Monday, December 15, 2025
Monday, December 15, 2025

Sringeri Maha Samsthanam ಮಹಾಕುಂಭ ಮೇಳದಲ್ಲಿ ಕೂಡಲಿ ಶೃಂಗೇರಿ ಮಹಾಸಂಸ್ಥಾನಮ್ ಪೀಠಾಧಿಪತಿ ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಸ್ವಾಮಿ

Date:

Sringeri Maha Samsthanam ಕೂಡಲಿಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಕೂಡಲಿ ಶೃಂಗೇರಿ ಮಹಾಸಂಸ್ಥಾನಮ್ ದಕ್ಷಿಣಾಮ್ನಾಯ ಮೂಲ ಶ್ರೀಶಾರದಾ ಪೀಠಮ್ ನ ಪೀಠಾಧಿಪತಿಗಳಾದ ಜಗದ್ಗುರು ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಸ್ವಾಮಿಗಳು ಉತ್ತರಪ್ರದೇಶದ ತ್ರಿವೇಣಿ ಸಂಗಮ ಪ್ರಯಾಗ್ ರಾಜ್‍ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡು ವಿವಿಧ ಧಾರ್ಮಿಕ ಕಾರ್ಯಗಳನ್ನು ನಡೆಸಿದರು.
ಶನಿವಾರ ಪ್ರಯಾಗ್ ರಾಜ್‍ನ ತ್ರಿವೇಣಿ ಸಂಗಮದಲ್ಲಿ ಮಡಿಸ್ನಾನವನ್ನು ಮಾಡಿ, ಪೂಜಾ ವಿಧಿಗಳನ್ನು ನೆರವೇರಿಸಿದರು.
ಭಾನುವಾರ ಧರ್ಮಸಭೆಯಲ್ಲಿ ಪಾಲ್ಗೊಂಡರು. ಶ್ರೀ ಕಂಚಿ ಕಾಮಕೋಟಿ ಜಗದ್ಗುರು ಶ್ರೀ ಶಂಕರ ವಿಜೇಂದ್ರ ಸರಸ್ವತಿ ಸ್ವಾಮಿಗಳು ಮತ್ತು ಶ್ರೀ ಶಕಟಪುರಂನ ಶ್ರೀ ಮದ್ ಜಗದ್ಗುರು ಕೃಷ್ಣಾನಂದತೀರ್ಥ ಮಹಾಸ್ವಾಮಿಗಳವರೊಂದಿಗೆ ವೇದಿಕೆ ಹಂಚಿಕೊಂಡು ಭಕ್ತರಿಗೆ ಆಶೀರ್ವಚನ ನೀಡಿದರು.
ಇದೇ ಸಂದರ್ಭದಲ್ಲಿ ಶ್ರೀ ಕಂಚಿ ಕಾಮಕೋಟಿ ಜಗದ್ಗುರು ಶ್ರೀ ಶಂಕರ ವಿಜೇಂದ್ರ ಸರಸ್ವತಿ ಸ್ವಾಮಿಗಳಿಂದ ರಚಿತವಾದ ಮಹಾಕುಂಭಮೇಳ ಕುರಿತ ಕೃತಿಯನ್ನು ಲೋಕಾರ್ಪಣೆ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...