Thursday, September 17, 2026
Thursday, September 17, 2026

CM Siddharamaiah ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಹಾಕಲು ಬಲಿಷ್ಠ ಕಾಯಿದೆ ತರಲಾಗುವುದು- ಸಿದ್ಧರಾಮಯ್ಯ

Date:

CM Siddharamaiah ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ನಿವಾರಣೆ ಹಾಗೂ ಮೈಕ್ರೋ ಫೈನಾನ್ಸ್‌ಗಳ ಹಾವಳಿಗೆ ಕಡಿವಾಣ ಹಾಕುವ ಸಂಬಂಧ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಮಾತನಾಡಿದರು.

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಬಲಿಷ್ಠ ಕಾಯ್ದೆಯನ್ನು ಆದಷ್ಟು ಬೇಗನೆ ಜಾರಿ ಮಾಡಲಾಗುವುದು. ಈ ಕುರಿತು ಕಾನೂನು ಇಲಾಖೆ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ ಎಂದರು.

ಕಾಯ್ದೆ ಸಂಪೂರ್ಣ ಸಂವಿಧಾನ ಬದ್ಧವಾಗಿದ್ದು, ಯಾವುದೇ ಲೋಪದೋಷಗಳನ್ನು ಹೊಂದಿರಬಾರದು. ಸಾಲಗಾರರು ಎದುರಿಸುತ್ತಿರುವ ಕಿರುಕುಳವನ್ನು ತಪ್ಪಿಸಲು ಹಾಗೂ ಸಾಲ ನೀಡಿದವರು ಬಲವಂತದ ವಸೂಲಿ ಮಾಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಬಲಿಷ್ಠ ಕಾಯ್ದೆ ರಚಿಸಲಾಗುವುದು. ಕಾಯ್ದೆಯಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಒಂಬುಡ್ಸ್‌ಮೆನ್‌ ಗಳ ನೇಮಕ ಮಾಡಲಾಗುವುದು. ಅಮಾನವೀಯವಾಗಿ ಬಲವಂತದ ಸಾಲ ವಸೂಲಾತಿ ಮಾಡುವವರಿಗೆ ಜಾಮೀನುರಹಿತ ಪ್ರಕರಣ ದಾಖಲು ಸೇರಿದಂತೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ ಅವಕಾಶ ಸಿಗುವಂತೆ ಕಾನೂನು ರೂಪಿಸಲಾಗುವುದು ಎಂದು ತಿಳಿಸಿದರು.

CM Siddharamaiah ನೋಂದಣಿಯಾಗದ ಲೇವಾದೇವಿಗಾರರ ಕಿರುಕುಳವನ್ನು ತಪ್ಪಿಸಲು ಕಠಿಣ ಕಾನೂನು ಜಾರಿ ಮಾಡಲಾಗುವುದು. ಪ್ರಸ್ತುತವಿರುವ ಕಾನೂನಿನಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ನಿಯಂತ್ರಿಸಲು ಹಲವು ಅವಕಾಶಗಳಿದ್ದು, ತಾತ್ಕಾಲಿಕವಾಗಿ ಇದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದು, ಸಂತ್ರಸ್ತರು ದೂರು ದಾಖಲು ಮಾಡುವ ತನಕ ಕಾಯದೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...