Monday, December 15, 2025
Monday, December 15, 2025

Adichunchanagiri Mahasansthan Math ಆದಿಚುಂಚನಗಿರಿ ಶಾಖಾಮಠದ ಆಶ್ರಯದಲ್ಲಿ‌ಉಚಿತ‌ ಸಾಮೂಹಿಕ ವಿವಾಹ. ಆಸಕ್ತರಿಗೆ ಪೂರ್ವಭಾವಿ ಪ್ರಕಟಣೆ

Date:

Adichunchanagiri Mahasansthan Math ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನಮಠದ ಪರಮ ಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಬೆಳೆದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ಕನಸಿನಂತೆ 1998 ರಂದು ನಿರ್ಮಿಸಿದ ಸಮುದಾಯ ಭವನ ಉದ್ಘಾಟನೆ ದಿನದಿಂದ ಆರಂಭಗೊಂಡ ವಿವಾಹ ಮಹೋತ್ಸವಕ್ಕೆ ಇಂದು 26ರ ಸಂಭ್ರಮ. ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಡೆಯುವ ಈ ಶುಭ ವಿವಾಹ ಅಂದಿನಿಂದ ಇಂದಿನವರೆಗೆ ಸರಿಸುಮಾರು 500 ಕ್ಕಿಂತ ಹೆಚ್ಚು ದಾಂಪತ್ಯಜೀವನಗಳನ್ನು ಕಟ್ಟಿಕೊಟ್ಟಿದೆ.
ಇಂದಿನ ಪ್ರತಿ ವಿವಾಹ ಮಹೋತ್ಸವದ ವಿಶೇಷತೆ ಎಂದರೆ ಮದುವೆಯಾಗುವ ವಧು ವರರಿಗೆ ವಿವಾಹಕ್ಕೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಮಠವೇ ನೀಡುತ್ತದೆ.ಹೆಣ್ಣಿಗೆ ತಾಳಿ, ಕಾಲುಂಗುರ, ಬಟ್ಟೆ ನೀಡಿದರೆ. ಗಂಡಿಗೆ ಅಂಗಿ,ಪಂಚೆ, ಕಲ್ಪವೃಕ್ಷ ನೀಡುತ್ತಾರೆ.
ಕಳೆದ 2013 ರಿಂದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳವರ ಸಾನ್ನಿಧ್ಯದಲ್ಲಿ ನಡೆಯುತ್ತಿರುವ. ಇಡೀ ವಿವಾಹ ಮಹೋತ್ಸವದ ಸಂಪೂರ್ಣ ಹೊಣೆಗಾರಿಕೆ ಹಾಗೂ ಜವಾಬ್ದಾರಿಯನ್ನು ಹೊತ್ತುಕೊಂಡು ಮಹಾಸಂಸ್ಥಾನಮಠದ ಪ್ರಧಾನ ಕಾರ್ಯದರ್ಶಿಗಳೂ ಆದ ಶಿವಮೊಗ್ಗ ಶಾಖಾಮಠದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಸಲ್ಲಿಸುತ್ತಿರುವ ಸೇವೆ ಗೌರವಾನ್ವಿತವಾದದ್ದು.
Adichunchanagiri Mahasansthan Math ಆಸಕ್ತ ವಧುವರರು ತಮ್ಮ ಇತ್ತೀಚಿನ ಭಾವಚಿತ್ರ,ಆಧಾರ್ ಕಾರ್ಡ್, ಜಾತಿ ಹಾಗೂ ಜನನ ಪ್ರಮಾಣ ಪತ್ರ,ಗ್ರಾಮ ಪಂಚಾಯಿತಿ ಅಥವಾ ನಗರಸಭೆಯಿಂದ ಪಡೆದ ದೃಢೀಕರಣ ಪತ್ರದೊಂದಿಗೆ ತಾವು ಹಾಗೂ ತಮ್ಮ ಪೋಷಕರೊಂದಿಗೆ ಬಂದು, ದಿನಾಂಕ : 24 /03 /2025 ರೊಳಗೆ ತಮ್ಮ ಹೆಸರನ್ನು ಮೇಲ್ಕಂಡ ವಿಳಾಸದಲ್ಲಿ ನೋಂದಾಯಿಸಿಕೊಳ್ಳಬೇಕೆಂದು ಕೋರುತ್ತೇವೆ.
ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ :
ಪ್ರತಿ ವರ್ಷದಂತೆ ವಿವಾಹವಾಗಿ 50 ವರ್ಷ ತುಂಬಿದ ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನವೂ ಸಹ ಇರುತ್ತದೆ. ಶ್ರೀ ಪ್ರಸನ್ನನಾಥ ಸ್ವಾಮೀಜಿ ನೇತೃತ್ವದಲ್ಲಿ ಇಂತಹ ಉಚಿತ ಸಾಮೂಹಿಕ ವಿವಾಹ ಸಮಾರಂಭಗಳನ್ನು ಎಂತಹುದೇ ಸಂದರ್ಭದಲ್ಲಿ ನಿಲ್ಲಿಸದೇ ಕಳೆದ 25 ವರ್ಷಗಳಿಂದ ನಿರಂತರವಾಗಿ, ವೈಭವಯುತವಾಗಿ ನಡೆಸಿಕೊಂಡು ಬರುತ್ತಿರುವ ಶಿವಮೊಗ್ಗದ ಶ್ರೀ ಆದಿಚುಂಚನಗಿರಿ ಶಾಖಾಮಠದ ಪ್ರಯತ್ನ ಶ್ಲಾಘನೀಯ ಹಾಗೂ ಗೌರವಾನ್ವಿತವಾದುದೇ ಹೌದು. ಈ ಬಾರಿಯ 26ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಏಪ್ರಿಲ್ 11ರ ಶುಕ್ರವಾರ ಬೆಳಿಗ್ಗೆ 9:30ಕ್ಕೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಶ್ರೀ ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ ಸಮಾರಂಭ ನಡೆಯಲಿದೆ ಎಂದು ಮಠದ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ, 08182-257958, 254141, 9742885627, 9844201506 ನಂಬರಿಗೆ ಸಂಪರ್ಕಿಸಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...