Thursday, June 18, 2026
Thursday, June 18, 2026

Amity International Schools ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಮಾದರಿ‌ ನಿರ್ಮಾಣ ಸ್ಪರ್ಧೆ. ಅಂತಿಮ ಹಂತಕ್ಕೆ ತಲುಪಿದ ಶಿವಮೊಗ್ಗ ಪೋದಾರ್ ಶಾಲೆ ವಿದ್ಯಾರ್ಥಿಗಳು

Date:

Amity International Schools ಜನವರಿ 30 ರಿಂದ ಫೆಬ್ರವರಿ 01ರವರೆಗೆ ಹರಿಯಾಣದ ಗುರುಗ್ರಾವ್ ಅಮೈಟಿ ಇಂಟರ್ನ್ಯಾಷನಲ್ ಸ್ಕೂಲ್‌ನಲ್ಲಿ ಆಯೋಜಿಸಲಾಗಿದ್ದ ಸಿಬಿಎಸ್‌ಇ ಶಾಲೆಗಳ ರಾಷ್ಟ್ರ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ 2024-25ನೇ ಸಾಲಿನ ವಿಜ್ಞಾನ ವಸ್ತುಪ್ರದರ್ಶನದ ಅಂತಿಮ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಿದ ಗೋಪಾಳದ ಪೋದಾರ್ ಇಂಟರ್ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳಾದ ಸಿದ್ಧಾಂತ ಬಿ ಪೃಥ್ವಿ ಮತ್ತು ಡಿ.ಆರ್ ಪ್ರಣಿತ ರೆಡ್ಡಿ ಇವರುಗಳು ಅದ್ವಿತೀಯ ಬ್ಲಾಕ್ ಸೋಲ್ಡರ್ನ್ ಫೈ ಎನ್ನುವ ಶೀರ್ಷಿಕೆ ಅಡಿಯಲ್ಲಿ ಜೂನಿಯರ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ವಿಜೇತರಾಗಿದ್ದಾರೆ.

ಇಂತಹ ಅಮೋಘ ಸಾಧನೆಯ ಬೆನ್ನೆಲುಬಾಗಿ ನಿಂತು ಮಕ್ಕಳಿಗೆ ಮಾರ್ಗದರ್ಶನ ಮಾಡಿದ ಶ್ರೀಮತಿ ಶ್ವೇತಾ ಎಂ.ಎಸ್ ರವರಿಗೆ ಶಾಲೆಯ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯವರು ಶುಭಕೋರಿದ್ದಾರೆ. ವಿದ್ಯಾರ್ಥಿಯಾದ ಸಿದ್ಧಾಂತ ಬಿ.ಪೃಥ್ವಿ ಮೆಟ್ರೋ ಯುನೈಟೆಡ್ ಹಾಸ್ಪಿಟಲ್ ಮೆಡಿಕಲ್ ಡೈರೆಕ್ಟರ್ ಆಗಿರುವ ಡಾ ಪೃಥ್ವಿ ಬಿ.ಸಿ ಹಾಗೂ ಸಿಮ್ಸ್ನಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ರೂಪಶ್ರೀ.ಎನ್ ದಂಪತಿಗಳ ಪುತ್ರನಾಗಿದ್ದಾನೆ. ವಿದ್ಯಾರ್ಥಿ ಡಿ .ಆರ್. ಪ್ರಣಿತ ರೆಡ್ಡಿ ಶ್ರೀಮತಿ ಅನುತಾ ಕೆ ಬಿ ಹಾಗೂ ಶ್ರೀಯುತ ರಮೇಶ್ ಡಿ.ಎಸ್ ದಂಪತಿಗಳ ಪುತ್ರನಾಗಿದ್ದಾನೆ.
ರಾಷ್ಟ್ರಮಟ್ಟದಲ್ಲಿ ಶಿವಮೊಗ್ಗ ನಗರವನ್ನು ಪ್ರತಿನಿಧಿಸಿ ಶಾಲೆಗೆ, ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಪರಿಶ್ರಮಕ್ಕೆ ಶಾಲೆಯ ಪ್ರಾಂಶುಪಾಲರಾದ ಡಾ.ಸರೋಜಾ ಬಿ ಶಿಳ್ಳಿನ್, ಆಡಳಿತ ಮಂಡಳಿಯವರಾದ ಸುರೇಶ್ ಕುಮಾರ್, ಕೋ ಆರ್ಡಿನೇಟರ್ಸ್, ಬೋಧಕ ಮತ್ತು ಬೋಧಕೇತರ ವೃಂದದವರು ಹಾರೈಸಿ ಶುಭಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...