Saturday, March 22, 2025
Saturday, March 22, 2025

Warrant Officer Manjunath ಸ್ಕೈ ಡೈವಿಂಗ್ ಸಂದರ್ಭದಲ್ಲಿ‌ ಪ್ಯಾರಾಚ್ಯೂಟ್ ತೆರೆಯದೇ ಏರ್ ಫೋರ್ಸ್ ಅಧಿಕಾರಿ ಮಂಜುನಾಥ್ ಮರಣ

Date:

Warrant Officer Manjunath ಸ್ಕೈ ಡೈವಿಂಗ್ ವೇಳೆ ಪ್ಯಾರಚ್ಯೂಟ್ ತೆರೆಯದೆ ಏರ್ಫೋರ್ಸ್ ಅಧಿಕಾರಿ ಸಾವನ್ನಪ್ಪಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಂಕೂರು ನಿವಾಸಿ ಮಂಜುನಾಥ್ ಜಿ ಎಸ್(36) ಮೃತಪಟ್ಟ ದುರ್ದೈವಿ ಯಾಗಿದ್ದಾರೆ.

ಆಗ್ರಾದ ಪ್ಯಾರಾ ಟ್ರೈನಿಂಗ್ ಸ್ಕೂಲ್ ನಲ್ಲಿ ವಾರಂಟ್ ಆಫಿಸರ್ ಹಾಗೂ ಪ್ಯಾರಾ ಜಂಪ್ ಇನಸ್ಟ್ರಕ್ಟರ್ ಆಗಿ ಕಾರ್ಯ ನಿರ್ವಹಿಸುತಿದ್ದ ಮಂಜುನಾಥ್ ಶುಕ್ರವಾರ ಬೆಳಿಗ್ಗೆ 9.30ಕ್ಕೆ ಸ್ಕೈ ಡೈವಿಂಗ್ ಮಾಡುವಾಗ ಪ್ಯಾರಾಚೂಟ್ ನಿಷ್ಕ್ರಿಯಗೊಂಡಿದ್ದು,
ಸುಮಾರು 13 ಸಾವಿರ ಅಡಿ ಮೇಲಿಂದ ಕೆಳಗೆ ಬಿದ್ದು ಮಂಜುನಾಥ್ ಸಾವನ್ನಪ್ಪಿದ್ದಾರೆ.

ಮಧ್ಯಾಹ್ನ 2.30 ಗೆ ಮೃತದೇಹ ಡ್ರಾಫಿಂಗ್ ಝೋನ್ ಮಲ್ಪುರ ಬಳಿ ಗೋದಿಹೊಲದಲ್ಲಿ ಗಾಯಗೊಂಡಿದ್ದ ಮಂಜುನಾಥ್ ಪತ್ತೆ ಮಾಡಲಾಯಿತು ಎನ್ನಲಾಗುತ್ತಿದೆ.

ಸ್ಕೈಡೈವಿಂಗ್ ವೇಳೆ ಹಾರಿದ 12 ಮಂದಿ ಮಂಜುನಾಥ್ ಜಿ ಎಸ್ ವರ್ಷದ ಸುರಕ್ಷಿತವಾಗಿ ಕೆಳಕ್ಕೆ ಇಳಿದಿರಲಿಲ್ಲ. ಅವರಿಗಾಗಿ ಹುಡುಕಾಟ ನಡೆಸಿದಾಗ, ಅವರು ತೀವ್ರ ಗಂಭೀರವಾದ ಸ್ಥಿತಿಯಲ್ಲಿ ಗೋದಿಯ ಹೊಲದಲ್ಲಿ ಪತ್ತೆಯಾಗಿದ್ದು,
ಅವರನ್ನ ಸ್ಥಳೀಯ ಆಸ್ಪತ್ರೆಗೆ ಕರದೊಯ್ಯಲಾಯ್ತಾದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.

Warrant Officer Manjunath ಸಂಕೂರಿನಲ್ಲಿ ತಂದೆ ತಾಯಿ ಹಾಗೂ ತಮ್ಮ , ತಂಗಿ ಇದ್ದು 2019 ರಲ್ಲಿ ಅಸ್ಸಾಂ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರು.

ಮೃತದೇಹ ಆಗ್ರಾದಲ್ಲಿದ್ದು ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಹುಟ್ಟೂರಾದ ಹೊಸನಗರ ತಾಲೂಕಿನ ಸಂಕೂರು ಗ್ರಾಮಕ್ಕೆ ತರುವ ಸಾಧ್ಯತೆ ಇದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kumsi MESCOM ಕುಂಸಿ ಮೆಸ್ಕಾಂ ಕಛೇರಿಯಲ್ಲಿ ಮಾರ್ಚ್ 18. ಜನಸಂಪರ್ಕ ಸಭೆ

Kumsi MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.18 ರಂದು ಬೆಳಿಗ್ಗೆ...

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...