Monday, December 15, 2025
Monday, December 15, 2025

Ramesh Begar ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದಲ್ಲಿ ರಮೇಶ್ ಬೇಗಾರ್ ಗೆ ಸಾಧಕ ಸನ್ಮಾನ

Date:

Ramesh Begar ಮಲೆನಾಡ ಸಾಂಸ್ಕೃತಿಕ ಅಸ್ಮಿತೆ ಯಾದ ಪ್ರಸಿದ್ಧ ಮತ್ತು ಬಹು ಕ್ಷೇತ್ರಗಳ ನಿರಂತರ ಸಾಧಕ , ಶೃಂಗೇರಿಯ ರಮೇಶ್ ಬೇಗಾರ್ ಇವರು ಇತ್ತೀಚಿಗೆ ಹೊನ್ನಾವರ ದ ಗುಣವಂತೆಯಲ್ಲಿ ನಡೆದ ಕೆರೆಮನೆ ಶಂಭು ಹೆಗ್ಡೆ ರಾಷ್ಟ್ರೀಯ ನಾಟ್ಯ ಉತ್ಸವ ದಲ್ಲಿ, ಸಾಂಸ್ಕೃತಿಕ ಸಂಘಟನ ಕ್ಷೇತ್ರದಿಂದ ಸಾಧಕ ಸನ್ಮಾನ ದ ಗೌರವಕ್ಕೆ ಪಾತ್ರರಾಗಿದ್ದಾರೆ.
9 ದಿನಗಳ ಕಾಲ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಲಾವಿದರ ವಿವಿಧ ಕಲಾ ಪ್ರದರ್ಶನ ದ ಈ ಪ್ರತಿಷ್ಟಿತ ವೇದಿಕೆಯಲ್ಲಿ ಪ್ರತೀ ದಿನವೂ ಕಲಾ ಕ್ಷೇತ್ರ ದಲ್ಲಿ ದುಡಿದ ಮಹನೀಯರನ್ನು ಗೌರವ ಸನ್ಮಾನ ದ ಮೂಲಕ ಕೆರೆಮನೆ ಶಂಭು ಹೆಗ್ಡೆ ಸ್ಮಾರಕವಾಗಿ ಗೌರವಿಸಲಾಗಿತ್ತು.
Ramesh Begar ರಂಗಭೂಮಿ, ಯಕ್ಷಗಾನ, ಕಿರುತೆರೆ ಮತ್ತು ಚಲನಚಿತ್ರ ಕ್ಷೇತ್ರ ದಲ್ಲಿ ಕಳೆದ 38 ವರ್ಷಗಳಿಂದ ಅನನ್ಯವಾಗಿ ತೊಡಗಿಕೊಂಡಿರುವ ರಮೇಶ್ ಬೇಗಾರ್ ತಾನು ಕೈಯಾಡಿಸಿದ ಎಲ್ಲಾ ಪ್ರಕಾರಗಳಲ್ಲೂ ಮೈಲಿಗಲ್ಲು ನೆಟ್ಟ ಪ್ರತಿಭಾಶಾಲಿ ಆಗಿದ್ದಾರೆ ಮಾತ್ರವಲ್ಲದೆ ಆ ಎಲ್ಲಾ ಕ್ಷೇತ್ರದ ಸಾಧನೆಗಾಗಿ ರಾಜ್ಯ ಮತ್ತು ವಿದೇಶ ದಲ್ಲೂ ವಿವಿಧ ಗೌರವಕ್ಕೆ ಪಾತ್ರರಾಗಿದ್ದಾರೆ.
ಈ ವರ್ಷ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿಯನ್ನೂ ಪಡೆದಿರುವ ಬೇಗಾರ್ ಯಕ್ಷಗಾನ ಅಕಾಡೆಮಿ ಗೆ 2 ಅವಧಿಯಲ್ಲಿ ಸದಸ್ಯರಾದ ಕೀರ್ತಿ ಹೊಂದಿದ್ದಾರೆ.
ಈ ಸಂದರ್ಭದಲ್ಲಿ ಪತ್ರಿಕೆಗೆ ಪ್ರತಿಕ್ರಿಯಿಸಿರುವ ರಮೇಶ್ ” ಯಕ್ಷಗಾನ ದ ಮೇರು ಸಾಧಕರಾದ ಮತ್ತು ಆ ಕಲೆಗೆ ಅಕಾಡೆಮಿಕ್ ಸ್ಪರ್ಶ ನೀಡಿದ ಪ್ರಯೋಗ ಶೀಲ ದಿಗ್ಗಜ ಶಂಭು ಹೆಗ್ಡೆ ಅವರ ಕರ್ಮ ಕ್ಷೇತ್ರ ದಲ್ಲೇ ಅವರ ಸ್ಮರಣೆಯ ಪ್ರಶಸ್ತಿ ಸ್ವೀಕರಿಸಿರುವುದು ಅಪಾರ ಹೆಮ್ಮೆ ತಂದಿದೆ ” ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...