Thursday, September 17, 2026
Thursday, September 17, 2026

Davanagere News ಕುಹಕಿಗಳು ತಮ್ಮ ಅಜ್ಞಾನದಿಂದ ಸನಾತನ ಚಿಂತನೆಗಳನ್ನೇ ತಪ್ಪಾಗಿ‌ ಅರ್ಥೈಸುತ್ತಾರೆ- ಡಾ.ಎಚ್.ಬಿ.ಮಂಜುನಾಥ್

Date:

Davanagere News  ತನ್ನನ್ನು ತಾನು ಯತಾರ್ಥವಾಗಿ ಅರ್ಥಮಾಡಿಕೊಳ್ಳುವ ಅರಿವೇ ಅಧ್ಯಾತ್ಮವಾಗಿದ್ದು ಇದು ಎಷ್ಟು ಕಷ್ಟವೆಂದು ಭಾವಿಸುತ್ತಾರೋ ಅಷ್ಟೇ ಸುಲಭವೂ ಆಗಿದೆ ಎಂದು ಹಿರಿಯ ಪತ್ರಕರ್ತ ಡಾ.ಎಚ್ ಬಿ ಮಂಜುನಾಥ ಅಭಿಪ್ರಾಯ ಪಟ್ಟರು.

ದಾವಣಗೆರೆ ನಗರದ ದೇವರಾಜ ಅರಸು ಬಡಾವಣೆಯಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದ 27ನೇ ವಾರ್ಷಿಕೋತ್ಸವದ ಅಂಗವಾಗಿ ಏರ್ಪಾಡಾಗಿದ್ದ ಧಾರ್ಮಿಕ ಮತ್ತು ಆಧ್ಯಾತ್ಮಿಕ ವಿಷಯವಾಗಿ ಉಪನ್ಯಾಸ ನೀಡುತ್ತಾ ತನ್ನ ಆತ್ಮದ ಅರಿವಾದಾಗ ನಾಮ ರೂಪಾತ್ಮಕವಾಗಿ ಬೇರೆ ಬೇರೆಯಾದರೂ ಎಲ್ಲರಲ್ಲಿರುವುದು ತನ್ನಂತಹುದೇ ಆತ್ಮ ಎಂಬುದು ವೇದ್ಯವಾಗುತ್ತದೆ, ಇದು ಪರಮಾತ್ಮವನ್ನು ಅರಿವಿಗೆ ತಂದುಕೊಳ್ಳಲು ಸಾಧನ ಸೋಪಾನವಾಗುತ್ತದೆ, ಇಂತಹ ಪ್ರಕ್ರಿಯೆಗಳು ಪ್ರಪಂಚದಲ್ಲಿ ಭಾರತ ದೇಶದಲ್ಲಿ ಮಾತ್ರವೇ ಸಾಧ್ಯ, ಕಾರಣ ನಮ್ಮ ಸನಾತನ ಚಿಂತನೆಗಳು ಇದಕ್ಕೆಲ್ಲ ಮಾರ್ಗಸೂಚಿಗಳಾಗಿವೆ, ಆದರೆ ಕುಹಕಿಗಳು ನಮ್ಮ ಸನಾತನ ಚಿಂತನೆಗಳನ್ನೇ ತಪ್ಪಾಗಿ ಅರ್ಥೈಸುತ್ತಾರೆ, ಇದಕ್ಕೆ ಅವರ ಅಜ್ಞಾನ ಅಥವಾ ಪೂರ್ವಗ್ರಹಗಳೇ ಕಾರಣವಾಗಿವೆ, ಆಧ್ಯಾತ್ಮಿಕ ಚಿಂತನೆಯ ಹಾದಿಯಲ್ಲಿರುವವರ ದಾರಿ ತಪ್ಪಿಸಲು ಹೊರಟವರು ತಾವೇ ದಾರಿ ತಪ್ಪಿ ಕಂಗಾಲಾಗಿ ಕೊನೆಗೆ ದಾರಿ ಕಾಣಲು ತಾವು ಧಿಕ್ಕರಿಸಿದ ಅಧ್ಯಾತ್ಮಕ್ಕೆ ಮೊರೆ ಹೋಗುತ್ತಾರೆ ಎಂಬುದನ್ನು ಸ್ವಾರಸ್ಯಕರ ಉದಾಹರಣೆಗಳ ಮೂಲಕ ವಿವರಿಸಿದರು.

Davanagere News ಲಯನ್ಸ್ ಭವನದ ಹೊರಾವರಣದಲ್ಲಿ ನೆರವೇರಿದ ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ದೀಪಾ ಮಾಡಿದರೆ ಪ್ರಾರ್ಥನೆಯನ್ನು ವಿದುಷಿ ಶೀಲಾ ನಟರಾಜ ಹಾಡಿದರು. ಸ್ವಾಗತವನ್ನು ಕಾರ್ಯಕಾರಿ ಸಮಿತಿ ಅಧ್ಯಕ್ಷ ಪ್ರಕಾಶ್ ಪಾಟೀಲ್ ಕೋರಿದರು. ಗೌರವಾಧ್ಯಕ್ಷ ಆರ್ ಜಿ ನಾಗೇಂದ್ರ ಪ್ರಕಾಶ್ ಪ್ರಾಸ್ತಾವಿಕ ನುಡಿಗಳ ನಾಡಿದರು. ಕಾರ್ಯದರ್ಶಿ ವಿ ವೀರಭದ್ರರಾವ್, ಖಜಾಂಚಿಗಳಾದ ನಾಗಭೂಷಣ್ ಕಡೆ ಕೊಪ್ಪ, ತಾತಾ ಕೆ ಜಯಂತ್ ಹಾಗೂ ಶ್ರೀಮತಿ ಪ್ರಭಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...