S.N. Chennabasappa ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಇಂದು ಬೆಳಿಗ್ಗೆ ಕುವೆಂಪು ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಾಣವಾಗಿ ನೆನೆಗುದಿಯಲ್ಲಿ ಬಿದ್ದಿರುವ ಬಾಬು ಜಗಜೀವನ್ ರಾಮ್ ಭವನದ ಕಾಮಗಾರಿಗಳನ್ನು ವೀಕ್ಷಿಸಿದರು.
ನಿರ್ಮಾಣಗೊಂಡ ಬಾಬು ಜಗಜೀವನ್ ರಾಮ್ ಭವನವು ಪುಂಡ ಪೋಕರಿಗಳ ತಾಣವಾಗಿದ್ದು, ಅಧಿಕಾರಿಗಳೊಡನೆ ಭೇಟಿ ನೀಡಿ ಶೀಘ್ರವೇ ಸಾರ್ವಜನಿಕ ಉಪಯೋಗಕ್ಕೆ ಅನುವು ಮಾಡಿಕೊಡುವಂತೆ ಸೂಚಿಸಿ, ಬಾಕಿ ಉಳಿದಿರುವ ಕಾಮಗಾರಿಗಳ ಬಗ್ಗೆ ಚರ್ಚಿಸಿದರು.