Monday, February 2, 2026
Monday, February 2, 2026

Channagiri Keshava Murthy ವಿಶ್ವಮಟ್ಟದ ಕ್ರಿಕೆಟ್ ಅಂಕಿ ಅಂಶ ತಜ್ಞ ಚನ್ನಗಿರಿ ಕೇಶವಮೂರ್ತಿ‌‌ ಅವರ ಪುಸ್ತಕ ಲೋಕಾರ್ಪಣೆ

Date:

Channagiri Keshava Murthy ವಿಶ್ವಮಾನ್ಯ ಕ್ರಿಕೆಟ್ ಅಂಕಿ ಅಂಶ ತಜ್ಞ ಚನ್ನಗಿರಿ ಕೇಶವಮೂರ್ತಿ ಅವರ ಜೀವನ ಸಾಧನೆಯ ‘ಸಾಹಿತ್ಯವೇ ಹಸಿರು ಕ್ರಿಕೆಟೇ ಉಸಿರು’ ಯಶೋಗಾಥೆ ಪುಸ್ತಕ ಲೋಕಾರ್ಪಣೆಗೊಂಡಿತು.

ವಿಶ್ವ ವಿಖ್ಯಾತ ಕ್ರಿಕೆಟ್‌ನ ಸ್ಪಿನ್ ಮಾಂತ್ರಿಕ ಬಿ.ಎಸ್. ಚಂದ್ರಶೇಖರ್ ಅವರು ಜಯನಗರದ ತಮ್ಮ ಸ್ವಗೃಹದಲ್ಲಿ ಪುಸ್ತಕ ಬಿಡುಗಡೆ ಮಾಡಿದರು.

ಚನ್ನಗಿರಿ ಕೇಶವಮೂರ್ತಿ ಅವರ ಸಾಹಿತ್ಯ ಮತ್ತು ಕ್ರಿಕೆಟ್ ಸೇವೆ ಮಾದರಿಯಾಗಿದ್ದು, ಅವರೊಬ್ಬ ಶ್ರೇಷ್ಠ ಕ್ರಿಕೆಟ್ ಅಂಕಿ ಅಂಶ ತಜ್ಞರಾಗಿರುವುದು ನಮ್ಮ ಕರ್ನಾಟಕದ ಹೆಮ್ಮೆ ಎಂದು ಅವರು ಪ್ರಶಂಸಿಸಿದರು.

ಕೇಶವಮೂರ್ತಿ ಕುರಿತ ‘ಸಾಹಿತ್ಯವೇ ಹಸಿರು ಕ್ರಿಕೆಟೇ ಉಸಿರು’ ಪುಸ್ತಕ ಸಾಹಿತ್ಯ ಹಾಗೂ ಕ್ರಿಕೆಟ್ ಆಸಕ್ತರಿಗೆ ಮಾರ್ಗದರ್ಶಿಯಾಗಿದೆ ಎಂದು ಅವರು ತಿಳಿಸಿದರು.

Channagiri Keshava Murthy ಪತ್ತೇದಾರಿ ಕಾದಂಬರಿಗಳನ್ನೂ ಬರೆದಿರುವ ಕೇಶವಮೂರ್ತಿ ಅವರು ಕ್ರಿಕೆಟ್ ಕುರಿತು ಪುಸ್ತಕಗಳ ರಚನೆ ಮಾಡಿರುವುದು ಕ್ರೀಡಾ ಸಾಹಿತ್ಯಕ್ಕೆ ಅನನ್ಯ ಕೊಡುಗೆಗಳಾಗಿವೆ ಎಂದು ಸಂಧ್ಯಾ ಚಂದ್ರಶೇಖರ್ ಹೇಳಿದರು.

85ರ ಇಳಿವಯಸ್ಸಿನಲ್ಲೂ ಚನ್ನಗಿರಿ ಕೇಶವಮೂರ್ತಿ ಅವರು ಇವತ್ತಿಗೂ ಕ್ರಿಕೆಟ್ ಅಂಕಿ ಅಂಶ ದಾಖಲು ಮಾಡುತ್ತಿರುವುದು ಅಪರೂಪ ಎಂದು ಚಂದ್ರಶೇಖರ್ ದಂಪತಿಗಳು ಶುಭ ಹಾರೈಸಿದರು.

ಪುಸ್ತಕದ ಸಂಪಾದಕ ಕಗ್ಗೆರೆ ಪ್ರಕಾಶ್, ಸಿಕೆಎಂ ಮಗ ಸಂಜಯ್ ಚನ್ನಗಿರಿ, ಮಗಳು ಸವಿತಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...