Monday, December 15, 2025
Monday, December 15, 2025

Karnataka Lokayukta ಭದ್ರಾವತಿ ತಾಲ್ಲೂಕಿನ ಕೆಲವು ಅಂಗನವಾಡಿ‌ ಕೇಂದ್ರಗಳ ಬಗ್ಗೆ ಲೋಕಾಯುಕ್ತ ಅಧಿಕಾರಿಗಳ‌ ಪರಿಶೀಲನಾ ವರದಿ

Date:

Karnataka Lokayukta ಶ್ರೀ ಮಂಜುನಾಥ್ ಚೌದರಿ ಎಂ.ಹೆಚ್ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ರವರ ಮಾರ್ಗದರ್ಶದಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರವರುಗಳಾದ ಶ್ರೀ.ಸುರೇಶ್ ಹೆಚ್.ಎಸ್. ಶ್ರೀ.ಪ್ರಕಾಶ. ಶ್ರೀ.ವೀರಬಸಪ್ಪ.ಎಲ್ ಕುಸಲಾಪುರ ಮತ್ತು ಸಿಬ್ಬಂದಿಗಳೊಂದಿಗೆ ಭದ್ರಾವತಿ ತಾಲ್ಲೂಕ್ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆಯನ್ನು ಕೈಗೊಂಡಿದ್ದರು.

ಭದ್ರಾವತಿ ತಾಲ್ಲೂಕಿನ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಾದ 1.ಬೊಮ್ಮನಕಟ್ಟೆ-01, 2. ಬೊಮ್ಮನಕಟ್ಟಿ ಆಶ್ರಯ ಕಾಲೋನಿ, 3.ಹಿರಿಯೂರು-01, 4.ಹಿರಿಯೂರು-02 5.ಸಿರಿಯೂರು ಕ್ಯಾಂಪ್, 6.ಸಿರಿಯೂರು ತಾಂಡ, 7. ಸಿರಿಯೂರು ವೀರಾಪುರ, 8. ಕಲ್ಲಹಳ್ಳಿ, 9.ಹೊಸಸಿದ್ದಾಪುರ, 10.ಸಿದ್ದಾಪುರ ತಾಂಡ, 11. ಹೊಸೂರು 12. ಹೊಸೂರು ಕ್ಯಾಂಪ್ ಗಳಿಗೆ ಭೇಟಿ ನೀಡಿದಾಗ ಕೆಲವೊಂದು ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಕೊರೆತೆ ಕಂಡು ಬಂದಿರುತ್ತದೆ. ಕೆಲವು ಅಂಗನವಾಡಿ ಕೇಂದ್ರದ ಕೊಠಡಿಗಳು ಶಿಥಲಾ ವ್ಯವಸ್ಥೆಯಲ್ಲಿದ್ದು, ಯಾವುದೇ ಸಮಯದಲ್ಲಿ ಕೊಠಡಿಗಳು ಬಿದ್ದು ಅನಾಹುತವುಂಟಾಗುವ ಸಾಧ್ಯತೆ ಕಂಡು ಬಂದಿರುತ್ತದೆ. ಅಂಗನವಾಡಿ ಸುತ್ತಲೂ ಕಾಂಪೌಂಡ್ ವ್ಯವಸ್ಥೆ ಇರುವುದಿಲ್ಲ, ಸಮರ್ಪಕವಾಗಿ ದಾಖಲಾತಿಗಳನ್ನು ನಿರ್ವಹಿಸದೇ ಕಂಡು ಬಂದಿರುತ್ತದೆ. ಅಂಗನವಾಡಿಗಳಿಗೆ ಸರಬರಾಜು ಮಾಡಿದ ಸಾಮಗ್ರಿಗಳನ್ನು ವ್ಯವಸ್ಥಿತವಾಗಿ ಇಟ್ಟುಕೊಂಡಿರುವುದಿಲ್ಲ. ಅಹಾರ ಪದಾರ್ಥಗಳ ಭೌತಿಕ ದಾಸ್ತಾನಗಳಿಗೂ ಹಾಗೂ ದಾಸ್ತಾನು ನಿರ್ವಹಣೆ ಪುಸ್ತಕಗಳ ಅಂಕಿ-ಸಂಖ್ಯೆಗಳಲ್ಲಿ ವ್ಯತ್ಯಾಸ ಕಂಡು ಬಂದಿರುತ್ತದೆ. ಅಂಗನವಾಡಿಗಳಲ್ಲಿ ಸ್ವಚ್ಚತೆಯನ್ನು ಸರಿಯಾಗಿ ನಿರ್ವಹಿಸಿರುವುದಿಲ್ಲ. ಗರ್ಭಿಣಿಯರಿಗೆ ಮತ್ತು ಬಾಣಂತಿಯವರಿಗೆ ವಿತರಿಸಬೇಕಾದ ಆಹಾರ ಪದಾರ್ಥವನ್ನು ಸರಿಯಾಗಿ ವಿತರಿಸದೇ ಇರುವುದು ಕಂಡು ಬಂದಿರುತ್ತದೆ.

Karnataka Lokayukta ಆಹಾರದಲ್ಲಿ ತರಕಾರಿಗಳನ್ನು ಬಳಸದೇ ಇರುವುದು ಕಂಡು ಬಂದಿರುತ್ತದೆ. ಬೊಮ್ಮನಕಟ್ಟೆ ಆಶ್ರಯ ಕಾಲೋನಿಯಲ್ಲಿರುವ ಅಂಗನವಾಡಿಯು ಸುಮಾರು 30ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿದ್ದು, ಇಲ್ಲಿಯವರೆಗೂ ಅಂಗನವಾಡಿ ಕೇಂದ್ರದ ಕಟ್ಟಡವನ್ನು ನಿರ್ಮಾಣವಾಗಿರುವುದಿಲ್ಲ. ಕೆಲವೊಂದು ಅಂಗನವಾಡಿ ಕೇಂದ್ರಗಳಲ್ಲಿ ಸರಿಯಾದ ಶೌಚಾಲಯಗಳ ವ್ಯವಸ್ಥೆ ಇರುವುದಿಲ್ಲ ಹಾಗೂ ಮಕ್ಕಳಿಗೆ ವೈಧ್ಯಾಧಿಕಾರಿಗಳು ಕಾಲ-ಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡದೇ ಇರುವುದು ಕಂಡು ಬಂದಿರುತ್ತದೆ. ಸದರಿ ನ್ಯೂನತೆಗಳ ಬಗ್ಗೆ ಮೇಲಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸಲಾಗುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...