Monday, December 15, 2025
Monday, December 15, 2025

JCI Shivamogga ಸಮಾಜಮುಖಿ ಚಟುವಟಿಕೆಗಳಲ್ಲಿ ಜೆಸಿಐ ಘಟಕಗಳು ಸಂಘಟನಾತ್ಮಕ ಪಾತ್ರ- ಜಿ.ಗಣೇಶ್

Date:

JCI Shivamogga ಸಮಾಜಮುಖಿ ಕಾರ್ಯಗಳಲ್ಲಿ ಜೆಸಿಐ ಘಟಕಗಳು ಸಂಘಟನಾತ್ಮಕವಾಗಿ ಕೆಲಸ ಮಾಡಲಿವೆ ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಘಟಕದ ಅಧ್ಯಕ್ಷ ಜಿ.ಗಣೇಶ್ ಹೇಳಿದರು.

ಶಿವಮೊಗ್ಗ ನಗರದ ಮಥುರಾ ಪ್ಯಾರಾಡೈಸ್ ಸಭಾಂಗಣದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಘಟಕದಿಂದ ಆಯೋಜಿಸಿದ್ದ ಜೆಸಿಐ ಶಿವಮೊಗ್ಗ ಶಕ್ತಿ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಸ್ವಾತಿ ಅವರು 24 ಗಂಟೆಯಲ್ಲಿ ಹೊಸ ಘಟಕ ಮಾಡಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಜೆಸಿಐನಿಂದ ಹೆಚ್ಚು ಸಮಾಜಮುಖಿ ಕಾರ್ಯ ನಡೆಸಲು ಒಟ್ಟಾಗಿ ಕಾರ್ಯ ನಿರ್ವಹಿಸೋಣ ಎಂದು ತಿಳಿಸಿದರು.

ಜೆಸಿಐ ವಲಯ-24 ಅಧ್ಯಕ್ಷ ಗೌರೀಶ್ ಭಾರ್ಗವ್ ಮಾತನಾಡಿ, 24 ಗಂಟೆಯಲ್ಲೇ ಹೊಸ ಘಟಕ ಸ್ಥಾಪಿಸಿದ ಸ್ವಾತಿ ಅವರು ಜೆಸಿಐ ಶಿವಮೊಗ್ಗ ಶಕ್ತಿ ಘಟಕಕ್ಕೆ ನಿಜವಾಗಿಯೂ ಶಕ್ತಿಯೇ ಆಗಿದ್ದಾರೆ.

ಶಕ್ತಿಯುತವಾದ ಘಟಕಕ್ಕೆ ಶಕ್ತಿಯುತ ವ್ಯಕ್ತಿ ಅಧ್ಯಕ್ಷರಾಗಿರುವುದು ಸಂತಸ ತಂದಿದೆ. ಅಧಿಕಾರ ವಹಿಸಿಕೊಂಡ ಕೆಲ ಸಮಯದಲ್ಲಿ ಶೇ. 100 ಸದಸ್ಯತ್ವ ಹೆಚ್ಚು ಮಾಡಿದ್ದು, ಶಕ್ತಿ ಬುಲೆಟಿನ್ ರಿಲೀಸ್ ಮಾಡಿರುವುದು, ಜತೆಗೆ ತರಬೇತಿ ಮತ್ತು ಸಾಮಾಜಿಕ ಜಾಗೃತಿ ವಿಚಾರದಲ್ಲಿ ಶಿವಮೊಗ್ಗ ಸಿಬಿಆರ್ ರಾಷ್ಟ್ರೀಯ ಕಾನೂನು ಕಾಲೇಜಿನವರೊಂದಿಗೆ ಎಂಎಯು ಕೂಡ ಮಾಡಿಕೊಳ್ಳುತ್ತಿರುವ ವಿಚಾರ ಅಭಿನಂದನೀಯ ಎಂದು ಅಭಿಪ್ರಾಯಪಟ್ಟರು.

JCI Shivamogga ಜೆಸಿಐ ಶಿವಮೊಗ್ಗ ಶಕ್ತಿ ಘಟಕದ ಅಧ್ಯಕ್ಷೆ ಸ್ವಾತಿ ಎಸ್.ಎಂ ಮಾತನಾಡಿ, ಜೆಸಿಐ ಶಿವಮೊಗ್ಗ ಶಕ್ತಿ ಘಟಕ ನಿರ್ಮಿಸಲು ಎಸ್.ವಿ.ಶಾಸ್ತ್ರಿ ಮತ್ತು ಶ್ಯಾಮಲಾ ಶಾಸ್ತ್ರಿ ಕಾರಣಕರ್ತರು. ಉತ್ತಮ ನಾಯಕನಾಗಿ ಒಂದು ವರ್ಷದ ಅವಧಿ ಜೆಸಿಐ ಶಿವಮೊಗ್ಗ ಶಕ್ತಿ ಘಟಕವನ್ನು ಮುನ್ನಡೆಸುತ್ತೇನೆ. ಎಲ್ಲರ ಸಹಕಾರ, ಮಾರ್ಗದರ್ಶನ ಅವಶ್ಯಕ. ಸಾಮಾಜಿಕ ಕಳಕಳಿಯೊಂದಿಗೆ ಜೆಸಿಐ ಶಿವಮೊಗ್ಗ ಶಕ್ತಿ ಘಟಕ ಕೆಲಸ ಮಾಡಲಿದೆ ಎಂದು ತಿಳಿಸಿದರು.

ಜೆಸಿಐ ಶಿವಮೊಗ್ಗ ಶಕ್ತಿ ಘಟಕ ಉದ್ಘಾಟನೆಗೆ ಡಾ. ಎಸ್.ವಿ.ಶಾಸ್ತ್ರಿ ಮತ್ತು ಶ್ಯಾಮಲಾ ಶಾಸ್ತ್ರಿ ಶುಭಕೋರಿದರು. ಜೆಸಿಐ ವಿವಿಧ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...