Sunday, August 2, 2026
Sunday, August 2, 2026

ಭದ್ರಾವತಿಯಲ್ಲಿ ಸಜ್ಜನರು ವಾಸಮಾಡುವಂತಹ ಪರಿಸ್ಥಿತಿಯೇ ಇಲ್ಲವಾಗಿದೆ :ಹಿತರಕ್ಷಣಾ ವೇದಿಕೆ ಮುಖ್ಯಸ್ಥ ಸುರೇಶ್

Date:

ಭದ್ರಾವತಿಯಲ್ಲಿ ಸಜ್ಜನರು ವಾಸಮಾಡುವಂತಹ ಪರಿಸ್ಥಿತಿಯೇ ಇಲ್ಲವಾಗಿದೆ. ಪೊಲೀಸ್ ಇಲಾಖೆ ಸೇರಿದಂತೆ ರಾಜಕಾರಣಿಗಳು ಕೂಡ ಭದ್ರಾವತಿ ನಗರವನ್ನು ಅಶಾಂತಿಯತ್ತ ಕೊಂಡೋಯ್ಯುತ್ತಿದ್ದಾರೆ ಎಂದು ಭದ್ರಾವತಿ ಹಿತರಕ್ಷಣಾ ವೇದಿಕೆಯ ಮುಖ್ಯಸ್ಥ ಸುರೇಶ್ ಆರೋಪಿಸಿದರು.

ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಭದ್ರಾವತಿಯಲ್ಲಿ ಗಾಂಜಾ, ಇಸ್ಪೇಟ್, ಓಸಿ, ಮುಂತಾದ ಅಕ್ರಮ ಚಟುವಟಿಕೆಗಳು ಹೆಚ್ಚಾಗಿವೆ. ಇದರ ಜೊತೆಗೆ ದಲಿತರ ಮೇಲೆ ಹಲ್ಲೆ ಕೂಡ ನಡೆಯುತ್ತಿರುವುದು ಆತಂಕದ ವಿಷಯವಾಗಿದೆ. ಭದ್ರಾವತಿಯಲ್ಲಿ ದಲಿತ ಯುವಕರಿಬ್ಬರನ್ನು ಹೊಸಮನೆಯ ಪೊಲೀಸ್ ಸಬ್‍ಇನ್ಸ್‍ಫೆಕ್ಟರ್‍ರೊಬ್ಬರು ಚಿತ್ರ ಹಿಂಸೆ ನೀಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರು ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

ದಲಿತ ಯುವಕರಾದ ದೀಪಕ್ ಮತ್ತು ಅನಿಲ್ ಅವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್‍ಇನ್ಸ್‍ಫೆಕ್ಟರ್ ಅವರನ್ನು ಅಮಾನತ್ತುಗೊಳಿಸಬೇಕು. ಇಲ್ಲದಿದ್ದರೆ ಜಾಗೃತ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ತೀರ್ಥೇಶ್, ಅನಿಲ್‍ಕುಮಾರ್ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...