Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಇಂದು ಮಲ್ಲೇಶ್ವರಂ ಸಿ.ವಿ.ರಾಮನ್ ರಸ್ತೆಯಲ್ಲಿರುವ ಐ.ಐ.ಎಸ್.ಸಿ ಆವರಣದ ಜೆ.ಎನ್.ಟಾಟಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ 2023 ಮತ್ತು 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.
ಈ ಸಮಯದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ. ಬಿ.ಬಿ. ಕಾವೇರಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಶ್ರೀಮತಿ ಆಯೇಶಾ ಖಾನಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಸೇರಿದಂತೆ ಗಣ್ಯರು, ಹಿರಿಯ ಅಧಿಕಾರಿಗಳು, ಮಾಧ್ಯಮ ಮಿತ್ರರು ಉಪಸ್ಥಿತರಿದ್ದರು.