Sunday, May 3, 2026
Sunday, May 3, 2026

Town Municipal Councils Shikaripura ಶಿಕಾರಿಪುರದ ನಾಗರಿಕರು ಎ & ಬಿ ಖಾತಾ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

Date:

Town Municipal Councils Shikaripura ಮಾಹಿತಿ ಶಿಕಾರಿಪುರ ಪುರಸಭೆ ವ್ಯಾಪ್ತಿಯಲ್ಲಿ ದಿ: 10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪುರಸಭೆ ಕಚೇರಿಯನ್ನು ಸಂಪರ್ಕಿಸುವಂತೆ ಶಿಕಾರಿಪುರ ಪುರಸಭೆ ತಿಳಿಸಿದೆ.

ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ಮೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ. ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನ ಬಿಡುಗಡೆ ಪತ್ರ. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿ ಮತ್ತು ಕಟ್ಟಡವಿದ್ದಲ್ಲಿ ವಿದ್ಯುಚ್ಛಕ್ತಿ ಬಿಲ್ ಪ್ರತಿಗಳನ್ನು ಸಲ್ಲಿಸುವುದು.
Town Municipal Councils Shikaripura ಬಿ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ದಿ: 10/09/2024ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸುವುದು.
ಈ ಪ್ರಕಟಣೆ ದಿನಾಂಕದಿಂದ ಮೂರು ತಿಂಗಳೊಳಗೆ ದಾಖಲೆಗಳನ್ನು ಸಲ್ಲಿಸಿ ಬಿ-ಖಾತೆಯನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿಕಾರಿಪುರ ಪುರಸಭೆ ಕಚೇರಿಯ ಸಹಾಯವಾಣಿ ಸಂ.: 08187-222221 ನ್ನು ಅಥವಾ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...