Monday, February 2, 2026
Monday, February 2, 2026

Malnad Cancer Hospital Shimoga ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ಶಿಬಿರ

Date:

Malnad Cancer Hospital Shimoga ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳ ಕಚೇರಿ,ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಎನ್ ಸಿ ಡಿ ಘಟಕ, ಜಿಲ್ಲಾ ಕ್ಷಯ ರೋಗ ನಿರ್ಮೂಲನ ಕಾರ್ಯಕ್ರಮ, DAPCU ವಿಭಾಗ, ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜು, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಹಾಗೂ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಶಿವಮೊಗ್ಗ ಸಹಯೋಗದೊಂದಿಗೆ ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ “ಮಹಾನಗರ ಪಾಲಿಕೆಯ ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ” ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ನಾಗೇಶ್ ವಹಿಸಿದ್ದರು. ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿ ಡಾ.ರೇಖಾ, ತಾಲೂಕು ಆರೋಗ್ಯ ಅಧಿಕಾರಿ ಡಾ.ಡಿ.ಬಿ
ಚಂದ್ರಶೇಖರ್ , ಸಹಾಯಕ ಕಾರ್ಯಪಾಲಕ ಅಭಿಯಂತರರು ಪುಷ್ಪವತಿ, ಪರಿಸರ ಅಭಿಯಂತರು ತ್ರಿವೇಣಿ, ಜಿಲ್ಲಾ ದಂತ ನೋಡಲ್ ಅಧಿಕಾರಿ ಡಾ. ಮೋಹನ್, ಸುಬ್ಬಯ್ಯ ದಂತ ಮಹಾವಿದ್ಯಾಲಯದ
ಡಾ. ವಿವೇಕ್ ,ದಂತ ಆರೋಗ್ಯ ಅಧಿಕಾರಿ ಡಾ. ಸತೀಶ್, ಮಲ್ನಾಡ್ ಕ್ಯಾನ್ಸರ್ ಹಾಸ್ಪಿಟಲ್ ನ ರೇಡಿಯೋ ಅಂಕಾಲಜಿಸ್ಟ್ ಡಾ. ಅಮಿತ್ ರಾಜ್, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಡಾ. ಹರ್ಷವರ್ಧನ್ , ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರರು ಹೇಮಂತ್ ರಾಜ್ ಅರಸ್, ಎನ್.ಸಿ.ಡಿ ವಿಭಾಗದ ಜಿಲ್ಲಾ ಕಾರ್ಯಕ್ರಮ ಸಂಯೋಜಕರಾದ ಡಾ. ಅಫೀಫಾ ಉಪಸ್ಥಿತರಿದ್ದರು.
Malnad Cancer Hospital Shimoga ಸಮಾಜ ಕಾರ್ಯಕರ್ತರಾದ ರವಿರಾಜ್ ಜಿ.ಕೆ, ಆಪ್ತ ಸಮಾಲೋಚಕರಾದ ಶಿವಕುಮಾರ್ ಎಸ್.ಟಿ, ಪ್ರವೀಣ್ ಕೆ , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಗಳು ಮತ್ತು ಸಿಬ್ಬಂದಿಗಳು ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಕ್ರಮ
ದಲ್ಲಿ ಭಾಗವಹಿಸಿದ್ದರು.
ಆರೋಗ್ಯ ತಪಾಸಣಾ ಶಿಬಿರದಲ್ಲಿ ಒಟ್ಟು 282 ಜನ ಪೌರ ಕಾರ್ಮಿಕರು ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...