Tuesday, August 11, 2026
Tuesday, August 11, 2026

Karnataka Rakshana Vedike ಸಾರಿಗೆ ಬಸ್ ನಿರ್ವಾಹಕರ ಮೇಲೆ ಮರಾಠಿ ಭಾಷಿಗರ ಹಲ್ಲೆ ಖಂಡಿಸಿ ಪ್ರತಿಭಟನೆ

Date:

Karnataka Rakshana Vedike ಕರವೇ ಸ್ವಾಭಿಮಾನಿ ಬಣದಿಂದ ಅಶೋಕ ವೃತ್ತದಲ್ಲಿ ಕೆಎಸ್ಆರ್ಟಿಸಿ ನಿರ್ವಾಹಕನ ಮೇಲೆ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ
ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಕೆಎಸ್ಆರ್ಟಿಸಿ ಬಸ್ ನಿರ್ವಾಹನ ಮೇಲೆ ಹಲ್ಲೆ ನಡೆಸಿದ ಮರಾಠಿ ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ನಗರದ ಅಶೋಕ ವೃತ್ತದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕಂಡಕ್ಟರ್ ಮೇಲೆ ವಿನಾಕಾರಣ ಹಲ್ಲೆ ನಡೆಸುವ ಜೊತೆಗೆ ಪೋಕ್ಸೋ ಪ್ರಕರಣ ದಾಖಲು ಮಾಡಿ ಗಲಾಟೆ Karnataka Rakshana Vedike ಪ್ರಕರಣವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು ಹಾಗೂ ದಾಳಿ ನಡೆಸಿದವರ ಪ್ರತಿ ಕೃತಿಯನ್ನು ದಹಿಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ ಅಲ್ಲೇ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು ರಾಜ್ಯ ಸರ್ಕಾರ ಈ ಪುಂಡರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಜಿಲ್ಲೆಯಲ್ಲಿ ಮಹಾರಾಷ್ಟ್ರದ ಬಸ್ಸಿನ ಮೇಲೆ ಕನ್ನಡದ ಬಾವುಟವನ್ನು ಕಟ್ಟಿ ಚಾಲಕ ಮತ್ತು ನಿರ್ವಾಹಕರಿಗೆ ಮಸಿ ಬೆಳೆಯುತ್ತೇವೆ ಎಂದು ಎಚ್ಚರಿಕೆ ನೀಡಿದರು ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ್ ಜಿಲ್ಲಾ ಖಜಾಂಚಿ ಗಣೇಶ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ ಜಿಲ್ಲಾ ಕಾರ್ಯದರ್ಶಿ ರಾಮು ಪತ್ರಿಕಾ ಪ್ರಚಾರ ಸಮಿತಿ ಅಧ್ಯಕ್ಷ ಮಾಲತೇಶ್. ಕನ್ನಡ ಅಭಿಮಾನಿ ಮುಜೀಬ್ ಸತೀಶ್. ಪರಮೇಶ್. ಟಾಟಾ ಏಸ್ ರಾಮಣ್ಣ.ಪುಟ್ಟ .ಸಾಧಿಕ್ ಮಹಿಳಾ ಘಟಕದ ರೇಷ್ಮಾ ಹಾಗೂ ಕಾರ್ಯಕರ್ತರು ಪದಾಧಿಕಾರಿಗಳು ಭಾಗವಹಿಸಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...