Monday, August 31, 2026
Monday, August 31, 2026

Town Municipal Councils Shikaripura ಶಿಕಾರಿಪುರದ ನಾಗರಿಕರು ಎ & ಬಿ ಖಾತಾ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

Date:

Town Municipal Councils Shikaripura ಮಾಹಿತಿ ಶಿಕಾರಿಪುರ ಪುರಸಭೆ ವ್ಯಾಪ್ತಿಯಲ್ಲಿ ದಿ: 10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪುರಸಭೆ ಕಚೇರಿಯನ್ನು ಸಂಪರ್ಕಿಸುವಂತೆ ಶಿಕಾರಿಪುರ ಪುರಸಭೆ ತಿಳಿಸಿದೆ.

ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ಮೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ. ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನ ಬಿಡುಗಡೆ ಪತ್ರ. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿ ಮತ್ತು ಕಟ್ಟಡವಿದ್ದಲ್ಲಿ ವಿದ್ಯುಚ್ಛಕ್ತಿ ಬಿಲ್ ಪ್ರತಿಗಳನ್ನು ಸಲ್ಲಿಸುವುದು.
Town Municipal Councils Shikaripura ಬಿ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ದಿ: 10/09/2024ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸುವುದು.
ಈ ಪ್ರಕಟಣೆ ದಿನಾಂಕದಿಂದ ಮೂರು ತಿಂಗಳೊಳಗೆ ದಾಖಲೆಗಳನ್ನು ಸಲ್ಲಿಸಿ ಬಿ-ಖಾತೆಯನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿಕಾರಿಪುರ ಪುರಸಭೆ ಕಚೇರಿಯ ಸಹಾಯವಾಣಿ ಸಂ.: 08187-222221 ನ್ನು ಅಥವಾ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...

Shivamogga News ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ ಸ್ಫೂರ್ತಿ ರೂಢಿಸಿಕೊಳ್ಳಬೇಕು: ಶ್ರೀ ಚಂದ್ರಪ್ಪ ಎಸ್. ಗುಂಡಪಲ್ಲಿ

Shivamogga News ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡಾ...