S. N. Channabasappa ಭಾರತೀಯ ವಾಯುಪಡೆಯಲ್ಲಿ ಜೂನಿಯರ್ ವಾರಂಟ್ ಅಧಿಕಾರಿಯಾಗಿ ಕಳೆದ 18 ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ ಮತ್ತು ದೆಹಲಿಯಲ್ಲಿ ಸೇವೆ ಸಲ್ಲಿಸಿ, ಪ್ರಸ್ತುತ ಉತ್ತರ ಪ್ರದೇಶದ ಆಗ್ರಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ 36 ವರ್ಷದ ಜಿ.ಎಸ್. ಮಂಜುನಾಥ್ ಅವರು ಪ್ಯಾರಾಟ್ರೂಪರ್ ತರಬೇತಿ ಶಾಲೆಯಲ್ಲಿ ತರಬೇತಿ ವ್ಯಾಯಾಮದ ಸಮಯದಲ್ಲಿ ಅವಘಡ ಸಂಭವಿಸಿ ಹುತಾತ್ಮರಾದ ಅತೀವ ನೋವುಂಟಾಗಿದೆ ಎಂದು ಶಿವಮೊಗ್ಗ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಸೂಚಿಸಿದ್ದಾರೆ.
ದೇಶಸೇವೆಯ ಕರ್ತವ್ಯ ನಡೆಸುತ್ತಿದ್ದ ನಮ್ಮ ಹೆಮ್ಮೆಯ ಯೋಧ ಜಿ.ಎಸ್. ಮಂಜುನಾಥ್ ರವರ ಪಾರ್ಥಿವ ಶರೀರ ಇಂದು ಶಿವಮೊಗ್ಗ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಅಂತಿಮ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನಿಸಿ, ಯೋಧನ ಆತ್ಮಕ್ಕೆ ಮೋಕ್ಷ ಸಿಗಲಿ ಎಂದು ಪ್ರಾರ್ಥಿಸಲಾಯಿತು.
