Karnataka Sanga ಫೆಬ್ರವರಿ 08, 2025ರ ಶನಿವಾರ ಸಂಜೆ 5;30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣಶಾಸ್ತ್ರೀ ಇವರ ಅಧ್ಯಕ್ಷತೆಯಲ್ಲಿ “ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-2024 ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.
ನೀನಾಸಂ ಹೆಗ್ಗೋಡಿನ ರಂಗಕರ್ಮಿ, ಸಾಹಿತಿ ಶ್ರೀ ಕೆ.ವಿ. ಅಕ್ಷರ ಅವರು ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-೨೦೨೪ನ್ನು ಸ್ವೀಕರಿಸಲಿದ್ದಾರೆ.
ಪ್ರೊ. ಬಿ.ಎಂ. ಕುಮಾರಸ್ವಾಮಿ, ಆರ್ಥಿಕ ತಜ್ಞರು, ಪರಿಸರ ಚಿಂತಕರು ಹಾಗೂ ರಂಗಕರ್ಮಿಗಳು, ಶಿವಮೊಗ್ಗ ಇವರು ಶ್ರೀ ಕೆ.ವಿ. ಅಕ್ಷರ ಅವರ ಕುರಿತು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.
ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ವಿನಂತಿಸಲಾಗಿದೆ.
Karnataka Sanga ಫೆ.08 ರಂದು ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-2024 ಪ್ರದಾನ ಸಮಾರಂಭ
Date: