Monday, August 31, 2026
Monday, August 31, 2026

University of Agricultural & Horticultural Sciences ಆರ್ಥಿಕ ಸಬಲೀಕರಣಕ್ಕೆ ಜೇನು ಸಾಕಾಣಿಕೆ ಸಹಕಾರಿ : ಶೈಲಾ ಎನ್

Date:

University of Agricultural & Horticultural Sciences ಆರ್ಥಿಕ ಸಬಲೀಕರಣಕ್ಕೆ ಜೇನು ಸಾಕಾಣಿಕೆ ಒಂದು ಉತ್ತಮ ಮಾರ್ಗವಾಗಿದ್ದು, ಜೇನು ಸಾಕಾಣಿಕೆ ತರಬೇತಿಯ ಸದುಪಯೋಗ ಪಡೆಯಬೇಕೆಂದು ತೀರ್ಥಹಳ್ಳಿ ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ಶೈಲಾ ಎನ್ ತಿಳಿಸಿದರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ತಾ.ಪಂ ತೀರ್ಥಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಐಸಿಎಆರ್, ಟಿಎಸ್‌ಪಿ ಯೋಜನೆ ‘ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ಜೇನು ಸಾಕಾಣಿಕೆಯ ತಂತ್ರಗಳೊAದಿಗೆ ಪರಿಶಿಷ್ಟ ಪಂಗಡಗಳ ಸಬಲೀಕರಣ’ ಎಂಬ ವಿಷಯದಡಿ ಫೆ.14 ರಿಂದ 16 ರವರೆಗೆ ತೀರ್ಥಹಳ್ಳಿ ಗ್ರಾಮೀಣಾಭಿವೃದ್ದಿ ಭವನದಲ್ಲಿ ಏರ್ಪಡಿಸಲಾಗಿದ್ದ ಜೇನು ಸಾಕಾಣಿಕೆ ತರಬೇತಿಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜೇನು ಸಾಕಾಣಿಕೆ ಒಂದು ಉತ್ತಮ ತರಬೇತಿಯಾಗಿದೆ. ಪ್ರಾರಂಭದಲ್ಲಿ ಸಣ್ಣ ಪ್ರಮಾಣದಲ್ಲಿ ಸಾಕಾಣಿಕೆ ಕೈಗೊಂಡು ನಂತರ ಹಲವಾರು ಪೆಟ್ಟಿಗೆಗಳನ್ನು ಇಟ್ಟು ದೊಡ್ಡ ಪ್ರಮಾಣದಲ್ಲಿ ಮಾಡಿ ಕುಟುಂಬದ, ಸಮಾಜದ ಹಾಗೂ ದೇಶದ ಅಭಿವೃದ್ದಿಗೆ ಕಾರಣರಾಗುವಂತೆ ಕರೆ ನೀಡಿದರು.
ಆರ್ಥಿಕ ಸಬಲೀಕರಣಕ್ಕೆ ಈ ತರಬೇತಿಯು ಸಹಕಾರಿಯಾಗಿದ್ದು ಆಸಕ್ತರೆಲ್ಲ ಈ ತರಬೇತಿಯ ಪ್ರಯೋಜನ ಪಡೆದುಕೊಂಡು ತಮ್ಮ ಜೀವನ ಸುಧಾರಿಸಿಕೊಳ್ಳುವಂತೆ ಸಲಹೆ ನೀಡಿದರು.
ಇದೇ ವೇಳೆ ಶಿಬಿರಾರ್ಥಿಗಳಿಗೆ ತರಬೇತಿ ಪ್ರಮಾಣ ಪತ್ರದೊಂದಿಗೆ ಜೇನು ಸಾಕಾಣಿಕೆಗೆ ಅಗತ್ಯವಾದ ಪರಿಕರಗಳನ್ನು ವಿತರಣೆ ಮಾಡಲಾಯಿತು.
ನೋಡಲ್ ಅಧಿಕಾರಿ ಹಾಗೂ ಪ್ರಧಾನ ಪರಿಶೋಧಕರಾದ ಡಾ.ಜಯಲಕ್ಷಿö್ಮ ನಾರಾಯಣ ಹೆಗಡೆ ಕಾರ್ಯಕ್ರಮ ನಿರ್ವಹಿಸಿ, ಮೂರು ದಿನಗಳ ಕಾಲ ನಡೆದ ತರಬೇತಿಯ ಕುರಿತು ವಿವರಣೆ ನೀಡಿದರು. ವಿಘ್ನೇಶ ತಲಕಾಲಕೊಪ್ಪ, ಪ್ರತೀಕ್ ಇತರರು ಹಾಜರಿದ್ದರು. ತೀರ್ಥಹಳ್ಳಿ ತಾಲ್ಲೂಕಿನ ಸುತ್ತಮುತ್ತಲಿನ ಪರಿಶಿಷ್ಟ ಪಂಗಡಗಳ 30 ರೈತ ಮಹಿಳೆಯರು, ರೈತರು, ಯುವಕ ಯುವತಿಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...

Shivamogga News ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಸ್ಫೂರ್ತಿ ರೂಢಿಸಿಕೊಳ್ಳಬೇಕು: ಶ್ರೀ ಚಂದ್ರಪ್ಪ ಎಸ್. ಗುಂಡಪಲ್ಲಿ

Shivamogga News ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ...