Monday, December 15, 2025
Monday, December 15, 2025

Mysore University ಮುಖ್ಯ ಸಾರಿಗೆ ಇಂಜಿನಿಯರ್ ಕೆ‌‌.ವೀರೇಗೌಡರಿಗೆ ಮೈಸೂರ ವಿವಿಯ ಗೌರವ ಡಾಕ್ಟರೇಟ್

Date:

Mysore University ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಬಾಬು ಕೆ ವೀರೇಗೌಡ ಅವರಿಗೆ ನೀಡಲಾಗಿರುವ ಗೌರವ ಡಾಕ್ಟರೇಟ್ ಅನ್ನು ರಾಜಭವನದ ಬಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, “ಮೈಸೂರು ವಿಶ್ವವಿದ್ಯಾಲಯವು ದೇಶದ ಆರನೇ ಅತ್ಯಂತ ಹಳೆಯ ವಿಶ್ವವಿದ್ಯಾಲಯ ಮತ್ತು ಕರ್ನಾಟಕ ರಾಜ್ಯದ ಮೊದಲ ವಿಶ್ವವಿದ್ಯಾಲಯವಾಗಿದೆ. ಈ ವಿಶ್ವವಿದ್ಯಾಲಯವು ಈ ದೇಶಕ್ಕೆ ಅನೇಕ ವಿಜ್ಞಾನಿಗಳು, ತತ್ವಜ್ಞಾನಿಗಳು ಮತ್ತು ರಾಜಕಾರಣಿಗಳನ್ನು ನೀಡಿದ್ದು, ಇವೆರಲ್ಲರೂ ಕರ್ನಾಟಕ ಮತ್ತು ಭಾರತದ ನಿರ್ಮಾಣದಲ್ಲಿ ಜ್ಞಾನ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಕೊಡುಗೆ ನೀಡಿದ್ದಾರೆ” ಎಂದು ಶ್ಲಾಘಿಸಿದರು.

“ಘಟಿಕೋತ್ಸವದ ಸಂದರ್ಭದಲ್ಲಿ ಶಿಕ್ಷಣ, ವಿಜ್ಞಾನ, ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಮತ್ತು ದೇಶದ ಪ್ರಗತಿಗೆ ಗಣನೀಯ ಕೊಡುಗೆ ನೀಡಿದ ಮಹನೀಯರಿಗೆ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿಗಳನ್ನು ನೀಡುತ್ತಿರುವುದು ಸಂತೋಷದ ಸಂಗತಿಯಾಗಿದೆ” ಎಂದು ಹೇಳಿದರು.

Mysore University “ಮೈಸೂರು ವಿಶ್ವವಿದ್ಯಾಲಯ ವತಿಯಿಂದ ಈ ದಿನ ಡಾ.ಬಾಬು ಕೆ ವೀರೇಗೌಡ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ಎಚ್ ಎನ್ ಟಿಬಿ ಯ ಈಶಾನ್ಯ ವಿಭಾಗದ ಉಪಾಧ್ಯಕ್ಷರಾಗಿ ಮತ್ತು ಮುಖ್ಯಸಾರಿಗೆ ಮತ್ತು ಸಂಚಾರ ಇಂಜಿನಿಯರ್ ಆಗಿ, ನೀವು ಅನೇಕ ಸಂಕೀರ್ಣ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಉನ್ನತ ಮಟ್ಟದ ಮೂಲಸೌಕರ್ಯ ಯೋಜನೆಗಳ ನಿಮ್ಮ ಸಮರ್ಥ ನಿರ್ವಹಣೆಗಾಗಿ ನೀವು ಪ್ರಸಿದ್ಧರಾಗಿದ್ದೀರಿ. ಯುನೈಟೆಡ್ ಸ್ಟೇಟ್ಸ್‌ನ ಅನೇಕ ದೇವಾಲಯಗಳಿಗೆ ಪ್ರೊ ಬೊನೊ ಎಂಜಿನಿಯರಿಂಗ್ ಮತ್ತು ಸೈಟ್ ವಿನ್ಯಾಸ ಸೇವೆಗಳ ಮೂಲಕ ನೀವು ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಅವರಿಗೆ ಅಭಿನಂದಿಸುತ್ತಾ, ಅವರ ಸಮಾಜ ಸೇವೆ ಹೀಗೆ ನಿರಂತರವಾಗಿರಲಿ ಇತರರಿಗೆ ಸ್ಫೂರ್ತಿಯಾಗಲಿ” ಎಂದು ಆಶಿಸುತ್ತೇನೆಂದರು.

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು, ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...