Tuesday, December 16, 2025
Tuesday, December 16, 2025

Channagiri Keshava Murthy ವಿಶ್ವಮಟ್ಟದ ಕ್ರಿಕೆಟ್ ಅಂಕಿ ಅಂಶ ತಜ್ಞ ಚನ್ನಗಿರಿ ಕೇಶವಮೂರ್ತಿ‌‌ ಅವರ ಪುಸ್ತಕ ಲೋಕಾರ್ಪಣೆ

Date:

Channagiri Keshava Murthy ವಿಶ್ವಮಾನ್ಯ ಕ್ರಿಕೆಟ್ ಅಂಕಿ ಅಂಶ ತಜ್ಞ ಚನ್ನಗಿರಿ ಕೇಶವಮೂರ್ತಿ ಅವರ ಜೀವನ ಸಾಧನೆಯ ‘ಸಾಹಿತ್ಯವೇ ಹಸಿರು ಕ್ರಿಕೆಟೇ ಉಸಿರು’ ಯಶೋಗಾಥೆ ಪುಸ್ತಕ ಲೋಕಾರ್ಪಣೆಗೊಂಡಿತು.

ವಿಶ್ವ ವಿಖ್ಯಾತ ಕ್ರಿಕೆಟ್‌ನ ಸ್ಪಿನ್ ಮಾಂತ್ರಿಕ ಬಿ.ಎಸ್. ಚಂದ್ರಶೇಖರ್ ಅವರು ಜಯನಗರದ ತಮ್ಮ ಸ್ವಗೃಹದಲ್ಲಿ ಪುಸ್ತಕ ಬಿಡುಗಡೆ ಮಾಡಿದರು.

ಚನ್ನಗಿರಿ ಕೇಶವಮೂರ್ತಿ ಅವರ ಸಾಹಿತ್ಯ ಮತ್ತು ಕ್ರಿಕೆಟ್ ಸೇವೆ ಮಾದರಿಯಾಗಿದ್ದು, ಅವರೊಬ್ಬ ಶ್ರೇಷ್ಠ ಕ್ರಿಕೆಟ್ ಅಂಕಿ ಅಂಶ ತಜ್ಞರಾಗಿರುವುದು ನಮ್ಮ ಕರ್ನಾಟಕದ ಹೆಮ್ಮೆ ಎಂದು ಅವರು ಪ್ರಶಂಸಿಸಿದರು.

ಕೇಶವಮೂರ್ತಿ ಕುರಿತ ‘ಸಾಹಿತ್ಯವೇ ಹಸಿರು ಕ್ರಿಕೆಟೇ ಉಸಿರು’ ಪುಸ್ತಕ ಸಾಹಿತ್ಯ ಹಾಗೂ ಕ್ರಿಕೆಟ್ ಆಸಕ್ತರಿಗೆ ಮಾರ್ಗದರ್ಶಿಯಾಗಿದೆ ಎಂದು ಅವರು ತಿಳಿಸಿದರು.

Channagiri Keshava Murthy ಪತ್ತೇದಾರಿ ಕಾದಂಬರಿಗಳನ್ನೂ ಬರೆದಿರುವ ಕೇಶವಮೂರ್ತಿ ಅವರು ಕ್ರಿಕೆಟ್ ಕುರಿತು ಪುಸ್ತಕಗಳ ರಚನೆ ಮಾಡಿರುವುದು ಕ್ರೀಡಾ ಸಾಹಿತ್ಯಕ್ಕೆ ಅನನ್ಯ ಕೊಡುಗೆಗಳಾಗಿವೆ ಎಂದು ಸಂಧ್ಯಾ ಚಂದ್ರಶೇಖರ್ ಹೇಳಿದರು.

85ರ ಇಳಿವಯಸ್ಸಿನಲ್ಲೂ ಚನ್ನಗಿರಿ ಕೇಶವಮೂರ್ತಿ ಅವರು ಇವತ್ತಿಗೂ ಕ್ರಿಕೆಟ್ ಅಂಕಿ ಅಂಶ ದಾಖಲು ಮಾಡುತ್ತಿರುವುದು ಅಪರೂಪ ಎಂದು ಚಂದ್ರಶೇಖರ್ ದಂಪತಿಗಳು ಶುಭ ಹಾರೈಸಿದರು.

ಪುಸ್ತಕದ ಸಂಪಾದಕ ಕಗ್ಗೆರೆ ಪ್ರಕಾಶ್, ಸಿಕೆಎಂ ಮಗ ಸಂಜಯ್ ಚನ್ನಗಿರಿ, ಮಗಳು ಸವಿತಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...