Thursday, July 9, 2026
Thursday, July 9, 2026

Warrant Officer Manjunath ಸ್ಕೈ ಡೈವಿಂಗ್ ಸಂದರ್ಭದಲ್ಲಿ‌ ಪ್ಯಾರಾಚ್ಯೂಟ್ ತೆರೆಯದೇ ಏರ್ ಫೋರ್ಸ್ ಅಧಿಕಾರಿ ಮಂಜುನಾಥ್ ಮರಣ

Date:

Warrant Officer Manjunath ಸ್ಕೈ ಡೈವಿಂಗ್ ವೇಳೆ ಪ್ಯಾರಚ್ಯೂಟ್ ತೆರೆಯದೆ ಏರ್ಫೋರ್ಸ್ ಅಧಿಕಾರಿ ಸಾವನ್ನಪ್ಪಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಕೂರು ನಿವಾಸಿ ಮಂಜುನಾಥ್ ಜಿ ಎಸ್(36) ಮೃತಪಟ್ಟ ದುರ್ದೈವಿ ಯಾಗಿದ್ದಾರೆ.

ಆಗ್ರಾದ ಪ್ಯಾರಾ ಟ್ರೈನಿಂಗ್ ಸ್ಕೂಲ್ ನಲ್ಲಿ ವಾರಂಟ್ ಆಫಿಸರ್ ಹಾಗೂ ಪ್ಯಾರಾ ಜಂಪ್ ಇನಸ್ಟ್ರಕ್ಟರ್ ಆಗಿ ಕಾರ್ಯ ನಿರ್ವಹಿಸುತಿದ್ದ ಮಂಜುನಾಥ್ ಶುಕ್ರವಾರ ಬೆಳಿಗ್ಗೆ 9.30ಕ್ಕೆ ಸ್ಕೈ ಡೈವಿಂಗ್ ಮಾಡುವಾಗ ಪ್ಯಾರಾಚೂಟ್ ನಿಷ್ಕ್ರಿಯಗೊಂಡಿದ್ದು,
ಸುಮಾರು 13 ಸಾವಿರ ಅಡಿ ಮೇಲಿಂದ ಕೆಳಗೆ ಬಿದ್ದು ಮಂಜುನಾಥ್ ಸಾವನ್ನಪ್ಪಿದ್ದಾರೆ.

ಮಧ್ಯಾಹ್ನ 2.30 ಗೆ ಮೃತದೇಹ ಡ್ರಾಫಿಂಗ್ ಝೋನ್ ಮಲ್ಪುರ ಬಳಿ ಗೋದಿಹೊಲದಲ್ಲಿ ಗಾಯಗೊಂಡಿದ್ದ ಮಂಜುನಾಥ್ ಪತ್ತೆ ಮಾಡಲಾಯಿತು ಎನ್ನಲಾಗುತ್ತಿದೆ.

ಸ್ಕೈಡೈವಿಂಗ್ ವೇಳೆ ಹಾರಿದ 12 ಮಂದಿ ಮಂಜುನಾಥ್ ಜಿ ಎಸ್ ವರ್ಷದ ಸುರಕ್ಷಿತವಾಗಿ ಕೆಳಕ್ಕೆ ಇಳಿದಿರಲಿಲ್ಲ. ಅವರಿಗಾಗಿ ಹುಡುಕಾಟ ನಡೆಸಿದಾಗ, ಅವರು ತೀವ್ರ ಗಂಭೀರವಾದ ಸ್ಥಿತಿಯಲ್ಲಿ ಗೋದಿಯ ಹೊಲದಲ್ಲಿ ಪತ್ತೆಯಾಗಿದ್ದು,
ಅವರನ್ನ ಸ್ಥಳೀಯ ಆಸ್ಪತ್ರೆಗೆ ಕರದೊಯ್ಯಲಾಯ್ತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.

Warrant Officer Manjunath ಸಂಕೂರಿನಲ್ಲಿ ತಂದೆ ತಾಯಿ ಹಾಗೂ ತಮ್ಮ , ತಂಗಿ ಇದ್ದು 2019 ರಲ್ಲಿ ಅಸ್ಸಾಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರು.

ಮೃತದೇಹ ಆಗ್ರಾದಲ್ಲಿದ್ದು ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಹುಟ್ಟೂರಾದ ಹೊಸನಗರ ತಾಲೂಕಿನ ಸಂಕೂರು ಗ್ರಾಮಕ್ಕೆ ತರುವ ಸಾಧ್ಯತೆ ಇದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...