Friday, February 28, 2025
Friday, February 28, 2025

Chamber Of Commerce Shivamogga ಕರ್ನಾಟಕ ತೆರಿಗೆ ಸಂಗ್ರಹದಲ್ಲಿ‌ ಎರಡನೇ ಸ್ಥಾನಕ್ಕೆ ತರುವಲ್ಲಿ ವಿತರಕರ ಪಾತ್ರ ಪ್ರಮುಖವಾಗಿದೆ- ಡಿ.ಎಸ್.ಅರುಣ್

Date:

Chamber Of Commerce Shivamogga ದೇಶದಲ್ಲಿ ಕರ್ನಾಟಕವನ್ನು ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿ ನಿಲ್ಲಿಸುವಲ್ಲಿ ವಿತರಕರ ಪಾತ್ರ ಮಹತ್ವದ ಆಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಶಿವಮೊಗ್ಗ ವಿತರಕರ ಸಂಘದ ವತಿಯಿಂದ ಫೆ. 2ರಂದು ಆಯೋಜಿಸಿದ್ದ ವಿತರಕರ ದಿನಾಚರಣೆ ಉದ್ಘಾಟನೆ ಮಾತನಾಡಿ, ಕರ್ನಾಟಕದ ಆರ್ಥಿಕ ಪ್ರಗತಿಯಲ್ಲಿ ವಿತರಕರ ಕೊಡುಗೆ ಮಹತ್ವದ್ದು ಎಂದು ತಿಳಿಸಿದರು.
ಕರ್ನಾಟಕದಲ್ಲಿ ಚಿಲ್ಲರೆ ಮಾರುಕಟ್ಟೆಯನ್ನು ಬೆಳೆಸುವ ಬಗ್ಗೆ ವಿತರಕರಿಗೆ ಮಾಹಿತಿಗಳನ್ನು ನೀಡುತ್ತ ದೇಶದ ಆರ್ಥಿಕತೆಗೆ ವಿತರಕರ ಉದ್ಯಮ ಅತಿ ಹೆಚ್ಚಿನ ಕೊಡುಗೆ ನೀಡುತ್ತಿದೆ ಎಂದರು.
ಕರ್ನಾಟಕ ಗ್ರಾಹಕ ವಸ್ತುಗಳ ವಿತರಕರ ಸಂಘಗಳ ಒಕ್ಕೂಟ ಅಧ್ಯಕ್ಷ ಗಿರೀಶ್ ಶಂಕರ್ ಸುಂಕದ ಮಾತನಾಡಿ, ಕಂಪನಿಗಳ ಹಾಗೂ ಸರ್ಕಾರದ ಕೆಲ ನೀತಿಗಳಿಂದ ವಿತರಕರ ಅಸ್ತಿತ್ವಕ್ಕೆ ಧಕ್ಕೆ ಬಂದಿರುತ್ತದೆ. ಇಂತಹ ಸಂದರ್ಭದಲ್ಲಿ ನಾವುಗಳೆಲ್ಲರೂ ಒಗ್ಗಟ್ಟಾಗಿ ನಮ್ಮ ಮುಂದಿರುವ ಸವಾಲುಗಳನ್ನ ಎದುರಿಸಬೇಕು ಎಂದರು.
ಕರ್ನಾಟಕ ಫೆಡರೇಶನ್ ಆಫ್ ಡಿಸ್ಟ್ರಿಬ್ಯೂಟರ್ಸ್ ವೆಲ್‌ಫೇರ್ ಅಸೋಸಿಯೇಷನ್ ಅಧ್ಯಕ್ಷ ಜಯಂತ್ ಗಾಣಿಗ್
ಮಾತನಾಡಿ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ವಿತರಕರ ಮಂಡಳಿ ರಚಿಸುವಂತೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇವೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ಹೆಚ್ಚಿನ ಮಟ್ಟದ ಭದ್ರತೆಯನ್ನು ವಿತರಿಕರಿಗೆ ನೀಡುವ ಭರವಸೆ ನೀಡಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ಕಂಪನಿ ಹಾಗೂ ವರ್ತಕರಿಗೆ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತಿರುವ ವಿತರಕರಿಗೆ ಆಧುನಿಕ ಮಾರುಕಟ್ಟೆಯ ವ್ಯವಸ್ಥೆಗೆ ನಾವು ನಮ್ಮ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳಬೇಕಾಗಿದೆ. ತಾಂತ್ರಿಕತೆಯನ್ನು ನಾವು ಉಪಯೋಗಿಸಿ ನಮ್ಮ ಆರ್ಡರ್ ಬುಕಿಂಗ್ ಹಾಗೂ ಸಪ್ಲೈ ಕೆಲಸಗಳಿಗೆ ಆಧುನಿಕತೆ ಸ್ಪರ್ಶ ನೀಡಿದಲ್ಲಿ ನಮ್ಮ ಹಲವಾರು ಸಮಸ್ಯೆಗಳನ್ನ ನಾವು ನೀಗಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ನಮ್ಮ ವಿತರಕರು ಗಮನಹರಿಸಬೇಕು ಎಂದರು.
