Thursday, July 9, 2026
Thursday, July 9, 2026

Madhu Bangarappa ವಾಯುದಳದ ಅಧಿಕಾರಿ ಮಂಜುನಾಥ್ ಸಾವಿಗೆ ಮಧು ಬಂಗಾರಪ್ಪ ‌ಸಂತಾಪ

Date:

Madhu Bangarappa ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ತರಬೇತಿ ವೇಳೆ ವಿಮಾನದಿಂದ ಕೆಳಗೆ ಹಾರಿದಾಗ ಪ್ಯಾರಾಚೂಟ್‌ ತೆರೆದುಕೊಳ್ಳದೇ ವಾಯುಪಡೆಯ ವಾರೆಂಟ್‌ ಆಫಿಸರ್, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ ಕೃಷಿಕ ಸುರೇಶ್ ಹಾಗೂ ನಾಗರತ್ನ ದಂಪತಿ ಪುತ್ರ, 36 ವರ್ಷದ ಜಿ.ಎಸ್.ಮಂಜುನಾಥ್‌ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಎಸ್.ಬಂಗಾರಪ್ಪನವರು ಸಂತಾಪ ಸೂಚಿಸಿದ್ದಾರೆ.

ವಾಯು ಸೇನೆಯಲ್ಲಿ ಸ್ಮರಣೀಯ ಸೇವೆ ಸಲ್ಲಿಸುತ್ತಾ ಸಂಕೂರು ಹಾಗೂ ಸುತ್ತಲಿನ ಗ್ರಾಮಗಳ ಯುವ ಸಮೂಹಕ್ಕೆ ಸ್ಫೂರ್ತಿ ಆಗಿದ್ದ ಮಂಜುನಾಥ್ ಅವರ ಅಕಾಲಿಕ ಮರಣ ದುಖಃ ತಂದಿದೆ. ವಾಯುಸೇನೆಯ ಈ ಹೆಮ್ಮೆಯ ಅಧಿಕಾರಿ ಸದಾ ನಮ್ಮೆಲ್ಲರ ಸ್ಮರಣೆಯಲ್ಲಿರುತ್ತಾರೆ.
ಮಂಜುನಾಥ್ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಭಗವಂತ ಅವರ ಕುಟುಂಬದವರಿಗೆ, ಸಂಬಂಧಿಗಳಿಗೆ, ಸಂಕೂರು ಗ್ರಾಮಸ್ಥರಿಗೆ ನೀಡಲಿ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...