Thursday, June 18, 2026
Thursday, June 18, 2026

Mahashivratri 2025 “ಭೋಲೇನಾಥ್ ಕಿ‌ ಜೈ”-ಲೇ: ಎನ್.ಜಯಭೀಮ ಜೊಯಿಸ್. ಶಿವಮೊಗ್ಗ

Date:

Mahashivratri 2025 ಮಹಾಶಿವರಾತ್ರಿ ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದಾಗಿದೆ.ಈ ಹಬ್ಬದ ವೈಶಿಷ್ಟ್ಯವೆಂದರೆ
ಇಡೀದಿನ ಉಪವಾಸ,ಜಾಗರಣೆಗಳನ್ನು ಮಾಡಿ,
ನಾಲ್ಕು ಯಾಮಗಳಲ್ಲಿಯೂ ಶಿವಪೂಜೆಯನ್ನು ಮಾಡುವುದರ ಮೂಲಕ ಆಚರಿಸಲಾಗುತ್ತದೆ.ಇಡೀ
ಭಾರತದಾದ್ಯಂತಬಹುತೇಕಎಲ್ಲಾಭಾಗಗಳಲ್ಲಿಯೂ ಆಚರಿಸುವ ಹಬ್ಬ ಇದಾಗಿದೆ.
ಶಿವಭಕ್ತರ ಪಾಲಿಗೆ ಮಂಗಳಕರರಾತ್ರಿ.ಸಾಮಾನ್ಯ
ವಾಗಿ ಎಲ್ಲ ಹಬ್ಬಗಳಲ್ಲಿಯೂ ದೇವರಿಗೆ ಹಗಲು
ಹೊತ್ತು ಪೂಜೆ ನಡೆಯುತ್ತದೆ.ರಾತ್ರಿ ಎಂದರೆ ಕತ್ತಲು,ಕತ್ತಲು ಎಂದರೆ ಅಜ್ಞಾನ,ಅಜ್ಞಾನವನ್ನು ಹೋಗಲಾಡಿಸಿ ಸುಜ್ಞಾನವನ್ನು ದಯಪಾಲಿಸು ಎಂದು ಶಿವನನ್ನು ಪ್ರಾರ್ಥಿಸುವ ಶುಭ ದಿನವೇ ಶಿವ
ರಾತ್ರಿ.ಅಜ್ಞಾನವೆಂಬೊ ಅಂಧಕಾರ ತುಂಬಿರುವಲ್ಲಿ
ಶಿವನು ತನ್ನ ಕಟಾಕ್ಷದಿಂದ ಅಜ್ಞಾನವನ್ನು ಪರಿಹರಿಸಿ
ಜ್ಞಾನದ ಬೆಳಕನ್ನು ನೀಡುತ್ತಾನೆ ಎಂಬ ದೃಢವಾದ ನಂಬಿಕೆ ಇದೆ.
ಶಿವಪುರಾಣದಲ್ಲಿಹೇಳಿರುವಪ್ರಕಾರಶಿವರಾತ್ರಿ
ಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿಅನುಗ್ರಹಮಾಡುವುದಾಗಿಸ್ವತ:ಶಿವನೇ ಪಾರ್ವತಿಯಲ್ಲಿ ತಿಳಿಸಿದ್ದಾನೆ.ಹಿಮವಂತನ ಮಗಳು ಪಾರ್ವತಿ ಈ ದಿನದಂದು ರಾತ್ರಿಯಿಡೀ ಶಿವನ ಕುರಿತು ಜಪ ಮಾಡುತ್ತಾ,ತಪಸ್ಸು ಮಾಡಿ ಶಿವನ ಮೆಚ್ಚಿಕೆಗೆಪಾತ್ರಳಾಗಿವಿವಾಹವಾದಳೆಂಬುದು ಪ್ರತೀತಿ.ಶಿವರುದ್ರತಾಂಡವನಾಡಿದ ರಾತ್ರಿಯೂ ಇಂದೇ ಎನ್ನಲಾಗುತ್ತದೆ.ದೇವತೆಗಳು ಹಾಗೂ ಅಸುರರ ನಡುವೆಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ ಅದನ್ನು ಶಿವ ಕುಡಿದ.ವಿಷವನ್ನು ಗಂಟಲೊಳಗಿಂದ ಇಳಿಯದಂತೆ ಪಾರ್ವತೀ ಇಡೀ ರಾತ್ರಿತಡೆದಳು ಎಂದು ತಿಳಿಸುತ್ತದೆ ಶಿವಪುರಾಣ.
ವಿಷಕುಡಿದಪರಿಣಾಮವಾಗಿಶಿವನಕಂಠ(ಗಂಟಲು)ನೀಲಿ ಬಣ್ಣಕ್ಕೆತಿರುಗುತ್ತದೆ.ಆದ್ದರಿಂದಲೇ ಶಿವನನ್ನು “ನೀಲಕಂಠ”ಎಂದುಕರೆಯುತ್ತಾರೆ.ವಿಷ್ಣುಅಲಂಕಾರ ಪ್ರಿಯನಾದರೆ,ಶಿವ ಅಭಿಷೇಕ ಪ್ರಿಯ,ಸತತ ಜಲಾ
ಭಿಷೇಕ ಪ್ರಿಯನು.
Mahashivratri 2025 ಶಿವನುಭೋಲೇನಾಥಅಂದರೆಮುಗ್ಧನು.ಬೇಡಿದ್ದ
ನ್ನು ನೀಡುವ ದಯಾಳು.ಲಂಕಾಧೀಶ ರಾವಣನಿಗೆ ಅವನಭಕ್ತಿಗೆಮೆಚ್ಚಿಆತ್ಮಲಿಂಗವನ್ನೇಕೊಡುತ್ತಾನೆ.ಶಿವಭಕ್ತಮಾರ್ಕಂಡೇಯನಭಕ್ತಿಗೆಮೆಚ್ಚಿಅವನನ್ನು
ಚಿರಂಜೀವಿಯನ್ನಾಗಿಮಾಡುತ್ತಾನೆ.ಶಿವಭಕ್ತಸಿರಿಯಾಳನಿಗೂ ಒಲಿದ ಶಿವ.ಕರುಣಾಮಯಿಯಾದ ಶಿವನು ಭಕ್ತಿಗೆ ಒಲಿಯುವನು.
ಶಿವನದೇವಾಲಯಗಳಲ್ಲಿರಾತ್ರಿಯಿಡೀಪೂಜಾದಿಗಳು,ಶಿವನಸ್ತೋತ್ರಪಾರಾಯಣಎಲ್ಲವೂನಡೆಯುವವು.ಶಿವರಾತ್ರಿಯ ಮಾರನೆಯ ದಿನ ಪಾರಣೆಯನ್ನು
ಮಾಡಿ ಶಿವರಾತ್ರಿ ಹಬ್ಬವನ್ನು ಆಚರಿಸುವರು.
ಶಿವರಾತ್ರಿಹಬ್ಬದಂದುಭಕ್ತರುಶಿವನದೇವಾಲಯ
ಗಳಿಗೆಹೋಗಿಶಿವನದರ್ಶನಮಾಡಿಧನ್ಯರಾಗುವರು.
ಶಿವರಾತ್ರಿಹಬ್ಬದಂದು ಎಲ್ಲರಿಗೂಸನ್ಮಂಗಳವನ್ನು ಕರುಣಿಸುವಂತೆ ಪರಮೇಶ್ವರನಲ್ಲಿ ಭಕ್ತಿಯಿಂದ
ಪ್ರಾರ್ಥನೆ ಮಾಡೋಣ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...