Chamber Of Commerce Shivamogga ಶಿವಮೊಗ್ಗ ಜಿಲ್ಲಾ ವಿತರಕ ಸಂಘದ ಅಧ್ಯಕ್ಷ ದೇವರಾಜ್ ಎಂ ಸಿ ಮಾತನಾಡಿ, ನಮ್ಮ ದೇಶದಲ್ಲಿ ಯಾವುದೇ ಚಳವಳಿ ಪ್ರಾರಂಭವಾಗಿದ್ದಲ್ಲಿ ಅದು ಶಿವಮೊಗ್ಗ ಜಿಲ್ಲೆಯಿಂದ ಮಾತ್ರ. ಹೀಗೆ ವಿತರಕರ ದಿನ ಆಚರಣೆಯನ್ನು ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭಿಸಿ ರಾಷ್ಟ್ರಮಟ್ಟದವರೆಗೆ ಯಶಸ್ವಿಗೊಳಿಸಬೇಕು ಎಂದರು. ರಾಜ್ಯಮಟ್ಟದ ನಾಯಕರುಗಳಿಗೆ ಮನವಿ ಪತ್ರ ಸಲ್ಲಿಸುವುದರ ಮೂಲಕ ಆಗ್ರಹಿಸಿದರು.
ವಿತರಕರ ದಿನಾಚರಣೆ ಅಂಗವಾಗಿ 29 ಜನ ಸಂಸ್ಥಾಪಕ ಸದಸ್ಯರುಗಳಿಗೆ ಸನ್ಮಾನಿಸಲಾಯಿತು. 27 ಕಂಪೆನಿಗಳಿಂದ ಫ್ರೀ ಸ್ಯಾಂಪಲ್ ಪಡೆದು 125 ಕಿಟ್‌ಗಳನ್ನು ತಯಾರಿಸಿ ಬಂದಂತಹ ಎಲ್ಲ ಸದಸ್ಯರುಗಳಿಗೆ ವಿತರಿಸಲಾಯಿತು. ಭದ್ರಾವತಿ, ಶಿಕಾರಿಪುರ, ಸಾಗರ, ಗದಗ ಹಾಗೂ ಕೊಪ್ಪದಿಂದ ಆಗಮಿಸಿದ ಪದಾಧಿಕಾರಿಗಳಿಗೂ ಗೌರವಿಸಿ ಸನ್ಮಾನಿಸಲಾಯಿತು. ಶಿವಮೊಗ್ಗ ವಿತರಕರ ಸಂಘದ ಉಪಾಧ್ಯಕ್ಷ ಬದರಿನಾಥ್ ಬಿ ಆರ್ ಸ್ವಾಗತಿಸಿದರು. ಕಾರ್ಯದರ್ಶಿ ಗಿರೀಶ್ ಅತಿಥಿಗಳನ್ನು ಪರಿಚಯಿಸಿದರು. ಶ್ರೀನಿವಾಸ್ ವಂದನಾರ್ಪಣೆ ಮಾಡಿದರು. ಜಂಟಿ ಕಾರ್ಯದರ್ಶಿ ಅರವಿಂದ್ ಮನವಿ ಪತ್ರವನ್ನು ಓದಿದರು. ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರುಗಳು ಹಾಗೂ ಸದಸ್ಯರುಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Santosh Lad ಪುಣ್ಯಾಶ್ರಮದಲ್ಲಿ ಸಚಿವ‌ ಸಂತೋಷ್ ಲಾಡ್ ಅಭಿಮಾನಿಗಳಿಂದ‌‌ ಜನ್ಮದಿನಾಚರಣೆ

Santosh Lad ಯುವಕರ ಆಶಾಕಿರಣ, ಸ್ನೇಹಜೀವಿ, ಅಹಿಂದ ವರ್ಗದ ನಾಯಕ ಕರ್ನಾಟಕ...

Skate Game ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆ.ಶಿವಮೊಗ್ಗದ ಅನೂಪ್ ಶೆಟ್ಟಿಗೆ ಪ್ರಥಮ ಸ್ಥಾನ

Skate Game ತಮಿಳುನಾಡಿನ ಕರೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್‌ಶಿಪ್...

Shimoga News ಆನವಟ್ಟಿ ಪಟ್ಟಣ ಪಂಚಾಯತಿಯಲ್ಲಿ ಎ ಮತ್ತು ಬಿ‌ ಖಾತಾಪಡೆಯಲು ಅವಕಾಶ

Shimoga News ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ದಿ: 10/09/2024ರ ಅಂತ್ಯದವರೆಗೆ...