ಯ ವಸ್ತುಗಳನ್ನು ತಲುಪಿಸುವ ಕಾರ್ಯ ನಿರಂತರವಾಗಿ ನಡೆಸುತ್ತಿದೆ ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಶಿವಮೊಗ್ಗ ಘಟಕದ ಗೌರವ ಕಾರ್ಯದರ್ಶಿ ಡಾ. ದಿನೇಶ್ ಹೇಳಿದರು.
ಶಿವಮೊಗ್ಗ ನಗರದ ಹೊಸಮನೆ ಆರನೇ ಕ್ರಾಸ್‌ನಲ್ಲಿ ರತ್ನಮ್ಮ ಅವರ ಮನೆ ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಇಡೀ ಮನೆಯಲ್ಲಿದ್ದ ವಸ್ತುಗಳು ಭಸ್ಮವಾಗಿದ್ದ ಹಿನ್ನೆಲೆಯಲ್ಲಿ ರೆಡ್‌ಕ್ರಾಸ್ ತಂಡ ಪರಿಶೀಲಿಸಿ ಸಾಂತ್ವಾನ ಹೇಳಿ ಧೈರ್ಯ ತುಂಬಿದ ಅವರು, ಮನೆಗೆ ತುರ್ತಾಗಿ ಅವಶ್ಯವಿರುವ ವಸ್ತುಗಳನ್ನು ವಿತರಿಸಿದರು.
ಪಾತ್ರೆಗಳು, ಕಿಚನ್ ಸೆಟ್, ಬೆಡ್‌ಶೀಟ್, ಜಮಕಾನ, ಆಹಾರ ಪದಾರ್ಥ, ಬಟ್ಟೆಗಳು, ಸೀರೆ, ಪಂಚೆ, ಅಗತ್ಯ ಸಾಮಾಗ್ರಿಗಳನ್ನು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಶಿವಮೊಗ್ಗ ಘಟಕದಿಂದ ವಿತರಿಸಲಾಯಿತು.
Red Cross Shivamogga ಇದೇ ಸಂದರ್ಭದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಶಿವಮೊಗ್ಗ ಘಟಕದ ಕಾರ್ಯದರ್ಶಿ ಎ.ಎಂ.ಸುರೇಶ್ ಮಾತನಾಡಿ, ರೆಡ್‌ಕ್ರಾಸ್ ಸಂಸ್ಥೆ ಕರೊನಾ, ಸುನಾಮಿ, ತುರ್ತು ಅವಘಡ ಸಂದರ್ಭಗಳಲ್ಲಿ ಮಾನವೀಯ ಸೇವಾ ಕಾರ್ಯಗಳನ್ನು ನಡೆಸಿದೆ. ತುರ್ತು ಪರಿಸ್ಥಿತಿಗಳಲ್ಲಿ ಅಗತ್ಯವಿರುವ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ ಎಂದು ತಿಳಿಸಿದರು.
ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ರತ್ನಮ್ಮ ಎಂಬುವವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಬಹುತೇಕ ವಸ್ತುಗಳು ಸುಟ್ಟು ಹೋಗಿದ್ದು, ಸಂಸ್ಥೆ ವತಿಯಿಂದ ತುರ್ತಾಗಿ ಅವರಿಗೆ ಅವಶ್ಯವಿರುವ ವಸ್ತುಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ಅಗತ್ಯ ಸಾಮಾಗ್ರಿಗಳನ್ನು ವಿತರಿಸುವ ಸಂದರ್ಭದಲ್ಲಿ ನಿರ್ದೇಶಕರಾದ ನವೀನ್, ಗಿರೀಶ್ ಶೇಟ್, ಜಗದೀಶ್, ಜಿ.ವಿಜಯಕುಮಾರ್, ಧರಣೇಂದ್ರ ದಿನಕರ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...