Sunday, August 23, 2026
Sunday, August 23, 2026

JCI Shivamogga ಪ್ರಕೃತಿಯ ವಿಸ್ಮಯಗಳನ್ನು ಅರಿಯಲು ಚಾರಣ ಸಹಕಾರಿ: ಜಿ.ಗಣೇಶ್

Date:

JCI Shivamogga ಪ್ರಕೃತಿಯ ವಿಸ್ಮಯಗಳನ್ನು ಅರಿಯಲು ಚಾರಣ ಸಹಕಾರಿ. ಚಾರಣದಲ್ಲಿ ಪಾಲ್ಗೊಳ್ಳುವುದರಿಂದ ದೇಹ, ಮನಸ್ಸು ಸದೃಢವಾಗುತ್ತದೆ ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಜಿ.ಗಣೇಶ್ ಹೇಳಿದರು.
ದಿಕ್ಸೂಚಿ ಅಡ್ವೆಂಚರ‍್ಸ್ ವತಿಯಿಂದ ಹಿಮಾಲಯದ ಅತ್ಯಂತ ಸುಂದರ ಹಾಗೂ ಚಾರಣಿಗರಿಗೆ ಸವಾಲಾಗಿರುವ 12 ಸಾವಿರ ಅಡಿ ಎತ್ತರದ ಕೌರಿ ಪಾಸ್ ಚಳಿಗಾಲದ ಚಾರಣಕ್ಕೆ ಚಾರಣಿಗರನ್ನು ಬಿಳ್ಕೋಡುಗೆ ನೀಡಿ ಮಾತನಾಡಿ, ಚಾರಣದಿಂದ ಪರಸ್ಪರರಲ್ಲಿ ಓಡನಾಟ, ಪರಿಚಯವಾಗುತ್ತದೆ. ದೇಹದ ಸ್ವಾಸ್ಥ್ಯ ಕಾಪಾಡಿಕೊಳ್ಳಲು ವರ್ಷಕ್ಕೊಂದು ಬಾರಿಯಾದರೂ ಹಿಮಾಲಯ ಚಾರಣ ಮಾಡಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಯೂತ್ ಹಾಸ್ಟೆಲ್ ರಾಜ್ಯ ಘಟಕದ ಮಾಜಿ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಚಾರಣದಲ್ಲಿ ಭಾಗಿಯಾಗುವುದರಿಂದ ವಿಶೇಷ ಸ್ಥಳಗಳ ಪರಿಚಯದ ಜತೆಗೆ ಪ್ರಕೃತಿಯ ಹಾಗೂ ಪರಿಸರದ ಸಂಸ್ಕೃತಿ, ಜನರ ಜೀವನಶೈಲಿ, ವೈವಿಧ್ಯತೆ ಪರಿಚಯವಾಗುತ್ತದೆ. ಬೇರೆ ಬೇರೆ ಸ್ಥಳಗಳಲ್ಲಿ ಜನರು ನಡೆಸುವ ಜೀವನ ವಿಧಾನದ ಬಗ್ಗೆ ಮಾಹಿತಿ ತಿಳಿಯುತ್ತದೆ. ಬೆಟ್ಟಗಳ ಚಾರಣದಿಂದ ವಿಶೇಷ ಅನುಭವ ನಮ್ಮದಾಗುತ್ತದೆ. ದಿಕ್ಸೂಚಿ ಅಡ್ವೆಂಚರ್ ವತಿಯಿಂದ ಅತ್ಯಂತ ಕಡಿಮೆ ದರದಲ್ಲಿ ಚಾರಣ ಆಯೋಜಿಸಲಾಗಿದೆ ಎಂದರು.
JCI Shivamogga ಇದೇ ಸಂದರ್ಭದಲ್ಲಿ ದಿಕ್ಸೂಚಿ ಅಡ್ವೆಂಚರ್ ಅಧ್ಯಕ್ಷ ಪೃಥ್ವಿರಾಜ್ ಗಿರಿಮಾಜಿ ಮಾತನಾಡಿ, ಈಗಾಗಲೇ ನಮ್ಮ ಸಂಸ್ಥೆ ವತಿಯಿಂದ ಜಿಲ್ಲೆ ಹಾಗೂ ರಾಜ್ಯಮಟ್ಟದ ಚಾರಣಗಳನ್ನು 100ಕ್ಕೂ ಹೆಚ್ಚು ಬಾರಿ ಆಯೋಜಿಸಿದ್ದೇವೆ. ಚಾರಣದಲ್ಲಿ ಭಾಗವಹಿಸುವುದರಿಂದ ಸಾಹಸ ಮನೋಭಾವ, ಕ್ರೀಡಾಸಕ್ತಿ ಹೆಚ್ಚಾಗುತ್ತದೆ ಎಂದು ತಿಳಿಸಿದರು.
ರಾಜ್ಯದ ವಿವಿಧ ಭಾಗಗಳಿಂದ ಚಾರಣಿಗರು ಕೌರಿ ಪಾಸ್ ಪ್ರವಾಸದಲ್ಲಿ ಪಾಲ್ಗೊಂಡಿದ್ದರು. ಕೆ.ವೈಷ್ಣವಿ, ಜಿ.ಓಂಕಾರ್, ಅಶ್ವಿನಿ ಸಿ ಗೋಗಿ, ಜಿ.ಪಿ.ಸುಧೀರ್ ಕುಮಾರ್, ಜಿ.ಇ.ಅರ್ಚನಾ, ಎಂ.ರಘು, ಸಿ.ಎನ್.ಅನ್ನಪೂರ್ಣ, ಜಿ.ಆರ್.ವಿನೋದ್ ಕುಮಾರ್, ಗಣೇಶ್ ಗಾಣಿಗೆರೆ, ವಿ.ಶ್ರೇಯಸ್, ಧ್ರುವ ಗೋಗಿ, ಎಂ.ಜಿ.ಅಶೋಕ್, ಬಿ.ಎಸ್.ಕಿರಣ್‌ಕುಮಾರ್ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...