Sunday, August 2, 2026
Sunday, August 2, 2026

Mahashivratri 2025 “ಭೋಲೇನಾಥ್ ಕಿ‌ ಜೈ”-ಲೇ: ಎನ್.ಜಯಭೀಮ ಜೊಯಿಸ್. ಶಿವಮೊಗ್ಗ

Date:

Mahashivratri 2025 ಮಹಾಶಿವರಾತ್ರಿ ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದಾಗಿದೆ.ಈ ಹಬ್ಬದ ವೈಶಿಷ್ಟ್ಯವೆಂದರೆ
ಇಡೀದಿನ ಉಪವಾಸ,ಜಾಗರಣೆಗಳನ್ನು ಮಾಡಿ,
ನಾಲ್ಕು ಯಾಮಗಳಲ್ಲಿಯೂ ಶಿವಪೂಜೆಯನ್ನು ಮಾಡುವುದರ ಮೂಲಕ ಆಚರಿಸಲಾಗುತ್ತದೆ.ಇಡೀ
ಭಾರತದಾದ್ಯಂತಬಹುತೇಕಎಲ್ಲಾಭಾಗಗಳಲ್ಲಿಯೂ ಆಚರಿಸುವ ಹಬ್ಬ ಇದಾಗಿದೆ.
ಶಿವಭಕ್ತರ ಪಾಲಿಗೆ ಮಂಗಳಕರರಾತ್ರಿ.ಸಾಮಾನ್ಯ
ವಾಗಿ ಎಲ್ಲ ಹಬ್ಬಗಳಲ್ಲಿಯೂ ದೇವರಿಗೆ ಹಗಲು
ಹೊತ್ತು ಪೂಜೆ ನಡೆಯುತ್ತದೆ.ರಾತ್ರಿ ಎಂದರೆ ಕತ್ತಲು,ಕತ್ತಲು ಎಂದರೆ ಅಜ್ಞಾನ,ಅಜ್ಞಾನವನ್ನು ಹೋಗಲಾಡಿಸಿ ಸುಜ್ಞಾನವನ್ನು ದಯಪಾಲಿಸು ಎಂದು ಶಿವನನ್ನು ಪ್ರಾರ್ಥಿಸುವ ಶುಭ ದಿನವೇ ಶಿವ
ರಾತ್ರಿ.ಅಜ್ಞಾನವೆಂಬೊ ಅಂಧಕಾರ ತುಂಬಿರುವಲ್ಲಿ
ಶಿವನು ತನ್ನ ಕಟಾಕ್ಷದಿಂದ ಅಜ್ಞಾನವನ್ನು ಪರಿಹರಿಸಿ
ಜ್ಞಾನದ ಬೆಳಕನ್ನು ನೀಡುತ್ತಾನೆ ಎಂಬ ದೃಢವಾದ ನಂಬಿಕೆ ಇದೆ.
ಶಿವಪುರಾಣದಲ್ಲಿಹೇಳಿರುವಪ್ರಕಾರಶಿವರಾತ್ರಿ
ಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿಅನುಗ್ರಹಮಾಡುವುದಾಗಿಸ್ವತ:ಶಿವನೇ ಪಾರ್ವತಿಯಲ್ಲಿ ತಿಳಿಸಿದ್ದಾನೆ.ಹಿಮವಂತನ ಮಗಳು ಪಾರ್ವತಿ ಈ ದಿನದಂದು ರಾತ್ರಿಯಿಡೀ ಶಿವನ ಕುರಿತು ಜಪ ಮಾಡುತ್ತಾ,ತಪಸ್ಸು ಮಾಡಿ ಶಿವನ ಮೆಚ್ಚಿಕೆಗೆಪಾತ್ರಳಾಗಿವಿವಾಹವಾದಳೆಂಬುದು ಪ್ರತೀತಿ.ಶಿವರುದ್ರತಾಂಡವನಾಡಿದ ರಾತ್ರಿಯೂ ಇಂದೇ ಎನ್ನಲಾಗುತ್ತದೆ.ದೇವತೆಗಳು ಹಾಗೂ ಅಸುರರ ನಡುವೆಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ ಅದನ್ನು ಶಿವ ಕುಡಿದ.ವಿಷವನ್ನು ಗಂಟಲೊಳಗಿಂದ ಇಳಿಯದಂತೆ ಪಾರ್ವತೀ ಇಡೀ ರಾತ್ರಿತಡೆದಳು ಎಂದು ತಿಳಿಸುತ್ತದೆ ಶಿವಪುರಾಣ.
ವಿಷಕುಡಿದಪರಿಣಾಮವಾಗಿಶಿವನಕಂಠ(ಗಂಟಲು)ನೀಲಿ ಬಣ್ಣಕ್ಕೆತಿರುಗುತ್ತದೆ.ಆದ್ದರಿಂದಲೇ ಶಿವನನ್ನು “ನೀಲಕಂಠ”ಎಂದುಕರೆಯುತ್ತಾರೆ.ವಿಷ್ಣುಅಲಂಕಾರ ಪ್ರಿಯನಾದರೆ,ಶಿವ ಅಭಿಷೇಕ ಪ್ರಿಯ,ಸತತ ಜಲಾ
ಭಿಷೇಕ ಪ್ರಿಯನು.
Mahashivratri 2025 ಶಿವನುಭೋಲೇನಾಥಅಂದರೆಮುಗ್ಧನು.ಬೇಡಿದ್ದ
ನ್ನು ನೀಡುವ ದಯಾಳು.ಲಂಕಾಧೀಶ ರಾವಣನಿಗೆ ಅವನಭಕ್ತಿಗೆಮೆಚ್ಚಿಆತ್ಮಲಿಂಗವನ್ನೇಕೊಡುತ್ತಾನೆ.ಶಿವಭಕ್ತಮಾರ್ಕಂಡೇಯನಭಕ್ತಿಗೆಮೆಚ್ಚಿಅವನನ್ನು
ಚಿರಂಜೀವಿಯನ್ನಾಗಿಮಾಡುತ್ತಾನೆ.ಶಿವಭಕ್ತಸಿರಿಯಾಳನಿಗೂ ಒಲಿದ ಶಿವ.ಕರುಣಾಮಯಿಯಾದ ಶಿವನು ಭಕ್ತಿಗೆ ಒಲಿಯುವನು.
ಶಿವನದೇವಾಲಯಗಳಲ್ಲಿರಾತ್ರಿಯಿಡೀಪೂಜಾದಿಗಳು,ಶಿವನಸ್ತೋತ್ರಪಾರಾಯಣಎಲ್ಲವೂನಡೆಯುವವು.ಶಿವರಾತ್ರಿಯ ಮಾರನೆಯ ದಿನ ಪಾರಣೆಯನ್ನು
ಮಾಡಿ ಶಿವರಾತ್ರಿ ಹಬ್ಬವನ್ನು ಆಚರಿಸುವರು.
ಶಿವರಾತ್ರಿಹಬ್ಬದಂದುಭಕ್ತರುಶಿವನದೇವಾಲಯ
ಗಳಿಗೆಹೋಗಿಶಿವನದರ್ಶನಮಾಡಿಧನ್ಯರಾಗುವರು.
ಶಿವರಾತ್ರಿಹಬ್ಬದಂದು ಎಲ್ಲರಿಗೂಸನ್ಮಂಗಳವನ್ನು ಕರುಣಿಸುವಂತೆ ಪರಮೇಶ್ವರನಲ್ಲಿ ಭಕ್ತಿಯಿಂದ
ಪ್ರಾರ್ಥನೆ ಮಾಡೋಣ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...