Monday, June 23, 2025
Monday, June 23, 2025

JCI Shimoga Sahyadri Institute ಕಂಪ್ಯೂಟ‌ರ್, ಮೊಬೈಲ್ ಗಳ ಅತೀ ವೀಕ್ಷಣೆ. ಮಕ್ಕಳಲ್ಲಿ ಕಣ್ಣಿನ ಸಮಸ್ಯೆ ಹೆಚ್ಚುಮಾಡುತ್ತಿದೆ ಡಾ.ದೀಪಾ

Date:

JCI Shimoga Sahyadri Institute ಕಂಪ್ಯೂಟರ್, ಮೊಬೈಲ್‌ನ ಅತಿಯಾದ ಬಳಕೆಯಿಂದ ಮಕ್ಕಳಲ್ಲಿ ಕಣ್ಣಿನ ಸಮಸ್ಯೆ ಹೆಚ್ಚಾಗುತ್ತಿದೆ. ಕಣ್ಣಿಗೆ ವಿಶ್ರಾಂತಿ ಇಲ್ಲದಿರುವುದು ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಆದರ್ಶ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞೆ ಡಾ. ದೀಪಾ ಹೇಳಿದರು.

ನಗರದ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆ ವತಿಯಿಂದ ಕಣ್ಣಿನ ಆರೋಗ್ಯದ ಜಾಗೃತಿ ಹಾಗೂ ಉಚಿತ ನೇತ್ರ ತಪಾಸಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಆಧುನಿಕ ಉಪಕರಣ ಬಳಕೆಯು ಕಣ್ಣು ನೋವು ಹೆಚ್ಚಲು ಕಾರಣ. ಸಕಾಲದಲ್ಲಿ ಕಣ್ಣು ತಪಾಸಣೆ ಮಾಡಿಸಿಕೊಳ್ಳುವುದು ಅವಶ್ಯ. ಪ್ರೋಟಿನ್‌ಯುಕ್ತ ಆಹಾರ ಸೇವಿಸಬೇಕು. ಸರಿಯಾದ ನಿದ್ರೆ ಮಾಡಬೇಕು ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ರೆಟಿನೋ, ರೆಟಿನೋಪತಿ, ಮ್ಯಾಕ್ಯುಲರ್ ಹಾಗೂ ಗ್ಲೊಕೊಮಾ ಕಾಯಿಲೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಬಾಲ್ಯದಲ್ಲೇ ಮಕ್ಕಳಿಗೆ ಕಣ್ಣಿನ ತಪಾಸಣೆ ಜತೆಗೆ ಅದರ ಅರಿವು ಮೂಡಿಸುವುದು ಅಗತ್ಯ ಎಂದರು.

JCI Shimoga Sahyadri Institute ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಗಣೇಶ್ ಮಾತನಾಡಿ, ಕಣ್ಣು ದೇಹದ ಪ್ರಮುಖ ಅಂಗ. ನಾವುಗಳು ಕಣ್ಣಿನ ಬಗ್ಗೆ ನಿರ್ಲಕ್ಷ್ಯ ಮಾಡಬಾರದು. ಮಕ್ಕಳಿಗೆ ಅನುಕೂಲ ಒದಗಿಸುವ ದೃಷ್ಟಿಯಿಂದ ಉಚಿತ ತಪಾಸಣಾ ಶಿಬಿರ ಆಯೋಜಿಸಿದ್ದೇವೆ. ಕಣ್ಣಿನ ಬಗ್ಗೆ ಹೆಚ್ಚು ಜಾಗೃತಿ ಹೊಂದಬೇಕು ಎಂದು ಹೇಳಿದರು.

ಶಿಬಿರದ ಅಧ್ಯಕ್ಷತೆ ವಹಿಸಿದ್ದ ಶ್ರೀನಿಧಿ ಎಜುಕೇಷನ್ ಟ್ರಸ್ಟ್ ಉಪಾಧ್ಯಕ್ಷ ಶ್ರೀಕಂಠಯ್ಯ ಮಾತನಾಡಿ, ಆರು ತಿಂಗಳಿಗೊಮ್ಮೆ ಕಣ್ಣಿನ ಪರೀಕ್ಷಿಸಿಕೊಳ್ಳಬೇಕು ಎಂದು ತಿಳಿಸಿದರು.

ಆಡಳಿತಾಧಿಕಾರಿ ಟಿ.ಪಿ.ನಾಗರಾಜ, ಗುರುಮೂರ್ತಿ ಗೌಡ, ಮುಖ್ಯಶಿಕ್ಷಕ ಉಮ್ಮಸಲ್ಮ, ಕೆ.ಪಿ.ಕುಮಾರಸ್ವಾಮಿ, ಕಾರ್ಯದರ್ಶಿ ಮಂಜುನಾಥ ರಾವ್ ಕದಂ, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಶೋಭಾ ಎಸ್.ಎನ್., ನಾಗರತ್ನ, 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...